ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬೀಜಗಳ ದರ ಕಡಿಮೆ ಇದೆ- ಸಿಎಂ‌ ಸಿದ್ದರಾಮಯ್ಯ

2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ

ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ (Procurement Rates) ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ. ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯ ರಾಜ್ಯ ಬೀಜ ನಿ., ಕರ್ನಾಟಕ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಂಡು ಸರಬರಾಜು ಮಾಡುತ್ತವೆ‌ ಎಂದು ಹೇಳಿದ್ದಾರೆ.

ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ ಎಲ್‌-1 ದರವು ಶೇ.48.5, ಉದ್ದು ಬೆಳೆಯ ದರವು ಶೇ.37.72, ತೊಗರಿ ಬೆಳೆಯ ವಿವಿಧ ತಳಿಗಳ ಬಿತ್ತನೆ ಬೀಜಗಳ ದರದಲ್ಲಿ ಶೇ.28.29 ರಿಂದ 37.69ರಷ್ಟು ಮತ್ತು ಜೋಳದ ಬೆಳೆಯ ಎಲ್‌-1 ದರವು ಶೇ.7.66 ರಿಂದ ಶೇ.33.33ರಷ್ಟು ಹೆಚ್ಚಾಗಿರುತ್ತದೆ. ಬೀಜಗಳ ಖರೀದಿ ದರದಲ್ಲಿನ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿರುತ್ತದೆ ಎನ್ನುವುದು ಗಮನಾರ್ಹ ಅಂಶವಾಗಿದೆ ಎಂದು ತಿಳಿಸಿದ್ದಾರೆ.

ಇದಲ್ಲದೆ ಕೆಲ ಬಿತ್ತನೆ ಬೀಜದ ದರದಲ್ಲಿ ಇಳಿಕೆ ಹಾಗೂ ಯಥಾಸ್ಥಿತಿ ಕೂಡ ಕಂಡುಬಂದಿದೆ. 2024ರ ಮುಂಗಾರು ಹಂಗಾಮಿನ ಸೋಯಾಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ಎಲ್‌-1 ದರಗಳ ಹೋಲಿಕೆಯಲ್ಲಿ ಶೇ.8ರಷ್ಟು ಕಡಿತಗೊಂಡಿರುತ್ತದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರ ಕಳೆದ ಸಾಲಿನಷ್ಟೇ ಇದ್ದು ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹೇಳಿದ್ದಾರೆ.

ಬಿ.ಟಿ. ಹತ್ತಿ ಬಿತ್ತನೆ ಬೀಜಗಳನ್ನು ರಾಜ್ಯ ಸರ್ಕಾರದ ಇಲಾಖಾ ವತಿಯಿಂದ ರಿಯಾಯತಿ ದರದಲ್ಲಿ ವಿತರಣೆ ಮಾಡುತ್ತಿರುವುದಿಲ್ಲ. ಬಿ.ಟಿ. ಹತ್ತಿ ಬಿತ್ತನೆ ಬೀಜಗಳ ಗರಿಷ್ಠ ದರಗಳನ್ನು ಕೇಂದ್ರ ಸರ್ಕಾರದ ವತಿಯಿಂದಲೇ ನಿಗದಿಪಡಿಸಲಾಗುತ್ತದೆ. ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023ರ ಹೋಲಿಕೆಯಲ್ಲಿ ಈ ಬಾರಿ ಗರಿಷ್ಠ ಶೇ.48.50ರಷ್ಟಿದೆ. ಆದಾಗ್ಯೂ, ನೆರೆಯ ರಾಜ್ಯಗಳಲ್ಲಿನ ಪ್ರಸಕ್ತ ಸಾಲಿನ ಬಿತ್ತನೆ ಬೀಜಗಳ ದರಗಳ ಏರಿಕೆಯ ಹೋಲಿಕೆಯಲ್ಲಿ ರಾಜ್ಯದಲ್ಲಿನ ಬಿತ್ತನೆ ಬೀಜಗಳ ದರದ ಏರಿಕೆಯು ಕಡಿಮೆಯಾಗಿರುತ್ತದೆ.

ಉದಾಹರಣೆಗೆ ಮಹಾರಾಷ್ಟ್ರದಲ್ಲಿ ಸೋಯಾಅವರೆ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಎಲ್‌-1 ದರವು ರೂ.8500/- ನಿಗದಿಯಾಗಿದ್ದು ಕರ್ನಾಟಕದಲ್ಲಿ ಇದು ರೂ.7270/- ನಿಗದಿಯಾಗಿದೆ. ಅದೇ ರೀತಿ, ತೊಗರಿ ಬೆಳೆಗೆ ಮಹಾರಾಷ್ಟ್ರದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.25,000/- ಇದ್ದು ಕರ್ನಾಟಕದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.17,900/- ನಿಗದಿಪಡಿಸಲಾಗಿದೆ. ಹೆಸರು ಮತ್ತು ಜೋಳದ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಮಹಾರಾಷ್ಟ್ರದಲ್ಲಿ ಕ್ರಮವಾಗಿ ರೂ.23,500/- ರೂ. 14,000/- ಇದ್ದು ಕರ್ನಾಟಕದಲ್ಲಿ ಕ್ರಮವಾಗಿ ರೂ.18,600/- ರೂ.12,500/- ನಿಗದಿಪಡಿಸಲಾಗಿದೆ. ಈ ಹೋಲಿಕೆಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ದರಗಳು ಗಣನೀಯವಾಗಿ ಕಡಿಮೆ ಇರುವುದು ಕಂಡುಬರುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯು ಉತ್ತಮವಾಗಿ ಆಗುತ್ತಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಇದೇ ವೇಳೆ, ಬಿತ್ತನೆ ಬೀಜಗಳ ದರಗಳು ಏರಿಕೆಯಾಗಿರುವ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಈ ಕುರಿತು ಕೃಷಿ ಇಲಾಖೆಯು ಸ್ಪಷ್ಟೀಕರಣ ನೀಡಿದ್ದು ವಾಸ್ತವ ಸ್ಥಿತಿಯನ್ನು ವಿವರಿಸಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

8 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

16 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

21 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago