ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆಗಿಳಿದಿರುವ ಲೋಕಾಯುಕ್ತ ತಂಡ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ರಾಜ್ಯದಲ್ಲಿ 11 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ರೇಡ್ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಬೆಂಗಳೂರು ಆರ್ ಟಿ ಒ ವ್ಯವಸ್ಥಾಪಕ ನಿರ್ದೇಶಕ ಕುಮಾರಸ್ವಾಮಿ, ಮಂಡ್ಯ ನಗರಪಾಲಿಕೆ ಮುಖ್ಯ ಆಡಳಿತಾಧಿಕಾರಿ ಸ್ವಾಮಿ, ಬೀದರ್ ನ ಇಂಜಿನಿಯರ್ ಪ್ರೇಮ್ ಸಿಂಗ್, ಕೃಷ್ಣ ಮೇಲ್ದಂಡೆ ಯೋಜನೆಯ ಇಂಜಿನಿಯರ್, ಮೈಸೂರು ರೆವೆನ್ಯೂ ಇನ್ಸ್ ಪೆಕ್ಟರ್ ರಾಮಸ್ವಾಮಿ, ಹೂಟಗಳ್ಳಿ ನಗರ ಪಾಲಿಕೆಯ ಇನ್ಸ್ ಪೆಕ್ಟರ್ ಸೇರಿದಂತೆ ಹಲವು ಅಧಿಕಾರಿಗಳ ಆಸ್ತಿ ಮೇಲೆ ನಿಗಾ ಇಟ್ಟಿರುವ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ತಲಾಷ್ ಮಾಡುತ್ತಿದ್ದಾರೆ.
ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನ ಎಫ್ ಡಿ ಎ ಲಕ್ಷ್ಮೀಪತಿ ಸಿಎನ್, ದಾವಣಗೆರೆ ಎಪಿಎಂಸಿ ನಿರ್ದೇಶಕ ಪ್ರಭು.ಜೆ, ಮೈಸೂರಿನ ಸಹಾಯಕ ಇಂಜಿನಿಯರ್ ಗಿರೀಶ್ ಡಿಎಂ ಸೇರಿದಂತೆ 11 ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾ ಅಧಿಕಾರಿಗಳು ಅಕ್ರಮ ಹಣ ಸಂಪಾದನೆ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…