ಕೋಲಾರ: ಬೇಸಿಗೆಯಲ್ಲಿ ಅಗ್ನಿ ಅವಘಡಗಳು ಹೆಚ್ಚಾಗಿ ಸಂಭವಿಸುತ್ತವೆ. ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸುವ ಕೆಲಸ ಮತ್ತು ಅಪಾಯದಲ್ಲಿರುವ ಜನ ಜಾನುವಾರುಗಳ ರಕ್ಷಣೆಗೆ ಸದಾ ಸನ್ನದ್ಧರಾಗಿರಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಹೊರವಲಯದ ಅಗ್ನಿಶಾಮಕ ಠಾಣೆಗೆ ಭೇಟಿ ನೀಡಿ, ಪರಿಶೀಲಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಯಾವುದೇ ವಿದ್ಯುತ್ ಮತ್ತು ಬೆಂಕಿ ಅವಘಡ ಸಂಭವಿಸಿದರೆ ತಾಲ್ಲೂಕಿನ ಅಗ್ನಿಶಾಮಕ ದಳ ಸೀಮಿತ ಸಿಬ್ಬಂದಿಯನ್ನಿಟ್ಟುಕೊಂಡು ತುರ್ತಾಗಿ ಧಾವಿಸಿ, ಬೆಂಕಿ ನಂದಿಸುವ ಕಾರ್ಯ ನಡೆಸಬೇಕು. ಪ್ರತಿ ವರ್ಷ ಅಂತರಗಂಗೆ ಬೆಟ್ಟದಲ್ಲಿ ಆಗಾಗ ಬೆಂಕಿಬಿದ್ದು ಪರಿಸರ ನಾಶದ ಜೊತೆಗೆ ಜೀವ ಸಂಕುಲಗಳಿಗೂ ಹಾನಿಯಾಗುತ್ತಿದೆ. ಜೊತೆಗೆ ಬಣವೆಗಳಿಗೆ ಬೆಂಕಿ, ಭತ್ತದ ಹುಲ್ಲಿಗೆ ಬೆಂಕಿ ಈ ರೀತಿ ಘಟನೆಯಾದ ತಕ್ಷಣ ಅಗ್ನಿಶಾಮಕ ಸಿಬ್ಬಂದಿಯು ಧಾವಿಸಿ ಬೆಂಕಿ ನಿಂದಿಸಿ ರಕ್ಷಣೆ ಮಾಡುವ ಕೆಲಸ ಮಾಡಬೇಕು ಎಂದರು.
ಅಗ್ನಿ ನಂದಿಸುವ ವಾಹನಗಳನ್ನು ಸದಾ ಸುಸಜ್ಜಿತ ಸ್ಥಿತಿಯಲ್ಲಿ ಇಟ್ಟುಕ್ಕೊಳ್ಳಿ ಯಾವುದೇ ತೊಂದರೆಯಾದರೂ ತಕ್ಷಣ ಸರಿಪಡಿಸಿ ಬೇಕಾಗಿರುವ ಪರಿಕರಣಗಳು, ಠಾಣೆಯ ಸುತ್ತ ತಡೆಗೋಡೆ ನಿರ್ಮಿಸುವುದು, ಬಣ್ಣ ಬಳಿಸುವುದು, ಠಾಣೆಯ ಮುಂದೆ ಸಿಮೆಂಟ್ ರಸ್ತೆಯ ವ್ಯವಸ್ಥೆ ಹಾಗೂ ಸಿಬ್ಬಂದಿ ದೃಢ ಹಾಗೂ ಆರೋಗ್ಯವಾಗಿರಲು ಜಿಮ್ ಸಾಮಗ್ರಿಗಳನ್ನು ಕೊಡಿಸಲಾಗುವುದು ಎಂದು ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಬೇಸಿಗೆಯಲ್ಲಿ ಬೆಂಕಿ ಅವಘಡಗಳು ಸಂಭವಿಸಿದರೆ ಬೆಂಕಿ ನಿಂದಿಸುವ ಬಗೆಯ ಕುರಿತು ಜನರಲ್ಲಿ ಅರಿವು, ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂಚಿ. ಅವಘಡಕ್ಕೆ ಕಾರಣವಾಗುವ ಅಂಶಗಳು ಮತ್ತು ತಡೆಯುವ ವಿಧಾನವನ್ನು ಕುರಿತು ಮಾಹಿತಿ ನೀಡಿ. ತುರ್ತು ಕರೆಗಳನ್ನು ಸ್ವೀಕರಿಸಿ ತಕ್ಷಣ ಕಾರ್ಯ ಪ್ರವೃತರಾಗಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅಧ್ಯಕ್ಷ ವೈ.ಶಿವಕುಮಾರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರಸಭೆ ಸದಸ್ಯ ಅಫ್ಸರ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಆರ್.ಹನುಮಂತರಾಯ, ಪ್ರಮುಖ ಸಿಬ್ಬಂದಿಗಳಾದ ಶ್ರೀನಾಥ್, ಲೋಕೇಶ್, ಅಶ್ವಥ್ ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು.
ದೊಡ್ಡಬಳ್ಳಾಪುರ: ಲೀಸ್ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…