Categories: ಕೋಲಾರ

ಬೇಸಿಗೆ ಅಗ್ನಿ ಅವಘಡ: ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸುವ ಕೆಲಸ ಮತ್ತು ಅಪಾಯದಲ್ಲಿರುವ ಜನ ಜಾನುವಾರುಗಳ ರಕ್ಷಣೆಗೆ ಸದಾ ಸನ್ನದ್ಧರಾಗಿರಬೇಕು- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಬೇಸಿಗೆಯಲ್ಲಿ ಅಗ್ನಿ ಅವಘಡಗಳು ಹೆಚ್ಚಾಗಿ ಸಂಭವಿಸುತ್ತವೆ. ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸುವ ಕೆಲಸ ಮತ್ತು ಅಪಾಯದಲ್ಲಿರುವ ಜನ ಜಾನುವಾರುಗಳ ರಕ್ಷಣೆಗೆ ಸದಾ ಸನ್ನದ್ಧರಾಗಿರಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಹೊರವಲಯದ ಅಗ್ನಿಶಾಮಕ ಠಾಣೆಗೆ ಭೇಟಿ ನೀಡಿ, ಪರಿಶೀಲಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಯಾವುದೇ ವಿದ್ಯುತ್ ಮತ್ತು ಬೆಂಕಿ ಅವಘಡ ಸಂಭವಿಸಿದರೆ ತಾಲ್ಲೂಕಿನ ಅಗ್ನಿಶಾಮಕ ದಳ ಸೀಮಿತ ಸಿಬ್ಬಂದಿಯನ್ನಿಟ್ಟುಕೊಂಡು ತುರ್ತಾಗಿ ಧಾವಿಸಿ, ಬೆಂಕಿ ನಂದಿಸುವ ಕಾರ್ಯ ನಡೆಸಬೇಕು. ಪ್ರತಿ ವರ್ಷ ಅಂತರಗಂಗೆ ಬೆಟ್ಟದಲ್ಲಿ ಆಗಾಗ ಬೆಂಕಿಬಿದ್ದು ಪರಿಸರ ನಾಶದ ಜೊತೆಗೆ ಜೀವ ಸಂಕುಲಗಳಿಗೂ ಹಾನಿಯಾಗುತ್ತಿದೆ. ಜೊತೆಗೆ ಬಣವೆಗಳಿಗೆ ಬೆಂಕಿ, ಭತ್ತದ ಹುಲ್ಲಿಗೆ ಬೆಂಕಿ ಈ ರೀತಿ ಘಟನೆಯಾದ ತಕ್ಷಣ ಅಗ್ನಿಶಾಮಕ ಸಿಬ್ಬಂದಿಯು ಧಾವಿಸಿ ಬೆಂಕಿ ನಿಂದಿಸಿ ರಕ್ಷಣೆ ಮಾಡುವ ಕೆಲಸ ಮಾಡಬೇಕು ಎಂದರು.

ಅಗ್ನಿ ನಂದಿಸುವ ವಾಹನಗಳನ್ನು ಸದಾ ಸುಸಜ್ಜಿತ ಸ್ಥಿತಿಯಲ್ಲಿ ಇಟ್ಟುಕ್ಕೊಳ್ಳಿ ಯಾವುದೇ ತೊಂದರೆಯಾದರೂ ತಕ್ಷಣ ಸರಿಪಡಿಸಿ ಬೇಕಾಗಿರುವ ಪರಿಕರಣಗಳು, ಠಾಣೆಯ ಸುತ್ತ ತಡೆಗೋಡೆ ನಿರ್ಮಿಸುವುದು, ಬಣ್ಣ ಬಳಿಸುವುದು, ಠಾಣೆಯ ಮುಂದೆ ಸಿಮೆಂಟ್ ರಸ್ತೆಯ ವ್ಯವಸ್ಥೆ ಹಾಗೂ ಸಿಬ್ಬಂದಿ ದೃಢ ಹಾಗೂ ಆರೋಗ್ಯವಾಗಿರಲು ಜಿಮ್ ಸಾಮಗ್ರಿಗಳನ್ನು ಕೊಡಿಸಲಾಗುವುದು ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಬೇಸಿಗೆಯಲ್ಲಿ ಬೆಂಕಿ ಅವಘಡಗಳು ಸಂಭವಿಸಿದರೆ ಬೆಂಕಿ ನಿಂದಿಸುವ ಬಗೆಯ ಕುರಿತು ಜನರಲ್ಲಿ ಅರಿವು, ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂಚಿ. ಅವಘಡಕ್ಕೆ ಕಾರಣವಾಗುವ ಅಂಶಗಳು ಮತ್ತು ತಡೆಯುವ ವಿಧಾನವನ್ನು ಕುರಿತು ಮಾಹಿತಿ ನೀಡಿ. ತುರ್ತು ಕರೆಗಳನ್ನು ಸ್ವೀಕರಿಸಿ ತಕ್ಷಣ ಕಾರ್ಯ ಪ್ರವೃತರಾಗಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅಧ್ಯಕ್ಷ ವೈ.ಶಿವಕುಮಾರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರಸಭೆ ಸದಸ್ಯ ಅಫ್ಸರ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಆರ್.ಹನುಮಂತರಾಯ, ಪ್ರಮುಖ ಸಿಬ್ಬಂದಿಗಳಾದ ಶ್ರೀನಾಥ್, ಲೋಕೇಶ್, ಅಶ್ವಥ್ ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು.

Ramesh Babu

Journalist

Recent Posts

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

2 hours ago

ಫಿಫಾ ವಿಶ್ವಕಪ್‌ಗೆ ಸ್ಪೇನ್ ಮುತ್ತು: ಫೈನಲ್‌ನಲ್ಲಿ ಅರ್ಜೆಂಟೀನಾಗೆ 1-0 ಸೋಲು ಹೆಚ್ಚುವರಿ ವೇಳೆಯಲ್ಲಿ ಫೆರಾನ್ ಟೊರೆಸ್ ನಿರ್ಣಾಯಕ ಗೋಲು; 2010ರ ಬಳಿಕ ಎರಡನೇ ಬಾರಿ ವಿಶ್ವ ಚಾಂಪಿಯನ್ ಆದ ಸ್ಪೇನ್

ನ್ಯೂಯಾರ್ಕ್–ನ್ಯೂಜೆರ್ಸಿ: ತೀವ್ರ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವಕಪ್-2026ರ ಫೈನಲ್‌ನಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾವನ್ನು 1-0…

13 hours ago

ಪ್ರಸ್ತುತ ರಾಜ್ಯದ ಬರ ಪರಿಸ್ಥಿತಿಯ ವಿವರಗಳು ಇಂತಿವೆ….

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ‌ ಜೊತೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಡಿಯೋ…

23 hours ago

ರಾಜ್ಯದ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು…

24 hours ago

ಆಸರೆ–ಸನ್ಮಿತ್ರ ಯೋಜನೆಯಡಿ ವಯೋವೃದ್ಧರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆಸರೆ–ಸನ್ಮಿತ್ರ ಸಹಕಾರಿ- ಎಎಸ್ಪಿ ವೆಂಕಟೇಶ್ ಪ್ರಸನ್ನ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ನವೋದಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಆಸರೆ–ಸನ್ಮಿತ್ರ ಯೋಜನೆಯಡಿ…

1 day ago

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ……

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ...... ಸರಳವಾಗಿ ಬಹು ಆಯಾಮಗಳ ಒಂದು ಚಿಂತನ ಮಂಥನ........ ಕರ್ನಾಟಕದ ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೀಸಲಾತಿಯ…

2 days ago