Categories: Crime

ಬೆಳ್ಳಂಬೆಳಿಗ್ಗೆ ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನ ಕೊ*ಲೆ

ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನನ್ನು ಕೊ*ಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ…

ಯೋಗೇಶ್(35) ಮೃತ ವ್ಯಕ್ತಿ.

ಮೃತ ಯೋಗೇಶನ ಅಣ್ಣ ಲಿಂಗರಾಜ, ಅಣ್ಣನ ಮಕ್ಕಳಾದ ಭರತ್, ದರ್ಶನ್ ರಿಂದ ಯೋಗೇಶ್ ಹ*ತ್ಯೆಯಾಗಿದ್ದಾನೆ ಎಂದು ತಿಳಿದುಬಂದಿದೆ…

ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊ*ಲೆ ಮಾಡಲಾಗಿದೆ..

ಕೊ*ಲೆ ಬಳಿಕ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.

ಆಸ್ತಿಗಾಗಿ ಸಹೋದರರ ನಡುವೆ ಆಗಿಂದಾಗ್ಗೆ ನಡೆಯುತ್ತಿದ್ದ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.. ಇಂದು ಜಗಳ ವಿಕೋಪಕ್ಕೆ ತಿರುಗಿ ಹ*ತ್ಯೆಯಲ್ಲಿ ಅಂತ್ಯವಾಗಿದೆ.

ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಕೆರಗೋಡು ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ…

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

4 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

15 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

16 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago