ರೈತರ ಆದಾಯ ದ್ವಿಗುಣವಾದಾಗ ಮಾತ್ರ ರೈತರಿಗೆ ಕೃಷಿ ಲಾಭದಾಯಕ ಉದ್ಯಮ ಆಗುತ್ತದೆ. ಆದರೆ ರೈತರ ಆದಾಯ ದ್ವಿಗುಣಗೊಳ್ಳಲು ಕೃಷಿಯಿಂದ ಮಾತ್ರ ಸಾಧ್ಯವಾಗೋದಿಲ್ಲ, ಹೆಚ್ಚು ಹೆಚ್ಚು ಕೃಷಿಗೆ ಸಂಬಂಧಿಸಿದ ಉಪಕಸುಬುಗಳನ್ನು ಅಳವಡಿಸಿಕೊಂಡಾಗ ಮಾತ್ರ ಆದಾಯ ದ್ವಿಗುಣ ಆಗುತ್ತದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ.ಸುರೇಶ್ ತಿಳಿಸಿದರು.
ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ 2023-24ನೇ ಸಾಲಿನ ಪೂರ್ವ ಮುಂಗಾರು ಕೃಷಿ ತಾಂತ್ರಿಕ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪಕಸುಬು ಬಗ್ಗೆ ರೈತರಿಗೆ ಅರಿವು ಮೂಡಿಸುವ ಸಲುವಾಗಿ ಸೆಕೆಂಡರಿ ಕೃಷಿ ನಿರ್ದೇಶನಾಲಯವನ್ನ ಸ್ಥಾಪನೆ ಮಾಡಲಾಗಿದೆ. ಈ ನಿರ್ದೇಶನಾಲಯವು ರೈತರಿಗೆ ಉಪಕಸುಬುನ್ನ ಕೃಷಿಯಲ್ಲಿ ಯಾವ ರೀತಿ ಅಳವಡಿಸಿಕೊಳ್ಳಬೇಕು, ಬೆಳೆ ಬೆಳೆಯುವುದು ಹೇಗೆ, ಬೆಳೆಯನ್ನು ಯಾವ ರೀತಿ ಸಂಸ್ಕರಣೆ ಮಾಡುವುದು, ಸಂಸ್ಕರಣೆ ಮಾಡಿರುವುದನ್ನ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಕೌಶಲ್ಯತೆಯನ್ನ ರೈತರಿಗೆ ಕಲ್ಪಿಸಿ, ಕಲಿಸಿಕೊಡುತ್ತದೆ. ಇದರ ಸದುಪಯೋಗವನ್ನು ರೈತರು ಪಡೆದು ತಮ್ಮ ಆದಾಯವನ್ನು ದ್ವಿಗುಣ ಮಾಡಿಕೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.
ನಂತರ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಲಲಿತಾ ರೆಡ್ಡಿ ಮಾತನಾಡಿ, ಈಗಾಗಲೇ ಮುಂಗಾರು ಪ್ರಾರಂಭವಾಗಿದೆ. ರೈತರಿಗೆ ಬೇಕಾದಂತಹ ಬಿತ್ತನೆ ಬೀಜ, ರಸ ಗೊಬ್ಬರ ಸೇರಿದಂತೆ ಕೃಷಿ ಪರಿಕರಗಳ ದಾಸ್ತಾನು ಮಾಡಲಾಗಿದೆ. ಸಕಾಲಕ್ಕೆ ರೈತರಿಗೆ ಅನುಕೂಲವಾಗುವಂತೆ ಕೃಷಿ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದರು.
ಹಾಗೇ ನಮ್ಮ ಕೃಷಿ ವಿಜ್ಞಾನಿಗಳು ರೈತರ ಬಳಿ ಹೋಗಿ ಕೃಷಿ ಚಟುವಟಿಕೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳುವುದು, ಬೆಳೆ ಸಂರಕ್ಷಣೆ, ಸಂಸ್ಕರಣೆ, ನಿರ್ವಹಣೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ತರಬೇತಿಯನ್ನು ನೀಡುವ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದಿಂದ ಬಿಡುಗಡೆಗೊಂಡ ನೂತನ ತಳಿಗಳು ಮತ್ತು ತಂತ್ರಜ್ಞಾನ ಬಗ್ಗೆ ರೈತರಿಗೆ ಅರಿವು, ಮುಂಗಾರು ಹಂಗಾಮಿನಲ್ಲಿ ಮಣ್ಣು ಮತ್ತು ತೇವಾಂಶ ಸಂಸ್ಕರಣೆ ಕ್ರಮ, ವಿವಿಧ ಬೆಳೆಗಳ ಬೇಸಾಯ ಕ್ರಮ, ಸಸ್ಯ ಸಂಸ್ಕರಣೆ ಕ್ರಮ, ರಾಷ್ಟ್ರೀಯ ಬೀಜ ಪ್ರಾಯೋಜನೆ, ಕೃಷಿ ವಸ್ತು ಪ್ರದರ್ಶನ, ಬೀಜ ಮಾರಾಟ ಸೇರಿದಂತೆ ಇತರೆ ರೈತ ಸ್ನೇಹಿ ಮಾಹಿತಿ ಒದಗಿಸಲಾಗಿತ್ತು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…