ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸುವಲ್ಲಿ ನಿರತರಾಗಿದ್ದಾರೆ.
ಬೆಂಗಳೂರು ನಗರದಲ್ಲಿ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
1.ತುಮಕೂರು- ಕೆಐಎಡಿಬಿ ಇಲಾಖೆ ಆಪರೇಟಿಂಗ್ ಆಫೀಸರ್
2.ಬೆಂಗಳೂರು ಗ್ರಾ- ಆರ್ ಸಿದ್ದಪ್ಪ ಸೀನಿಯರ್ ಪಶುವೈದ್ಯ- ದೊಡ್ಡಬೈಲವಂಗಲ ದೊಡ್ಡಬಳ್ಳಾಪುರ
3.ಬೆಂಗಳೂರು ಗ್ರಾ- ಕೆ ನರಸಿಂಹ ಮೂರ್ತಿ ಪೌರಾಡಳಿತ ಆಯುಕ್ತ ಹೆಬ್ಬಗೋಡಿ
4.ಯಾದಗಿರಿ- ಬಲವಂತ್ ಜಿಲ್ಲಾ ಪಂಚಾಯತ್ ಯಾದಗಿರಿ ಪ್ರಾಜೆಕ್ಟ್
5.ಬೆಂಗಳೂರು ನಗರ- ರಮೇಶ್ ಕುಮಾರ್ ಜಾಯಿಂಟ್ ಕಮಿಷನರ್ ಕಮಷಿಯಲ್ ಟ್ಯಾಕ್ಸ್
6.ಬೆಂಗಳೂರು ನಗರ- ಬಿ ವಿ ರಾಜ FDA KDB LAND acquisition
7.ಶಿವಮೊಗ್ಗ- ನಾಗೇಶ್ ಬಿ- ಅಧ್ಯಕ್ಷ ಅಂತರಗಂಗೆ ಗ್ರಾ.ಪಂ. ಭದ್ರವತಿ
8.ಬೆಂಗಳೂರು ನಗರ- ಅಥ್ತಾರ್ ಅಲಿ- ಡೆಪ್ಯೂಟಿ ಕಂಟ್ರೋಲರ್ ಲೀಗಲ್ ಭೂ ವಿಜ್ಞಾನ
9.ಶಿವಮೊಗ್ಗ- ಪ್ರಕಾಶ್ ಡೆಪ್ಯೂಟಿ ಡೈರೆಕ್ಟರ್ ಆರ್ಟಿಕಲ್ಚರ್ ಶಿವಮೊಗ್ಗ
10.ಬೆಂಗಳೂರು ನಗರ-ಚೇತನ್ ಕುಮಾರ್ ಕಾರ್ಮಿಕ ಇಲಾಖಾಧಿಕಾರಿ ಮಂಡ್ಯ ವಿಭಾಗ
11.ಬೆಂಗಳೂರು ನಗರ – ಆನಂದ್ ಸಿಎಲ್- ಆಯುಕ್ತ ಮಂಗಳೂರು ಮಹಾನಗರ ಪಾಲೀಕೆ
12.ಬೆಂಗಳೂರ ನಗರ- ಮಂಜುನಾಥ್ TR- ಫಸ್ಟ್ ಡಿವಿಜನ್ ಅಸಿಸ್ಟೆಂಟ್ (FDA) ಬೆಂಗಳೂರು ಉತ್ತರ ವಿಭಾಗ, ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.