ರೈತರ ಆದಾಯ ದ್ವಿಗುಣವಾದಾಗ ಮಾತ್ರ ರೈತರಿಗೆ ಕೃಷಿ ಲಾಭದಾಯಕ ಉದ್ಯಮ ಆಗುತ್ತದೆ. ಆದರೆ ರೈತರ ಆದಾಯ ದ್ವಿಗುಣಗೊಳ್ಳಲು ಕೃಷಿಯಿಂದ ಮಾತ್ರ ಸಾಧ್ಯವಾಗೋದಿಲ್ಲ, ಹೆಚ್ಚು ಹೆಚ್ಚು ಕೃಷಿಗೆ ಸಂಬಂಧಿಸಿದ ಉಪಕಸುಬುಗಳನ್ನು ಅಳವಡಿಸಿಕೊಂಡಾಗ ಮಾತ್ರ ಆದಾಯ ದ್ವಿಗುಣ ಆಗುತ್ತದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ.ಸುರೇಶ್ ತಿಳಿಸಿದರು.
ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ 2023-24ನೇ ಸಾಲಿನ ಪೂರ್ವ ಮುಂಗಾರು ಕೃಷಿ ತಾಂತ್ರಿಕ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪಕಸುಬು ಬಗ್ಗೆ ರೈತರಿಗೆ ಅರಿವು ಮೂಡಿಸುವ ಸಲುವಾಗಿ ಸೆಕೆಂಡರಿ ಕೃಷಿ ನಿರ್ದೇಶನಾಲಯವನ್ನ ಸ್ಥಾಪನೆ ಮಾಡಲಾಗಿದೆ. ಈ ನಿರ್ದೇಶನಾಲಯವು ರೈತರಿಗೆ ಉಪಕಸುಬುನ್ನ ಕೃಷಿಯಲ್ಲಿ ಯಾವ ರೀತಿ ಅಳವಡಿಸಿಕೊಳ್ಳಬೇಕು, ಬೆಳೆ ಬೆಳೆಯುವುದು ಹೇಗೆ, ಬೆಳೆಯನ್ನು ಯಾವ ರೀತಿ ಸಂಸ್ಕರಣೆ ಮಾಡುವುದು, ಸಂಸ್ಕರಣೆ ಮಾಡಿರುವುದನ್ನ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಕೌಶಲ್ಯತೆಯನ್ನ ರೈತರಿಗೆ ಕಲ್ಪಿಸಿ, ಕಲಿಸಿಕೊಡುತ್ತದೆ. ಇದರ ಸದುಪಯೋಗವನ್ನು ರೈತರು ಪಡೆದು ತಮ್ಮ ಆದಾಯವನ್ನು ದ್ವಿಗುಣ ಮಾಡಿಕೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.
ನಂತರ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಲಲಿತಾ ರೆಡ್ಡಿ ಮಾತನಾಡಿ, ಈಗಾಗಲೇ ಮುಂಗಾರು ಪ್ರಾರಂಭವಾಗಿದೆ. ರೈತರಿಗೆ ಬೇಕಾದಂತಹ ಬಿತ್ತನೆ ಬೀಜ, ರಸ ಗೊಬ್ಬರ ಸೇರಿದಂತೆ ಕೃಷಿ ಪರಿಕರಗಳ ದಾಸ್ತಾನು ಮಾಡಲಾಗಿದೆ. ಸಕಾಲಕ್ಕೆ ರೈತರಿಗೆ ಅನುಕೂಲವಾಗುವಂತೆ ಕೃಷಿ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದರು.
ಹಾಗೇ ನಮ್ಮ ಕೃಷಿ ವಿಜ್ಞಾನಿಗಳು ರೈತರ ಬಳಿ ಹೋಗಿ ಕೃಷಿ ಚಟುವಟಿಕೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳುವುದು, ಬೆಳೆ ಸಂರಕ್ಷಣೆ, ಸಂಸ್ಕರಣೆ, ನಿರ್ವಹಣೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ತರಬೇತಿಯನ್ನು ನೀಡುವ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದಿಂದ ಬಿಡುಗಡೆಗೊಂಡ ನೂತನ ತಳಿಗಳು ಮತ್ತು ತಂತ್ರಜ್ಞಾನ ಬಗ್ಗೆ ರೈತರಿಗೆ ಅರಿವು, ಮುಂಗಾರು ಹಂಗಾಮಿನಲ್ಲಿ ಮಣ್ಣು ಮತ್ತು ತೇವಾಂಶ ಸಂಸ್ಕರಣೆ ಕ್ರಮ, ವಿವಿಧ ಬೆಳೆಗಳ ಬೇಸಾಯ ಕ್ರಮ, ಸಸ್ಯ ಸಂಸ್ಕರಣೆ ಕ್ರಮ, ರಾಷ್ಟ್ರೀಯ ಬೀಜ ಪ್ರಾಯೋಜನೆ, ಕೃಷಿ ವಸ್ತು ಪ್ರದರ್ಶನ, ಬೀಜ ಮಾರಾಟ ಸೇರಿದಂತೆ ಇತರೆ ರೈತ ಸ್ನೇಹಿ ಮಾಹಿತಿ ಒದಗಿಸಲಾಗಿತ್ತು.
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
When it involves on-line gambling enterpris padişahbet günceles, among one of the most tempting deals…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…