ಬೆಳ್ಳಂಬೆಳಗ್ಗೆ ಮಾಕಳಿ ರೈಲ್ವೆ ನಿಲ್ದಾಣದ ಹೆದ್ದಾರಿಯಲ್ಲಿ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ರೈಲ್ವೆ ನಿಲ್ದಾಣ ಮೂಲಕ‌ ಹಾದುಹೋಗಿರುವ ಹಿಂದೂಪುರ- ಯಲಹಂಕ ಹೆದ್ದಾರಿಯಲ್ಲಿ ಸುಮಾರು ಎರಡು ದಿನಗಳಿಂದ ಕೆಟ್ಟು ನಿಂತಿದ್ದ ಕಂಬಿ ಹೊತ್ತ ಲಾರಿಗೆ ಖಾಸಗಿ ಕಂಪನಿ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿರುವ ಘಟನೆ ಇಂದು ಮುಂಜಾನೆ ಸುಮಾರು 5 ಗಂಟೆಯಲ್ಲಿ ನಡೆದಿದೆ.

ಮನೆ‌ ಕಟ್ಟಡ ನಿರ್ಮಾಣಕ್ಕೆ ಬಳಸುವ ಕಬ್ಬಿಣದ ಕಂಬಿ ಹೊತ್ತಿರುವ ಲಾರಿ ಹಿಂದೂಪುರದಿಂದ ಬೆಂಗಳೂರು ಕಡೆ ಬರುವ ವೇಳೆ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಎರಡು ದಿನಗಳಿಂದ ಕೆಟ್ಟು ನಿಂತಿರುತ್ತದೆ.‌ ಮಿನಿ ಬಸ್ಸೊಂದು ಇಂದು ಬೆಳಗಿನ ಜಾವ ಸುಮಾರು 5 ಗಂಟೆಯಲ್ಲಿ ಗೌರಿಬಿದನೂರಿನಿಂದ ದೊಡ್ಡಬಳ್ಳಾಪುರ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಕರೆತರುವ ವೇಳೆ ಹಿಬಂದಿಯಿಂದ ಕಂಬಿ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ…

ಬಸ್ಸಿನಲ್ಲಿದ್ದ ಡ್ರೈವರ್, ಹಲವು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ… ಸದ್ಯ‌ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಡಿಕ್ಕಿ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

4 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

8 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

8 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

10 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

12 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

1 day ago