ರೈತರ ಆದಾಯ ದ್ವಿಗುಣವಾದಾಗ ಮಾತ್ರ ರೈತರಿಗೆ ಕೃಷಿ ಲಾಭದಾಯಕ ಉದ್ಯಮ ಆಗುತ್ತದೆ. ಆದರೆ ರೈತರ ಆದಾಯ ದ್ವಿಗುಣಗೊಳ್ಳಲು ಕೃಷಿಯಿಂದ ಮಾತ್ರ ಸಾಧ್ಯವಾಗೋದಿಲ್ಲ, ಹೆಚ್ಚು ಹೆಚ್ಚು ಕೃಷಿಗೆ ಸಂಬಂಧಿಸಿದ ಉಪಕಸುಬುಗಳನ್ನು ಅಳವಡಿಸಿಕೊಂಡಾಗ ಮಾತ್ರ ಆದಾಯ ದ್ವಿಗುಣ ಆಗುತ್ತದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ.ಸುರೇಶ್ ತಿಳಿಸಿದರು.
ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ 2023-24ನೇ ಸಾಲಿನ ಪೂರ್ವ ಮುಂಗಾರು ಕೃಷಿ ತಾಂತ್ರಿಕ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪಕಸುಬು ಬಗ್ಗೆ ರೈತರಿಗೆ ಅರಿವು ಮೂಡಿಸುವ ಸಲುವಾಗಿ ಸೆಕೆಂಡರಿ ಕೃಷಿ ನಿರ್ದೇಶನಾಲಯವನ್ನ ಸ್ಥಾಪನೆ ಮಾಡಲಾಗಿದೆ. ಈ ನಿರ್ದೇಶನಾಲಯವು ರೈತರಿಗೆ ಉಪಕಸುಬುನ್ನ ಕೃಷಿಯಲ್ಲಿ ಯಾವ ರೀತಿ ಅಳವಡಿಸಿಕೊಳ್ಳಬೇಕು, ಬೆಳೆ ಬೆಳೆಯುವುದು ಹೇಗೆ, ಬೆಳೆಯನ್ನು ಯಾವ ರೀತಿ ಸಂಸ್ಕರಣೆ ಮಾಡುವುದು, ಸಂಸ್ಕರಣೆ ಮಾಡಿರುವುದನ್ನ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಕೌಶಲ್ಯತೆಯನ್ನ ರೈತರಿಗೆ ಕಲ್ಪಿಸಿ, ಕಲಿಸಿಕೊಡುತ್ತದೆ. ಇದರ ಸದುಪಯೋಗವನ್ನು ರೈತರು ಪಡೆದು ತಮ್ಮ ಆದಾಯವನ್ನು ದ್ವಿಗುಣ ಮಾಡಿಕೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.
ನಂತರ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಲಲಿತಾ ರೆಡ್ಡಿ ಮಾತನಾಡಿ, ಈಗಾಗಲೇ ಮುಂಗಾರು ಪ್ರಾರಂಭವಾಗಿದೆ. ರೈತರಿಗೆ ಬೇಕಾದಂತಹ ಬಿತ್ತನೆ ಬೀಜ, ರಸ ಗೊಬ್ಬರ ಸೇರಿದಂತೆ ಕೃಷಿ ಪರಿಕರಗಳ ದಾಸ್ತಾನು ಮಾಡಲಾಗಿದೆ. ಸಕಾಲಕ್ಕೆ ರೈತರಿಗೆ ಅನುಕೂಲವಾಗುವಂತೆ ಕೃಷಿ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದರು.
ಹಾಗೇ ನಮ್ಮ ಕೃಷಿ ವಿಜ್ಞಾನಿಗಳು ರೈತರ ಬಳಿ ಹೋಗಿ ಕೃಷಿ ಚಟುವಟಿಕೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳುವುದು, ಬೆಳೆ ಸಂರಕ್ಷಣೆ, ಸಂಸ್ಕರಣೆ, ನಿರ್ವಹಣೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ತರಬೇತಿಯನ್ನು ನೀಡುವ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದಿಂದ ಬಿಡುಗಡೆಗೊಂಡ ನೂತನ ತಳಿಗಳು ಮತ್ತು ತಂತ್ರಜ್ಞಾನ ಬಗ್ಗೆ ರೈತರಿಗೆ ಅರಿವು, ಮುಂಗಾರು ಹಂಗಾಮಿನಲ್ಲಿ ಮಣ್ಣು ಮತ್ತು ತೇವಾಂಶ ಸಂಸ್ಕರಣೆ ಕ್ರಮ, ವಿವಿಧ ಬೆಳೆಗಳ ಬೇಸಾಯ ಕ್ರಮ, ಸಸ್ಯ ಸಂಸ್ಕರಣೆ ಕ್ರಮ, ರಾಷ್ಟ್ರೀಯ ಬೀಜ ಪ್ರಾಯೋಜನೆ, ಕೃಷಿ ವಸ್ತು ಪ್ರದರ್ಶನ, ಬೀಜ ಮಾರಾಟ ಸೇರಿದಂತೆ ಇತರೆ ರೈತ ಸ್ನೇಹಿ ಮಾಹಿತಿ ಒದಗಿಸಲಾಗಿತ್ತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…