ಬೆಳ್ಳಂಬೆಳಗ್ಗೆ ಮಾಕಳಿ ರೈಲ್ವೆ ನಿಲ್ದಾಣದ ಹೆದ್ದಾರಿಯಲ್ಲಿ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ರೈಲ್ವೆ ನಿಲ್ದಾಣ ಮೂಲಕ‌ ಹಾದುಹೋಗಿರುವ ಹಿಂದೂಪುರ- ಯಲಹಂಕ ಹೆದ್ದಾರಿಯಲ್ಲಿ ಸುಮಾರು ಎರಡು ದಿನಗಳಿಂದ ಕೆಟ್ಟು ನಿಂತಿದ್ದ ಕಂಬಿ ಹೊತ್ತ ಲಾರಿಗೆ ಖಾಸಗಿ ಕಂಪನಿ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿರುವ ಘಟನೆ ಇಂದು ಮುಂಜಾನೆ ಸುಮಾರು 5 ಗಂಟೆಯಲ್ಲಿ ನಡೆದಿದೆ.

ಮನೆ‌ ಕಟ್ಟಡ ನಿರ್ಮಾಣಕ್ಕೆ ಬಳಸುವ ಕಬ್ಬಿಣದ ಕಂಬಿ ಹೊತ್ತಿರುವ ಲಾರಿ ಹಿಂದೂಪುರದಿಂದ ಬೆಂಗಳೂರು ಕಡೆ ಬರುವ ವೇಳೆ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಎರಡು ದಿನಗಳಿಂದ ಕೆಟ್ಟು ನಿಂತಿರುತ್ತದೆ.‌ ಮಿನಿ ಬಸ್ಸೊಂದು ಇಂದು ಬೆಳಗಿನ ಜಾವ ಸುಮಾರು 5 ಗಂಟೆಯಲ್ಲಿ ಗೌರಿಬಿದನೂರಿನಿಂದ ದೊಡ್ಡಬಳ್ಳಾಪುರ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಕರೆತರುವ ವೇಳೆ ಹಿಬಂದಿಯಿಂದ ಕಂಬಿ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ…

ಬಸ್ಸಿನಲ್ಲಿದ್ದ ಡ್ರೈವರ್, ಹಲವು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ… ಸದ್ಯ‌ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಡಿಕ್ಕಿ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

2 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

3 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

14 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

16 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago