ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ. ಕನಿಷ್ಟ ಎರಡು ಬಾರಿ ನೀರು ಬಿಟ್ಟು ಒಂದು ಗಂಟೆಗೂ ಅಧಿಕ ನೀರು ಪೂರೈಕೆ ಮಾಡಬೇಕು ಎಂದು ನಗರಸಭಾ ಸದಸ್ಯರು, ಅಧ್ಯಕ್ಷರು, ಪೌರಾಯುಕ್ತರಿಗೆ ಮನವಿ ಮಾಡಿದರು.

ನಗರಸಭಾ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಸಾಮಾನ್ಯ ಸಭೆಯಲ್ಲಿ ಸದಸ್ಯರು ಒಕ್ಕೊರಲ ಆಗ್ರಹ ಮಾಡಿದರು. ಇದಕ್ಕೆ ಸ್ಪಂದಿಸಿದ ಎಇಇ ರಾಮೇಗೌಡ ಸಮರ್ಪಕ ನೀರು ಪೂರೈಕೆ ಮಾಡಲಾಗುವುದು ಎಂದು‌ ತಿಳಿಸಿದರು.

ಸದಸ್ಯ ಶಿವಶಂಕರ್ ಮಾತನಾಡಿ, ವಿಷಯಗಳನ್ನು ಚರ್ಚೆ ಮಾಡದೆಯೇ ಆಯ್ದ ವಾರ್ಡ್ ಗಳಿಗೆ ಮಾತ್ರ ಅನುದಾನ ಮೀಸಲಿರಿಸುವುದು ಎಷ್ಟು ಸರಿ. ಇಂದಿನ ಸಭೆಯ ಅಜೆಂಡಾದಲ್ಲೂ ಕೆಲವೇ ವಾರ್ಡ್ ಗಳಿಗೆ ಕಾಮಗಾರಿಗಳು ಸಿಮೀತವಾಗಿವೆ. ಕೆಲಸಗಳನ್ನು ಕೊಡುವುದಾದರೆ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೊಡಬೇಕು. ಏಕಮುಖವಾಗಿ ತೀರ್ಮಾನ ತೆಗೆದುಕೊಂಡು ಅನುದಾನ, ಕಾಮಗಾರಿಗಳನ್ನ ಹಂಚುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೌರಾಯುಕ್ತ ಕಾರ್ತಿಕೇಶ್ವರ್, ಕೆಲವು ಕಾಮಗಾರಿಗಳು ಶಾಸಕರ ಸೂಚನೆ ಮೇರೆಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ನಗರೋತ್ಥನ ಯೋಜನೆಯಡಿ ನಗರದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳು ಕಳಪೆಯಾಗಿವೆ. ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಸದಸ್ಯರು ಸೂಚಿಸಿದರು. ಇದಕ್ಕೆ ಉತ್ತರಿಸಿದ ಎಇಇ ರಾಮೇಗೌಡ, ಗುತ್ತಿಗೆದಾರರಿಗೆ ಬಿಲ್ ಕೊಟ್ಟಿಲ್ಲ. ಮತ್ತೊಮ್ಮೆ ರಸ್ತೆಗಳ ಸರಿಪಡಿಸಲಾಗುತ್ತದೆ ಎಂದರು.

ಸದಸ್ಯ ರವಿಕುಮಾರ್ ಮಾತನಾಡಿ, ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮೂಲಕವೇ ಆಯ್ಕೆ ಆಗಬೇಕು. ಇದರ ಬಗ್ಗೆ ರೆಸ್ಯೂಲೆಷನ್ ಮಾಡಲಾಗಿದೆ. ಮುಂದೆ ಅವಿರೋಧ ಆಯ್ಕೆ ಆಗಬಾರದರು ಒತ್ತಾಯಿಸಿದರು.

ಉಳಿದಂತೆ ಪೌರಾಯುಕ್ತ ಕಾರ್ತಿಕೇಶ್ವರ್ ಮಾತನಾಡಿ, ಈ ಹಿಂದೆ ಹಳೇ ಮಾರುಕಟ್ಟೆ ಆವರಣದಲ್ಲಿ 10 ಕೋಟಿ ಅನುದಾನದಲ್ಲಿ ನಿರ್ಮಿಸಲು ಯೋಜಿಸಿದ್ದ ಯೋಜನೆಯನ್ನು ರದ್ದುಪಡಿಸಲಾಗಿದೆ. ಬದಲಾಗಿ ಎಪಿಎಂಸಿ ಮಾರುಕಟ್ಟೆ ಮಾದರಿಯಲ್ಲಿ ಹೊಸ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು. ನಗರದ 16 ಕಣ್ಣಿನ ಭಾವಿಯ ಸ್ವಚ್ಚತೆಗೆ ಸರ್ವಾನುಮತ ತೀರ್ಮಾನ ಮಾಡಲಾಗುವುದು. ನಗರಸಭೆಯ ಮಳಿಗೆಗಳ ಹರಾಜು ಪ್ರಕ್ರಿಯೆ ಮುಗಿದಿದೆ. ತಾಂತ್ರಿಕ ಕಾರಣಗಳಿಂದ ಹಂಚಿಕೆ ಮಾಡಲಾಗಿಲ್ಲ. ಶೀಘ್ರವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ಈ ವೇಳೆ ಉಪಾಧ್ಯಕ್ಷ ಮಲ್ಲೇಶ್, ಪೌರಾಯುಕ್ತ ಕಾರ್ತಿಕೇಶ್ವರ್ , ಸದಸ್ಯರು, ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

7 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

10 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

15 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

16 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago