Categories: ಕೋಲಾರ

ಬೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗಾಗಿ ಆಗ್ರಹ

ಕೋಲಾರ: ಬೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಗಾಳಿ ಮಳೆಯಿಂದ ಆಗುತ್ತಿರುವ ಸಮಸ್ಯೆಗಳಿಗೆ ಸ್ಪಂಧಿಸುವ ಜೊತೆಗೆ ಇಲಾಖೆಯಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಇಂಧನ ಸಚಿವರನ್ನು ಒತ್ತಾಯಿಸಿದರು.

ಗಡಿಭಾಗದ ಕಾಮಸಮುದ್ರ ಉಪ ವಿದ್ಯುತ್ ಕೇಂದ್ರದ ಮುಂದೆ ಮಾತನಾಡಿದ ರವರು ಜಿಲ್ಲಾಧ್ಯಂತ ವಿದ್ಯುತ್ ವಿತರಣಾ ಕಂಪನಿಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಸಮರ್ಪಕವಾಗಿ ವಿದ್ಯುತ್ ಸಮಸ್ಯೆ ಸೇವೆ ಮಾಡಲು ಸಾಧ್ಯವಾಗದೆ ಪರದಾಡುತ್ತಿದ್ದರೂ ಸಮಸ್ಯೆಯಲ್ಲಿ ಗಂಭೀರವಾಗಿ ಪರಿಗಣಿಸುವಲ್ಲಿ ಇಂಧನ ಸಚಿವರು ವಿಫಲವಾಗಿದ್ದಾರೆಂದು ಆಕ್ರೋಷ ವ್ಯಕ್ತಪಡಿಸಿದರು.

ಬೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಚಿನ್ನದ ಮೊಟ್ಟೆ ಇಡುವ ಇಲಾಖೆಯಾಗಿದೆ ಟ್ರಾರ್ನ್ಸ್ಫಾರಂನಿಂದ ಹಿಡಿದು ಆಯಿಲ್ ದಂದೆ, ಜೊತೆಗೆ ಹಳೆ ಕಂಬ ತಂತಿ ಪರಿವರ್ತಕಗಳನ್ನು ಮಾಹಿತಿ ಇಲ್ಲದೆ ಮಾರಾಟ ಮಾಡಿ ಕೋಟ್ಯಾಂತರ ರೂಪಾಯಿ ಹಗಲು ದರೋಡೆ ಮಾಡುತ್ತಿರುವ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡುತ್ತಿರುವ ಅಧಿಕಾರಿಗಳ ವಿರುದ್ದ ಕ್ರಮ ವಿಲ್ಲವೆ ಏಕೆ ಎಂದು ಪ್ರಶ್ನೆ ಮಾಡಿದರು.

ಮಳೆಗಾಲ ಆರಂಭದೊಂದಿಗೆ ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಪದೇ ಪದೇ ವ್ಯತ್ಯೆಯವಾಗುತ್ತಿದೆ. ಆಗಾಗಿ ವಿದ್ಯುತ್ ಕಡಿತವಾಗುತ್ತಿದ್ದು, ಗಾಳಿ ಮಳೆಯ ಕಾರಣಕ್ಕೆ ಬೆಸ್ಕಾಂಗೆ ನೂರಾರು ದೂರುಗಳು ರೈತರು ಹಾಗೂ ಜನ ಸಾಮಾನ್ಯರಿಂದ ಬರುತ್ತಿದ್ದರೂ ಸಮರ್ಪಕವಾಗಿ ನಿರ್ವಹಿಸಲಾಗದೆ ಗಾಳಿ ಮಳೆಗೆ ಬಿದ್ದಿರುವ ಕಂಬಗಳು ಸುಟ್ಟಿರುವ ಟ್ರಾರ್ನ್ಸ್ಫಾರಂಗಳು ಹಾಗೂ ತುಂಡಾಗಿರುವ ತಂತಿಗಳು ಮರಗಡಿಗಳನ್ನು ತೆರವುಗೊಳಿಸಲು ಅರಸಾಹಸ ಪಡುವ ಜೊತೆಗೆ ಸಿಬ್ಬಂದಿಗೆ ಒತ್ತಡ ಹೆಚ್ಚಾಗಿ ಆರೋಗ್ಯ ಕೆಡಿಸಿಕೊಳ್ಳುತ್ತಿದ್ದರೂ, ಸರ್ಕಾರಕ್ಕೆ ಕನಿಕರವಿಲ್ಲ ಎಂದು ಅಸಮದಾನ ವ್ಯಕ್ತಪಡಿಸಿದರು.

