Categories: ಕೋಲಾರ

ಬೇಸಿಗೆ ಅಗ್ನಿ ಅವಘಡ: ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸುವ ಕೆಲಸ ಮತ್ತು ಅಪಾಯದಲ್ಲಿರುವ ಜನ ಜಾನುವಾರುಗಳ ರಕ್ಷಣೆಗೆ ಸದಾ ಸನ್ನದ್ಧರಾಗಿರಬೇಕು- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಬೇಸಿಗೆಯಲ್ಲಿ ಅಗ್ನಿ ಅವಘಡಗಳು ಹೆಚ್ಚಾಗಿ ಸಂಭವಿಸುತ್ತವೆ. ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸುವ ಕೆಲಸ ಮತ್ತು ಅಪಾಯದಲ್ಲಿರುವ ಜನ ಜಾನುವಾರುಗಳ ರಕ್ಷಣೆಗೆ ಸದಾ ಸನ್ನದ್ಧರಾಗಿರಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಹೊರವಲಯದ ಅಗ್ನಿಶಾಮಕ ಠಾಣೆಗೆ ಭೇಟಿ ನೀಡಿ, ಪರಿಶೀಲಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಯಾವುದೇ ವಿದ್ಯುತ್ ಮತ್ತು ಬೆಂಕಿ ಅವಘಡ ಸಂಭವಿಸಿದರೆ ತಾಲ್ಲೂಕಿನ ಅಗ್ನಿಶಾಮಕ ದಳ ಸೀಮಿತ ಸಿಬ್ಬಂದಿಯನ್ನಿಟ್ಟುಕೊಂಡು ತುರ್ತಾಗಿ ಧಾವಿಸಿ, ಬೆಂಕಿ ನಂದಿಸುವ ಕಾರ್ಯ ನಡೆಸಬೇಕು. ಪ್ರತಿ ವರ್ಷ ಅಂತರಗಂಗೆ ಬೆಟ್ಟದಲ್ಲಿ ಆಗಾಗ ಬೆಂಕಿಬಿದ್ದು ಪರಿಸರ ನಾಶದ ಜೊತೆಗೆ ಜೀವ ಸಂಕುಲಗಳಿಗೂ ಹಾನಿಯಾಗುತ್ತಿದೆ. ಜೊತೆಗೆ ಬಣವೆಗಳಿಗೆ ಬೆಂಕಿ, ಭತ್ತದ ಹುಲ್ಲಿಗೆ ಬೆಂಕಿ ಈ ರೀತಿ ಘಟನೆಯಾದ ತಕ್ಷಣ ಅಗ್ನಿಶಾಮಕ ಸಿಬ್ಬಂದಿಯು ಧಾವಿಸಿ ಬೆಂಕಿ ನಿಂದಿಸಿ ರಕ್ಷಣೆ ಮಾಡುವ ಕೆಲಸ ಮಾಡಬೇಕು ಎಂದರು.

ಅಗ್ನಿ ನಂದಿಸುವ ವಾಹನಗಳನ್ನು ಸದಾ ಸುಸಜ್ಜಿತ ಸ್ಥಿತಿಯಲ್ಲಿ ಇಟ್ಟುಕ್ಕೊಳ್ಳಿ ಯಾವುದೇ ತೊಂದರೆಯಾದರೂ ತಕ್ಷಣ ಸರಿಪಡಿಸಿ ಬೇಕಾಗಿರುವ ಪರಿಕರಣಗಳು, ಠಾಣೆಯ ಸುತ್ತ ತಡೆಗೋಡೆ ನಿರ್ಮಿಸುವುದು, ಬಣ್ಣ ಬಳಿಸುವುದು, ಠಾಣೆಯ ಮುಂದೆ ಸಿಮೆಂಟ್ ರಸ್ತೆಯ ವ್ಯವಸ್ಥೆ ಹಾಗೂ ಸಿಬ್ಬಂದಿ ದೃಢ ಹಾಗೂ ಆರೋಗ್ಯವಾಗಿರಲು ಜಿಮ್ ಸಾಮಗ್ರಿಗಳನ್ನು ಕೊಡಿಸಲಾಗುವುದು ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಬೇಸಿಗೆಯಲ್ಲಿ ಬೆಂಕಿ ಅವಘಡಗಳು ಸಂಭವಿಸಿದರೆ ಬೆಂಕಿ ನಿಂದಿಸುವ ಬಗೆಯ ಕುರಿತು ಜನರಲ್ಲಿ ಅರಿವು, ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂಚಿ. ಅವಘಡಕ್ಕೆ ಕಾರಣವಾಗುವ ಅಂಶಗಳು ಮತ್ತು ತಡೆಯುವ ವಿಧಾನವನ್ನು ಕುರಿತು ಮಾಹಿತಿ ನೀಡಿ. ತುರ್ತು ಕರೆಗಳನ್ನು ಸ್ವೀಕರಿಸಿ ತಕ್ಷಣ ಕಾರ್ಯ ಪ್ರವೃತರಾಗಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅಧ್ಯಕ್ಷ ವೈ.ಶಿವಕುಮಾರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರಸಭೆ ಸದಸ್ಯ ಅಫ್ಸರ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಆರ್.ಹನುಮಂತರಾಯ, ಪ್ರಮುಖ ಸಿಬ್ಬಂದಿಗಳಾದ ಶ್ರೀನಾಥ್, ಲೋಕೇಶ್, ಅಶ್ವಥ್ ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

1 hour ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

2 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

3 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

4 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

12 hours ago