ರೈತರ ಆದಾಯ ದ್ವಿಗುಣವಾದಾಗ ಮಾತ್ರ ರೈತರಿಗೆ ಕೃಷಿ ಲಾಭದಾಯಕ ಉದ್ಯಮ ಆಗುತ್ತದೆ. ಆದರೆ ರೈತರ ಆದಾಯ ದ್ವಿಗುಣಗೊಳ್ಳಲು ಕೃಷಿಯಿಂದ ಮಾತ್ರ ಸಾಧ್ಯವಾಗೋದಿಲ್ಲ, ಹೆಚ್ಚು ಹೆಚ್ಚು ಕೃಷಿಗೆ ಸಂಬಂಧಿಸಿದ ಉಪಕಸುಬುಗಳನ್ನು ಅಳವಡಿಸಿಕೊಂಡಾಗ ಮಾತ್ರ ಆದಾಯ ದ್ವಿಗುಣ ಆಗುತ್ತದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ.ಸುರೇಶ್ ತಿಳಿಸಿದರು.
ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ 2023-24ನೇ ಸಾಲಿನ ಪೂರ್ವ ಮುಂಗಾರು ಕೃಷಿ ತಾಂತ್ರಿಕ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪಕಸುಬು ಬಗ್ಗೆ ರೈತರಿಗೆ ಅರಿವು ಮೂಡಿಸುವ ಸಲುವಾಗಿ ಸೆಕೆಂಡರಿ ಕೃಷಿ ನಿರ್ದೇಶನಾಲಯವನ್ನ ಸ್ಥಾಪನೆ ಮಾಡಲಾಗಿದೆ. ಈ ನಿರ್ದೇಶನಾಲಯವು ರೈತರಿಗೆ ಉಪಕಸುಬುನ್ನ ಕೃಷಿಯಲ್ಲಿ ಯಾವ ರೀತಿ ಅಳವಡಿಸಿಕೊಳ್ಳಬೇಕು, ಬೆಳೆ ಬೆಳೆಯುವುದು ಹೇಗೆ, ಬೆಳೆಯನ್ನು ಯಾವ ರೀತಿ ಸಂಸ್ಕರಣೆ ಮಾಡುವುದು, ಸಂಸ್ಕರಣೆ ಮಾಡಿರುವುದನ್ನ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಕೌಶಲ್ಯತೆಯನ್ನ ರೈತರಿಗೆ ಕಲ್ಪಿಸಿ, ಕಲಿಸಿಕೊಡುತ್ತದೆ. ಇದರ ಸದುಪಯೋಗವನ್ನು ರೈತರು ಪಡೆದು ತಮ್ಮ ಆದಾಯವನ್ನು ದ್ವಿಗುಣ ಮಾಡಿಕೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.
ನಂತರ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಲಲಿತಾ ರೆಡ್ಡಿ ಮಾತನಾಡಿ, ಈಗಾಗಲೇ ಮುಂಗಾರು ಪ್ರಾರಂಭವಾಗಿದೆ. ರೈತರಿಗೆ ಬೇಕಾದಂತಹ ಬಿತ್ತನೆ ಬೀಜ, ರಸ ಗೊಬ್ಬರ ಸೇರಿದಂತೆ ಕೃಷಿ ಪರಿಕರಗಳ ದಾಸ್ತಾನು ಮಾಡಲಾಗಿದೆ. ಸಕಾಲಕ್ಕೆ ರೈತರಿಗೆ ಅನುಕೂಲವಾಗುವಂತೆ ಕೃಷಿ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದರು.
ಹಾಗೇ ನಮ್ಮ ಕೃಷಿ ವಿಜ್ಞಾನಿಗಳು ರೈತರ ಬಳಿ ಹೋಗಿ ಕೃಷಿ ಚಟುವಟಿಕೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳುವುದು, ಬೆಳೆ ಸಂರಕ್ಷಣೆ, ಸಂಸ್ಕರಣೆ, ನಿರ್ವಹಣೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ತರಬೇತಿಯನ್ನು ನೀಡುವ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದಿಂದ ಬಿಡುಗಡೆಗೊಂಡ ನೂತನ ತಳಿಗಳು ಮತ್ತು ತಂತ್ರಜ್ಞಾನ ಬಗ್ಗೆ ರೈತರಿಗೆ ಅರಿವು, ಮುಂಗಾರು ಹಂಗಾಮಿನಲ್ಲಿ ಮಣ್ಣು ಮತ್ತು ತೇವಾಂಶ ಸಂಸ್ಕರಣೆ ಕ್ರಮ, ವಿವಿಧ ಬೆಳೆಗಳ ಬೇಸಾಯ ಕ್ರಮ, ಸಸ್ಯ ಸಂಸ್ಕರಣೆ ಕ್ರಮ, ರಾಷ್ಟ್ರೀಯ ಬೀಜ ಪ್ರಾಯೋಜನೆ, ಕೃಷಿ ವಸ್ತು ಪ್ರದರ್ಶನ, ಬೀಜ ಮಾರಾಟ ಸೇರಿದಂತೆ ಇತರೆ ರೈತ ಸ್ನೇಹಿ ಮಾಹಿತಿ ಒದಗಿಸಲಾಗಿತ್ತು.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…