ಬೆಳ್ಳಂಬೆಳಗ್ಗೆ ಚಿಕ್ಕಪ್ಪನಿಂದಲೇ ಅಣ್ಣನ ಮಗನ ಮೇಲೆ ಶೂಟೌಟ್ ನಡೆದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕು ಹಂಪಸಂದ್ರ ಗ್ರಾಮದಲ್ಲಿ ನಡೆದಿದೆ.
ನಜೀರ್ ಅಹ್ಮದ್ (60) ಕೊಲೆಯಾದ ದುರ್ದೈವಿ.
ಬಶೀರ್ ಅಹ್ಮದ್ (66) ಪಿಸ್ತೂಲ್ ನಿಂದ ಗುಂಡು ಹಾರಿಸಿ ಕೊಲೆ ಮಾಡಿದ ಆರೋಪಿ.
ಅಣ್ಣ ಮಾಬೂಸಾಬಿ ಮೇಲೂ ಮಾರಕಾಸ್ತ್ರದಿಂದ ದಾಳಿ ನಡೆಸಲಾಗಿದೆ. ಗಂಭೀರ ಗಾಯಗೊಂಡ ಮಾಬೂಸಾಬಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಲೆ ಆರೋಪಿ ಬಶೀರ್ ಅಹ್ಮದ್ ಸೌದಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ಊರಿಗೆ ಬಂದಿದ್ದ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಬಶೀರ್ ಅಹ್ಮದ್ ನನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಮುಂಜಾನೆ ನಮಾಜ್ ಗೆ ತೆರಳುವ ವೇಳೆ ದುರಂತ ನಡೆದಿದೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…