ಕೋಲಾರ: ಬೇಸಿಗೆಯಲ್ಲಿ ಅಗ್ನಿ ಅವಘಡಗಳು ಹೆಚ್ಚಾಗಿ ಸಂಭವಿಸುತ್ತವೆ. ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸುವ ಕೆಲಸ ಮತ್ತು ಅಪಾಯದಲ್ಲಿರುವ ಜನ ಜಾನುವಾರುಗಳ ರಕ್ಷಣೆಗೆ ಸದಾ ಸನ್ನದ್ಧರಾಗಿರಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಹೊರವಲಯದ ಅಗ್ನಿಶಾಮಕ ಠಾಣೆಗೆ ಭೇಟಿ ನೀಡಿ, ಪರಿಶೀಲಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಯಾವುದೇ ವಿದ್ಯುತ್ ಮತ್ತು ಬೆಂಕಿ ಅವಘಡ ಸಂಭವಿಸಿದರೆ ತಾಲ್ಲೂಕಿನ ಅಗ್ನಿಶಾಮಕ ದಳ ಸೀಮಿತ ಸಿಬ್ಬಂದಿಯನ್ನಿಟ್ಟುಕೊಂಡು ತುರ್ತಾಗಿ ಧಾವಿಸಿ, ಬೆಂಕಿ ನಂದಿಸುವ ಕಾರ್ಯ ನಡೆಸಬೇಕು. ಪ್ರತಿ ವರ್ಷ ಅಂತರಗಂಗೆ ಬೆಟ್ಟದಲ್ಲಿ ಆಗಾಗ ಬೆಂಕಿಬಿದ್ದು ಪರಿಸರ ನಾಶದ ಜೊತೆಗೆ ಜೀವ ಸಂಕುಲಗಳಿಗೂ ಹಾನಿಯಾಗುತ್ತಿದೆ. ಜೊತೆಗೆ ಬಣವೆಗಳಿಗೆ ಬೆಂಕಿ, ಭತ್ತದ ಹುಲ್ಲಿಗೆ ಬೆಂಕಿ ಈ ರೀತಿ ಘಟನೆಯಾದ ತಕ್ಷಣ ಅಗ್ನಿಶಾಮಕ ಸಿಬ್ಬಂದಿಯು ಧಾವಿಸಿ ಬೆಂಕಿ ನಿಂದಿಸಿ ರಕ್ಷಣೆ ಮಾಡುವ ಕೆಲಸ ಮಾಡಬೇಕು ಎಂದರು.
ಅಗ್ನಿ ನಂದಿಸುವ ವಾಹನಗಳನ್ನು ಸದಾ ಸುಸಜ್ಜಿತ ಸ್ಥಿತಿಯಲ್ಲಿ ಇಟ್ಟುಕ್ಕೊಳ್ಳಿ ಯಾವುದೇ ತೊಂದರೆಯಾದರೂ ತಕ್ಷಣ ಸರಿಪಡಿಸಿ ಬೇಕಾಗಿರುವ ಪರಿಕರಣಗಳು, ಠಾಣೆಯ ಸುತ್ತ ತಡೆಗೋಡೆ ನಿರ್ಮಿಸುವುದು, ಬಣ್ಣ ಬಳಿಸುವುದು, ಠಾಣೆಯ ಮುಂದೆ ಸಿಮೆಂಟ್ ರಸ್ತೆಯ ವ್ಯವಸ್ಥೆ ಹಾಗೂ ಸಿಬ್ಬಂದಿ ದೃಢ ಹಾಗೂ ಆರೋಗ್ಯವಾಗಿರಲು ಜಿಮ್ ಸಾಮಗ್ರಿಗಳನ್ನು ಕೊಡಿಸಲಾಗುವುದು ಎಂದು ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಬೇಸಿಗೆಯಲ್ಲಿ ಬೆಂಕಿ ಅವಘಡಗಳು ಸಂಭವಿಸಿದರೆ ಬೆಂಕಿ ನಿಂದಿಸುವ ಬಗೆಯ ಕುರಿತು ಜನರಲ್ಲಿ ಅರಿವು, ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂಚಿ. ಅವಘಡಕ್ಕೆ ಕಾರಣವಾಗುವ ಅಂಶಗಳು ಮತ್ತು ತಡೆಯುವ ವಿಧಾನವನ್ನು ಕುರಿತು ಮಾಹಿತಿ ನೀಡಿ. ತುರ್ತು ಕರೆಗಳನ್ನು ಸ್ವೀಕರಿಸಿ ತಕ್ಷಣ ಕಾರ್ಯ ಪ್ರವೃತರಾಗಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅಧ್ಯಕ್ಷ ವೈ.ಶಿವಕುಮಾರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರಸಭೆ ಸದಸ್ಯ ಅಫ್ಸರ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಆರ್.ಹನುಮಂತರಾಯ, ಪ್ರಮುಖ ಸಿಬ್ಬಂದಿಗಳಾದ ಶ್ರೀನಾಥ್, ಲೋಕೇಶ್, ಅಶ್ವಥ್ ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…