ಬೆಸ್ಕಾಂನಿಂದ ಇವಿ ಮೂಲಸೌಕರ್ಯಕ್ಕಾಗಿ ದೇಶದ ಮೊದಲ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್‌ನ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಹಸಿರು ಚಲನಶೀಲತೆ ಉಪಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬೆಸ್ಕಾಂ ದೇಶದಲ್ಲೇ ಮೊದಲ ಬಾರಿಗೆ ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆ ಹಾಗೂ ತ್ವರಿತ ವಿದ್ಯುತ್‌ ಸಂಪರ್ಕಕ್ಕೆ ಏಕ ಗವಾಕ್ಷಿ ವ್ಯವಸ್ಥೆಯನ್ನು ಹೊಂದಿರುವ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್ ಅನ್ನು ಬಿಡುಗಡೆಮಾಡಿದೆ. ಈ ಡಿಜಿಟಲ್ ವೇದಿಕೆ ರಾಜ್ಯಾದ್ಯಂತ ಇವಿ ಮೂಲಸೌಕರ್ಯದ ಅಭಿವೃದ್ಧಿಗೆ ವೇಗ ನೀಡುವ ಜೊತೆಗೆ ಸ್ವಚ್ಛ ಚಲನಶೀಲತೆಯನ್ನು ಉತ್ತೇಜಿಸುವ ಗುರಿ ಹೊಂದಿದೆ.

ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಇತ್ತೀಚೆಗೆ ಬೆಸ್ಕಾಂ ನಿಗಮ ಕಚೇರಿಯಲ್ಲಿ ಈ ವಿಶಿಷ್ಟ ಪೋರ್ಟಲ್‌ಗೆ ಚಾಲನೆ ನೀಡಿದರು. ಖಾಸಗಿ ಭೂಮಾಲೀಕರು, ಸರ್ಕಾರಿ ಇಲಾಖೆಗಳು, ಖಾಸಗಿ ಸಂಸ್ಥೆಗಳು ಹಾಗೂ ಚಾರ್ಜ್ ಸ್ಟೇಷನ್‌ ಆಪರೇಟರ್‌ಗಳು ರಾಜ್ಯಾದ್ಯಂತ ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಹಾಗೂ ಬೆಸ್ಕಾಂನಿಂದ ವಿದ್ಯುತ್‌ ಸಂಪರ್ಕವನ್ನು ತ್ವರಿತವಾಗಿ ಪಡೆಯಲು ಏಕ ಗವಾಕ್ಷಿ ವ್ಯವಸ್ಥೆಯನ್ನು ಪೋರ್ಟಲ್‌ ನಲ್ಲಿ ಕಲ್ಪಿಸಲಾಗಿದೆ.

ನಗರ ಹಾಗೂ ಹೆದ್ದಾರಿ ಪ್ರದೇಶಗಳಲ್ಲಿ ಸಾರ್ವಜನಿಕ ಇವಿ ಮೂಲಸೌಕರ್ಯಗಳನ್ನು ಅತ್ಯಂತ ತ್ವರಿತಗತಿಯಲ್ಲಿ  ಸ್ಥಾಪಿಸಲು ಭೂಮಾಲೀಕರು ಮತ್ತು ಚಾರ್ಜಿಂಗ್ ಆಪರೇಟರ್‌ಗಳಿಗೆ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್‌  ನೆರವಾಗಲಿದೆ. ಇವಿ ಹಬ್‌ಗಳ ನಿರ್ಮಾಣವನ್ನು ಉತ್ತೇಜಿಸುವ ಸಲುವಾಗಿ  ರಾಷ್ಟ್ರೀಯ ಹೆದ್ದಾರಿ, ಇವಿ ವಿಭಾಗ (NHEV) ಈ ಉಪಕ್ರಮದಲ್ಲಿ ಬೆಸ್ಕಾಂ ಜೊತೆ ಕೈಜೋಡಿಸಿದೆ. ಸ್ವಚ್ಛ ಚಲನಶೀಲತೆ, ಸಾರ್ವಜನಿಕ–ಖಾಸಗಿ ಸಹಭಾಗಿತ್ವ ಮತ್ತು ವಿಸ್ತರಣೆಗೆ ಅನುಕೂಲಕರವಾದ ಇವಿ ಮೂಲಸೌಕರ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗಿದೆ.

