ರೈತರ ಆದಾಯ ದ್ವಿಗುಣವಾದಾಗ ಮಾತ್ರ ರೈತರಿಗೆ ಕೃಷಿ ಲಾಭದಾಯಕ ಉದ್ಯಮ ಆಗುತ್ತದೆ. ಆದರೆ ರೈತರ ಆದಾಯ ದ್ವಿಗುಣಗೊಳ್ಳಲು ಕೃಷಿಯಿಂದ ಮಾತ್ರ ಸಾಧ್ಯವಾಗೋದಿಲ್ಲ, ಹೆಚ್ಚು ಹೆಚ್ಚು ಕೃಷಿಗೆ ಸಂಬಂಧಿಸಿದ ಉಪಕಸುಬುಗಳನ್ನು ಅಳವಡಿಸಿಕೊಂಡಾಗ ಮಾತ್ರ ಆದಾಯ ದ್ವಿಗುಣ ಆಗುತ್ತದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ.ಸುರೇಶ್ ತಿಳಿಸಿದರು.
ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ 2023-24ನೇ ಸಾಲಿನ ಪೂರ್ವ ಮುಂಗಾರು ಕೃಷಿ ತಾಂತ್ರಿಕ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪಕಸುಬು ಬಗ್ಗೆ ರೈತರಿಗೆ ಅರಿವು ಮೂಡಿಸುವ ಸಲುವಾಗಿ ಸೆಕೆಂಡರಿ ಕೃಷಿ ನಿರ್ದೇಶನಾಲಯವನ್ನ ಸ್ಥಾಪನೆ ಮಾಡಲಾಗಿದೆ. ಈ ನಿರ್ದೇಶನಾಲಯವು ರೈತರಿಗೆ ಉಪಕಸುಬುನ್ನ ಕೃಷಿಯಲ್ಲಿ ಯಾವ ರೀತಿ ಅಳವಡಿಸಿಕೊಳ್ಳಬೇಕು, ಬೆಳೆ ಬೆಳೆಯುವುದು ಹೇಗೆ, ಬೆಳೆಯನ್ನು ಯಾವ ರೀತಿ ಸಂಸ್ಕರಣೆ ಮಾಡುವುದು, ಸಂಸ್ಕರಣೆ ಮಾಡಿರುವುದನ್ನ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಕೌಶಲ್ಯತೆಯನ್ನ ರೈತರಿಗೆ ಕಲ್ಪಿಸಿ, ಕಲಿಸಿಕೊಡುತ್ತದೆ. ಇದರ ಸದುಪಯೋಗವನ್ನು ರೈತರು ಪಡೆದು ತಮ್ಮ ಆದಾಯವನ್ನು ದ್ವಿಗುಣ ಮಾಡಿಕೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.
ನಂತರ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಲಲಿತಾ ರೆಡ್ಡಿ ಮಾತನಾಡಿ, ಈಗಾಗಲೇ ಮುಂಗಾರು ಪ್ರಾರಂಭವಾಗಿದೆ. ರೈತರಿಗೆ ಬೇಕಾದಂತಹ ಬಿತ್ತನೆ ಬೀಜ, ರಸ ಗೊಬ್ಬರ ಸೇರಿದಂತೆ ಕೃಷಿ ಪರಿಕರಗಳ ದಾಸ್ತಾನು ಮಾಡಲಾಗಿದೆ. ಸಕಾಲಕ್ಕೆ ರೈತರಿಗೆ ಅನುಕೂಲವಾಗುವಂತೆ ಕೃಷಿ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದರು.
ಹಾಗೇ ನಮ್ಮ ಕೃಷಿ ವಿಜ್ಞಾನಿಗಳು ರೈತರ ಬಳಿ ಹೋಗಿ ಕೃಷಿ ಚಟುವಟಿಕೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳುವುದು, ಬೆಳೆ ಸಂರಕ್ಷಣೆ, ಸಂಸ್ಕರಣೆ, ನಿರ್ವಹಣೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ತರಬೇತಿಯನ್ನು ನೀಡುವ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದಿಂದ ಬಿಡುಗಡೆಗೊಂಡ ನೂತನ ತಳಿಗಳು ಮತ್ತು ತಂತ್ರಜ್ಞಾನ ಬಗ್ಗೆ ರೈತರಿಗೆ ಅರಿವು, ಮುಂಗಾರು ಹಂಗಾಮಿನಲ್ಲಿ ಮಣ್ಣು ಮತ್ತು ತೇವಾಂಶ ಸಂಸ್ಕರಣೆ ಕ್ರಮ, ವಿವಿಧ ಬೆಳೆಗಳ ಬೇಸಾಯ ಕ್ರಮ, ಸಸ್ಯ ಸಂಸ್ಕರಣೆ ಕ್ರಮ, ರಾಷ್ಟ್ರೀಯ ಬೀಜ ಪ್ರಾಯೋಜನೆ, ಕೃಷಿ ವಸ್ತು ಪ್ರದರ್ಶನ, ಬೀಜ ಮಾರಾಟ ಸೇರಿದಂತೆ ಇತರೆ ರೈತ ಸ್ನೇಹಿ ಮಾಹಿತಿ ಒದಗಿಸಲಾಗಿತ್ತು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…