ರೈತರ ಆದಾಯ ದ್ವಿಗುಣವಾದಾಗ ಮಾತ್ರ ರೈತರಿಗೆ ಕೃಷಿ ಲಾಭದಾಯಕ ಉದ್ಯಮ ಆಗುತ್ತದೆ. ಆದರೆ ರೈತರ ಆದಾಯ ದ್ವಿಗುಣಗೊಳ್ಳಲು ಕೃಷಿಯಿಂದ ಮಾತ್ರ ಸಾಧ್ಯವಾಗೋದಿಲ್ಲ, ಹೆಚ್ಚು ಹೆಚ್ಚು ಕೃಷಿಗೆ ಸಂಬಂಧಿಸಿದ ಉಪಕಸುಬುಗಳನ್ನು ಅಳವಡಿಸಿಕೊಂಡಾಗ ಮಾತ್ರ ಆದಾಯ ದ್ವಿಗುಣ ಆಗುತ್ತದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ.ಸುರೇಶ್ ತಿಳಿಸಿದರು.
ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ 2023-24ನೇ ಸಾಲಿನ ಪೂರ್ವ ಮುಂಗಾರು ಕೃಷಿ ತಾಂತ್ರಿಕ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪಕಸುಬು ಬಗ್ಗೆ ರೈತರಿಗೆ ಅರಿವು ಮೂಡಿಸುವ ಸಲುವಾಗಿ ಸೆಕೆಂಡರಿ ಕೃಷಿ ನಿರ್ದೇಶನಾಲಯವನ್ನ ಸ್ಥಾಪನೆ ಮಾಡಲಾಗಿದೆ. ಈ ನಿರ್ದೇಶನಾಲಯವು ರೈತರಿಗೆ ಉಪಕಸುಬುನ್ನ ಕೃಷಿಯಲ್ಲಿ ಯಾವ ರೀತಿ ಅಳವಡಿಸಿಕೊಳ್ಳಬೇಕು, ಬೆಳೆ ಬೆಳೆಯುವುದು ಹೇಗೆ, ಬೆಳೆಯನ್ನು ಯಾವ ರೀತಿ ಸಂಸ್ಕರಣೆ ಮಾಡುವುದು, ಸಂಸ್ಕರಣೆ ಮಾಡಿರುವುದನ್ನ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಕೌಶಲ್ಯತೆಯನ್ನ ರೈತರಿಗೆ ಕಲ್ಪಿಸಿ, ಕಲಿಸಿಕೊಡುತ್ತದೆ. ಇದರ ಸದುಪಯೋಗವನ್ನು ರೈತರು ಪಡೆದು ತಮ್ಮ ಆದಾಯವನ್ನು ದ್ವಿಗುಣ ಮಾಡಿಕೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.
ನಂತರ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಲಲಿತಾ ರೆಡ್ಡಿ ಮಾತನಾಡಿ, ಈಗಾಗಲೇ ಮುಂಗಾರು ಪ್ರಾರಂಭವಾಗಿದೆ. ರೈತರಿಗೆ ಬೇಕಾದಂತಹ ಬಿತ್ತನೆ ಬೀಜ, ರಸ ಗೊಬ್ಬರ ಸೇರಿದಂತೆ ಕೃಷಿ ಪರಿಕರಗಳ ದಾಸ್ತಾನು ಮಾಡಲಾಗಿದೆ. ಸಕಾಲಕ್ಕೆ ರೈತರಿಗೆ ಅನುಕೂಲವಾಗುವಂತೆ ಕೃಷಿ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದರು.
ಹಾಗೇ ನಮ್ಮ ಕೃಷಿ ವಿಜ್ಞಾನಿಗಳು ರೈತರ ಬಳಿ ಹೋಗಿ ಕೃಷಿ ಚಟುವಟಿಕೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳುವುದು, ಬೆಳೆ ಸಂರಕ್ಷಣೆ, ಸಂಸ್ಕರಣೆ, ನಿರ್ವಹಣೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ತರಬೇತಿಯನ್ನು ನೀಡುವ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದಿಂದ ಬಿಡುಗಡೆಗೊಂಡ ನೂತನ ತಳಿಗಳು ಮತ್ತು ತಂತ್ರಜ್ಞಾನ ಬಗ್ಗೆ ರೈತರಿಗೆ ಅರಿವು, ಮುಂಗಾರು ಹಂಗಾಮಿನಲ್ಲಿ ಮಣ್ಣು ಮತ್ತು ತೇವಾಂಶ ಸಂಸ್ಕರಣೆ ಕ್ರಮ, ವಿವಿಧ ಬೆಳೆಗಳ ಬೇಸಾಯ ಕ್ರಮ, ಸಸ್ಯ ಸಂಸ್ಕರಣೆ ಕ್ರಮ, ರಾಷ್ಟ್ರೀಯ ಬೀಜ ಪ್ರಾಯೋಜನೆ, ಕೃಷಿ ವಸ್ತು ಪ್ರದರ್ಶನ, ಬೀಜ ಮಾರಾಟ ಸೇರಿದಂತೆ ಇತರೆ ರೈತ ಸ್ನೇಹಿ ಮಾಹಿತಿ ಒದಗಿಸಲಾಗಿತ್ತು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…