ಈ ಪೋರ್ಟಲ್‌  ಮೂಲಕ ಭೂಮಾಲೀಕರು ತಮ್ಮ ಭೂಮಿಯನ್ನು ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗೆ ಆದಾಯ ಹಂಚಿಕೆ ಆಧಾರದ ಮೇಲೆ ಬಾಡಿಗೆಗೆ ಅಥವಾ ಭೋಗ್ಯಕ್ಕೆ ನೀಡಲು ಅವಕಾಶ ಇದೆ. ಅದೇ ರೀತಿ ವಿತರಕರು ಮತ್ತು ಚಾರ್ಜ್ ಪಾಯಿಂಟ್ ಆಪರೇಟರ್‌ಗಳು ಇವಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ, ಕಾರ್ಯಾಚರಣೆ ಹಾಗೂ ನಿರ್ವಹಣೆಯನ್ನು ವಹಿಸಿಕೊಳ್ಳಬಹುದು. ಏಕ-ಗವಾಕ್ಷಿ ಡಿಜಿಟಲ್ ಡ್ಯಾಶ್‌ಬೋರ್ಡ್ ಮೂಲಕ ವಿದ್ಯುತ್ ಸಂಪರ್ಕವನ್ನು ಸಮಯಕ್ಕೆ ಸರಿಯಾಗಿ ಒದಗಿಸಿ, ವಿಳಂಬವನ್ನು  ಕಡಿಮೆ ಮಾಡುವುದರ ಜೊತೆಗೆ  ಎಲ್ಲಾ ಹಿತಾಸಕ್ತಿದಾರರ ನಡುವೆ ಸಮನ್ವಯ ಸಾಧಿಸಲು ನೆರವಾಗಲಿದೆ.

ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್, ಕರ್ನಾಟಕದಲ್ಲಿ ಬಲಿಷ್ಠ ಮತ್ತು ಭವಿಷ್ಯದ ಇವಿ ಪರಿಸರ ವ್ಯವಸ್ಥೆ ನಿರ್ಮಾಣದತ್ತ ಮಹತ್ವದ ಹೆಜ್ಜೆಯಾಗಿದೆ. ಭೂ ಸಂಗ್ರಾಹಕ ಹಾಗೂ ವಿದ್ಯುತ್ ಪೂರೈಕೆ  ಪ್ರಕ್ರಿಯೆಯನ್ನು ಸರಳಗೊಳಿಸುವ ಮೂಲಕ ಈ ಉಪಕ್ರಮವು ರಾಜ್ಯದ ಬದಲಾವಣೆಗೆ ಸಹಕಾರಿಯಾಗಿರುವ ಕಡಿಮೆ ಕಾರ್ಬನ್ ಆರ್ಥಿಕತೆಯತೆಯನ್ನು ಸಾಧಿಸಲಿದೆ ಹಾಗೂ ಸ್ಥಳೀಯ ಆರ್ಥಿಕ ಅವಕಾಶಗಳನ್ನು ಸೃಷ್ಟಿಸಿ, ಗ್ರಾಹಕರಿಗೆ ಇವಿ ಬಳಕೆಯನ್ನು ಉತ್ತೇಜಿಸಲಿದೆ.

ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್ ಬಿಡುಗಡೆಯು ಭವಿಷ್ಯದ  ಇವಿ ಮೂಲಸೌಕರ್ಯ ನಿರ್ಮಾಣದತ್ತ ಮಹತ್ವದ ಮೈಲಿಗಲ್ಲಾಗಿದೆ. ಇದು ಸ್ವಚ್ಛ ಚಲನಶೀಲತೆಯನ್ನು ಉತ್ತೇಜಿಸುವುದರ ಜೊತೆಗೆ ಸಾರ್ವಜನಿಕ–ಖಾಸಗಿ ಸಹಭಾಗಿತ್ವವನ್ನು ಬಲಪಡಿಸಿ, ಸ್ಥಳೀಯ ಸಮುದಾಯಗಳಿಗೆ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುತ್ತದೆ. ಇವಿ ಚಾರ್ಜಿಂಗ್ ಮತ್ತು ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಯನ್ನು ಸುಲಭಗೊಳಿಸುವ ಮೂಲಕ, ಈ ಉಪಕ್ರಮವು ಕರ್ನಾಟಕವನ್ನು ಕಡಿಮೆ ಕಾರ್ಬನ್ ಆರ್ಥಿಕತೆಯತ್ತ ಮುನ್ನಡೆಸಲು ಸಹಕಾರಿಯಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್. ಶಿವಶಂಕರ ತಿಳಿಸಿದರು.

