ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬೀಜಗಳ ದರ ಕಡಿಮೆ ಇದೆ- ಸಿಎಂ‌ ಸಿದ್ದರಾಮಯ್ಯ

2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ

ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ (Procurement Rates) ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ. ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯ ರಾಜ್ಯ ಬೀಜ ನಿ., ಕರ್ನಾಟಕ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಂಡು ಸರಬರಾಜು ಮಾಡುತ್ತವೆ‌ ಎಂದು ಹೇಳಿದ್ದಾರೆ.

ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ ಎಲ್‌-1 ದರವು ಶೇ.48.5, ಉದ್ದು ಬೆಳೆಯ ದರವು ಶೇ.37.72, ತೊಗರಿ ಬೆಳೆಯ ವಿವಿಧ ತಳಿಗಳ ಬಿತ್ತನೆ ಬೀಜಗಳ ದರದಲ್ಲಿ ಶೇ.28.29 ರಿಂದ 37.69ರಷ್ಟು ಮತ್ತು ಜೋಳದ ಬೆಳೆಯ ಎಲ್‌-1 ದರವು ಶೇ.7.66 ರಿಂದ ಶೇ.33.33ರಷ್ಟು ಹೆಚ್ಚಾಗಿರುತ್ತದೆ. ಬೀಜಗಳ ಖರೀದಿ ದರದಲ್ಲಿನ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿರುತ್ತದೆ ಎನ್ನುವುದು ಗಮನಾರ್ಹ ಅಂಶವಾಗಿದೆ ಎಂದು ತಿಳಿಸಿದ್ದಾರೆ.

ಇದಲ್ಲದೆ ಕೆಲ ಬಿತ್ತನೆ ಬೀಜದ ದರದಲ್ಲಿ ಇಳಿಕೆ ಹಾಗೂ ಯಥಾಸ್ಥಿತಿ ಕೂಡ ಕಂಡುಬಂದಿದೆ. 2024ರ ಮುಂಗಾರು ಹಂಗಾಮಿನ ಸೋಯಾಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ಎಲ್‌-1 ದರಗಳ ಹೋಲಿಕೆಯಲ್ಲಿ ಶೇ.8ರಷ್ಟು ಕಡಿತಗೊಂಡಿರುತ್ತದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರ ಕಳೆದ ಸಾಲಿನಷ್ಟೇ ಇದ್ದು ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹೇಳಿದ್ದಾರೆ.

ಬಿ.ಟಿ. ಹತ್ತಿ ಬಿತ್ತನೆ ಬೀಜಗಳನ್ನು ರಾಜ್ಯ ಸರ್ಕಾರದ ಇಲಾಖಾ ವತಿಯಿಂದ ರಿಯಾಯತಿ ದರದಲ್ಲಿ ವಿತರಣೆ ಮಾಡುತ್ತಿರುವುದಿಲ್ಲ. ಬಿ.ಟಿ. ಹತ್ತಿ ಬಿತ್ತನೆ ಬೀಜಗಳ ಗರಿಷ್ಠ ದರಗಳನ್ನು ಕೇಂದ್ರ ಸರ್ಕಾರದ ವತಿಯಿಂದಲೇ ನಿಗದಿಪಡಿಸಲಾಗುತ್ತದೆ. ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023ರ ಹೋಲಿಕೆಯಲ್ಲಿ ಈ ಬಾರಿ ಗರಿಷ್ಠ ಶೇ.48.50ರಷ್ಟಿದೆ. ಆದಾಗ್ಯೂ, ನೆರೆಯ ರಾಜ್ಯಗಳಲ್ಲಿನ ಪ್ರಸಕ್ತ ಸಾಲಿನ ಬಿತ್ತನೆ ಬೀಜಗಳ ದರಗಳ ಏರಿಕೆಯ ಹೋಲಿಕೆಯಲ್ಲಿ ರಾಜ್ಯದಲ್ಲಿನ ಬಿತ್ತನೆ ಬೀಜಗಳ ದರದ ಏರಿಕೆಯು ಕಡಿಮೆಯಾಗಿರುತ್ತದೆ.

ಉದಾಹರಣೆಗೆ ಮಹಾರಾಷ್ಟ್ರದಲ್ಲಿ ಸೋಯಾಅವರೆ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಎಲ್‌-1 ದರವು ರೂ.8500/- ನಿಗದಿಯಾಗಿದ್ದು ಕರ್ನಾಟಕದಲ್ಲಿ ಇದು ರೂ.7270/- ನಿಗದಿಯಾಗಿದೆ. ಅದೇ ರೀತಿ, ತೊಗರಿ ಬೆಳೆಗೆ ಮಹಾರಾಷ್ಟ್ರದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.25,000/- ಇದ್ದು ಕರ್ನಾಟಕದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.17,900/- ನಿಗದಿಪಡಿಸಲಾಗಿದೆ. ಹೆಸರು ಮತ್ತು ಜೋಳದ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಮಹಾರಾಷ್ಟ್ರದಲ್ಲಿ ಕ್ರಮವಾಗಿ ರೂ.23,500/- ರೂ. 14,000/- ಇದ್ದು ಕರ್ನಾಟಕದಲ್ಲಿ ಕ್ರಮವಾಗಿ ರೂ.18,600/- ರೂ.12,500/- ನಿಗದಿಪಡಿಸಲಾಗಿದೆ. ಈ ಹೋಲಿಕೆಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ದರಗಳು ಗಣನೀಯವಾಗಿ ಕಡಿಮೆ ಇರುವುದು ಕಂಡುಬರುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯು ಉತ್ತಮವಾಗಿ ಆಗುತ್ತಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಇದೇ ವೇಳೆ, ಬಿತ್ತನೆ ಬೀಜಗಳ ದರಗಳು ಏರಿಕೆಯಾಗಿರುವ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಈ ಕುರಿತು ಕೃಷಿ ಇಲಾಖೆಯು ಸ್ಪಷ್ಟೀಕರಣ ನೀಡಿದ್ದು ವಾಸ್ತವ ಸ್ಥಿತಿಯನ್ನು ವಿವರಿಸಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

26 minutes ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

31 minutes ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

5 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

7 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

8 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

21 hours ago