ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆಗಿಳಿದಿರುವ ಲೋಕಾಯುಕ್ತ ತಂಡ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ರಾಜ್ಯದಲ್ಲಿ 11 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ರೇಡ್ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಬೆಂಗಳೂರು ಆರ್ ಟಿ ಒ ವ್ಯವಸ್ಥಾಪಕ ನಿರ್ದೇಶಕ ಕುಮಾರಸ್ವಾಮಿ, ಮಂಡ್ಯ ನಗರಪಾಲಿಕೆ ಮುಖ್ಯ ಆಡಳಿತಾಧಿಕಾರಿ ಸ್ವಾಮಿ, ಬೀದರ್ ನ ಇಂಜಿನಿಯರ್ ಪ್ರೇಮ್ ಸಿಂಗ್, ಕೃಷ್ಣ ಮೇಲ್ದಂಡೆ ಯೋಜನೆಯ ಇಂಜಿನಿಯರ್, ಮೈಸೂರು ರೆವೆನ್ಯೂ ಇನ್ಸ್ ಪೆಕ್ಟರ್ ರಾಮಸ್ವಾಮಿ, ಹೂಟಗಳ್ಳಿ ನಗರ ಪಾಲಿಕೆಯ ಇನ್ಸ್ ಪೆಕ್ಟರ್ ಸೇರಿದಂತೆ ಹಲವು ಅಧಿಕಾರಿಗಳ ಆಸ್ತಿ ಮೇಲೆ ನಿಗಾ ಇಟ್ಟಿರುವ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ತಲಾಷ್ ಮಾಡುತ್ತಿದ್ದಾರೆ.
ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನ ಎಫ್ ಡಿ ಎ ಲಕ್ಷ್ಮೀಪತಿ ಸಿಎನ್, ದಾವಣಗೆರೆ ಎಪಿಎಂಸಿ ನಿರ್ದೇಶಕ ಪ್ರಭು.ಜೆ, ಮೈಸೂರಿನ ಸಹಾಯಕ ಇಂಜಿನಿಯರ್ ಗಿರೀಶ್ ಡಿಎಂ ಸೇರಿದಂತೆ 11 ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾ ಅಧಿಕಾರಿಗಳು ಅಕ್ರಮ ಹಣ ಸಂಪಾದನೆ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…