*ಪೋರ್ಟಲ್‌ನ ಪ್ರಮುಖ  ಉದ್ದೇಶಗಳು* 

ಇವಿ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗೆ  ಭೂಮಿಯನ್ನು ಬಾಡಿಗೆಗೆ ನೀಡುವ ಅವಕಾಶಗಳಿಗೆ ಉತ್ತೇಜನ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಹಾಗೂ ಅನುಮೋದನಾ ಪ್ರಕ್ರಿಯೆ ಪ್ರಗತಿ ಪರಿಶೀಲನೆ

ಭೂಮಾಲೀಕರು ಸುಲಭವಾಗಿ ನೋಂದಣಿ ಮಾಡಿಕೊಂಡು ತಮ್ಮ ಭೂಮಿಯನ್ನು ಇವಿ ಚಾರ್ಜಿಂಗ್ ಮತ್ತು ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ನೀಡುವ ವ್ಯವಸ್ಥೆ

ವೆಂಡರ್ಸ್‌ ಹಾಗೂ ಚಾರ್ಜ್ ಸ್ಟೇಷನ್‌ ಆಪರೇಟರ್‌ಗಳು ಚಾರ್ಜಿಂಗ್ ಮತ್ತು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಿ ಹಾಗೂ ಅದರ ಕಾರ್ಯಾಚರಣೆಯನ್ನು ನಿರ್ವಹಿಸಬಹುದು.

ಪೋರ್ಟಲ್ ಮೂಲಕ ಬೆಸ್ಕಾಂ, ಚಾರ್ಜ್ ಸ್ಟೇಷನ್‌ ಆಪರೇಟರ್‌ಗಳೊಂದಿಗೆ ಸಂಪರ್ಕಿಸಿ ಇವಿ ಚಾರ್ಜಿಂಗ್ ಅಥವಾ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗೆ ಸಹಕಾರ ನೀಡಲಿದೆ.

ಭೂ ಮಾಲೀಕರು ಹಾಗೂ ಚಾರ್ಜ್ ಸ್ಟೇಷನ್‌ ಆಪರೇಟರ್‌ ಗಳು ಸ್ಥಳವನ್ನು ಅಂತಿಮಗೊಳಿಸಿ ಕಾರ್ಯಸಾಧನಾ ವರದಿಯನ್ನು ಪಡೆದ ನಂತರ, ಚಾರ್ಜಿಂಗ್‌ ಸ್ಟೇಷನ್‌ ಆಪರೇಟರ್‌ ಗಳು ಪೋರ್ಟ್‌ಲ್‌ ನ ಏಕ  ಗವಾಕ್ಷಿ ಡ್ಯಾಶ್‌ ಬೋರ್ಡ್‌ ಮೂಲಕ ವಿದ್ಯುತ್‌ ಸಂಪರ್ಕಕ್ಕೆ ಅರ್ಜಿ ಸಲ್ಲಿಸಬಹುದು. ಯಾವುದೇ ವಿಳಂಬವಿಲ್ಲದೆ, ವಿದ್ಯುತ್‌ ಸಂಪರ್ಕ ದೊರೆಯಲಿದೆ. ಅರ್ಜಿದಾರರು ಪೋರ್ಟಲ್‌ ಮೂಲಕ ತಮ್ಮ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು.

“ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್‌,  ಖಾಸಗಿ ಭೂಮಾಲಿಕರು, ಸರ್ಕಾರಿ ಇಲಾಖೆಗಳು ಹಾಗೂ ಖಾಸಗಿ ಸಂಸ್ಥೆಗಳು ತಮ್ಮ ಭೂಮಿಯನ್ನು ನೀಡಲು ಹಾಗೂ ಚಾರ್ಜಿಂಗ್ ಸ್ಟೇಷನ್‌ ಆಪರೇಟರ್‌ಗಳು ರಾಜ್ಯಾದ್ಯಂತ ಇವಿ ಚಾರ್ಜಿಂಗ್ ಮತ್ತು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಒಂದೇ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಆದಾಯ ಹಂಚಿಕೆ ಮಾದರಿಯಲ್ಲಿ ಭೂಮಿಯನ್ನು ಬಾಡಿಗೆಗೆ ನೀಡಲು ಇದು ಅವಕಾಶ ಕಲ್ಪಿಸುತ್ತದೆ,” ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ..

Ramesh Babu

Journalist

Recent Posts

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

10 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

10 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

10 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

18 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

20 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

1 day ago