ತಾಲ್ಲೂಕು ಅಧ್ಯಕ್ಷ ಕದರಿನತ್ತ ಅಪ್ಪೋಜಿರಾವ್ ಮಾತನಾಡಿ ಅತಿಹೆಚ್ಚು ಅರಣ್ಯವಿರುವ ಗಡಿಭಾಗದಲ್ಲಿರುವ ಕಾಮಸಮುದ್ರ ವ್ಯಾಪ್ತಿಯಲ್ಲಿ ಮಳೆ ಬಂದರೆ ಮರಗಳ ಕೊಂಬೆಗಳು ಕಂಬಗಳ ಮೇಲೆ ಬಿದ್ದು ತಂತಿಗಳು ತುಂಡಾಗಿ ಟ್ರಾರ್ನ್ಸ್ಫಾರಂಗಳು ಸುಟ್ಟುಹೋಗಿ ಅದನ್ನು ತೆರವುಗೊಳಿಸಲು ಮೂರು ನಾಲ್ಕು ದಿನ ಬೇಕಾಗುತ್ತದೆ. ಇದರಿಂದ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿರುವ ಬೆಳೆ ಒಂದು ಕಡೆ ನಾಶವಾದರೆ ಮತ್ತೊಂದು ಕೊಡೆ ಕುಡಿಯುವ ನೀರಿಗೆ ಪರದಾಡಬೇಕಾದ ಪರಿಸ್ಥಿತಿ ಇರುವುದರಿಂದ ಜನ ಸಾಮಾನ್ಯರು ಇಲಾಖೆಗೆ ಇಡೀ ಶಾಪ ಹಾಕುವಂತಾಗಿದೆ.
ಸಿಬ್ಬಂದಿ ಕೊರತೆಯ ಕಾರಣಕ್ಕೆ ಹಾಲಿ ನೌಕರರಿಗೆ ಹೆಚ್ಚಿನ ಜವಾಬ್ದಾರಿ ನೀಡಿ ಪರಿಸ್ತಿತಿ ನಿಬಾಯಿಸಲಾಗುತ್ತಿದೆ. ಲೈನ್ ಮ್ಯಾನ್ ಮೀಟರ್ ರೀಡರ್, ಹಾಗೂ ಇಂಜಿನಿಯರ್‌ಗಳಿಂದ ನಿಗಧಿತ ಸಮಯಕ್ಕಿಂತ ಹೆಚ್ಚಿನ ಅವಧಿಯೊಳಗೆ ಕೆಲಸ ಮಾಡಲಾಗುತ್ತಿದೆ. ಇದರಿಂದ ಹಾಲಿ ಸಿಬ್ಬಂದಿ ಮೇಲೆ ಕಾರ್ಯಒತ್ತಡ ಎಚ್ಚಿ ಅವರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮವಾಗುತ್ತಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಬೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಇಂಧನ ಸಚಿವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮುನಿಕೃಷ್ಣ, ವಿಶ್ವ, ಸಂತೋಷ್, ಲಕ್ಷ್ಮಣ್ ಶ್ರೀರಾಮರೆಡ್ಡಿ, ಯಲ್ಲೋಜಿರಾವ್, ಕೃಷ್ಣಪ್ಪ, ಬಾಬುರಾವ್, ಮುನಿರಾಜು ಮುಂತಾದವರು ಇದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

11 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

12 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

13 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

13 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

20 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago