
ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನನ್ನು ಕೊ*ಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ…
ಯೋಗೇಶ್(35) ಮೃತ ವ್ಯಕ್ತಿ.
ಮೃತ ಯೋಗೇಶನ ಅಣ್ಣ ಲಿಂಗರಾಜ, ಅಣ್ಣನ ಮಕ್ಕಳಾದ ಭರತ್, ದರ್ಶನ್ ರಿಂದ ಯೋಗೇಶ್ ಹ*ತ್ಯೆಯಾಗಿದ್ದಾನೆ ಎಂದು ತಿಳಿದುಬಂದಿದೆ…
ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊ*ಲೆ ಮಾಡಲಾಗಿದೆ..

ಕೊ*ಲೆ ಬಳಿಕ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.
ಆಸ್ತಿಗಾಗಿ ಸಹೋದರರ ನಡುವೆ ಆಗಿಂದಾಗ್ಗೆ ನಡೆಯುತ್ತಿದ್ದ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.. ಇಂದು ಜಗಳ ವಿಕೋಪಕ್ಕೆ ತಿರುಗಿ ಹ*ತ್ಯೆಯಲ್ಲಿ ಅಂತ್ಯವಾಗಿದೆ.
ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಕೆರಗೋಡು ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ…