ಬೇಸಿಗೆ ಆರಂಭ, ಕುಡಿಯುವ ನೀರು, ಜಾನುವಾರು ಮೇವಿಗೆ ಆದ್ಯತೆ ನೀಡಿ- ಮಾರ್ಚ್ ಅಂತ್ಯಕ್ಕೆ ಗರಿಷ್ಟ ನಿವೇಶನ ನೀಡಲು ಗುರಿ -ಕೆ.ಎಚ್. ಮುನಿಯಪ್ಪ

ಬೇಸಿಗೆ ಆರಂಭವಾಗುತಿದ್ದು, ಜಿಲ್ಲಾಡಳಿತ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ನೀಡಬೇಕು ಮತ್ತು ಜಾನುವಾರುಗಳಿಗೆ ಬೇಸಿಗೆಯಲ್ಲಿ ಬಾಧಿಸುವ ರೋಗಗಳನ್ನು ಸರಿಯಾಗಿ ಉಪಚರಿಸಬೇಕೆಂದು ಆಹಾರ ನಾಗರಿಕ ಸರಬರಾಜು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಹೇಳಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರು ಒದಗಿಸುವುದು ಮೊದಲ ಆದ್ಯತೆಯಾಗಿದ್ದು, ಈ ಸಂಬಂಧ ಅಧಿಕಾರಿಗಳು ಸಭೆ ನಡೆಸಬೇಕು. ಹಣದ ಕೊರತೆಯಿಲ್ಲ, ಜಿಲ್ಲಾಧಿಕಾರಿ ಖಾತೆಯಲ್ಲಿ ಸಾಕಷ್ಟು ಹಣವಿದ್ದು, ಬಳಸಿಕೊಳಿ ಎಂದರು.

ಪೋಡಿ ಅಭಿಯಾನದಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲೂ ಪ್ರಥಮ ಸ್ಥಾನ ಕಾಯ್ದುಕೊಳ್ಳುವುದರೊಂದಿಗೆ ರಾಜ್ಯದ ಮೊದಲ ಪೋಡಿಮುಕ್ತ ಜಿಲ್ಲೆಯಾಗುವಂತೆ ನೋಡಿಕೊಳ್ಳಬೇಕೆಂದರು.

ಗ್ರಾಮೀಣ ರಸ್ತೆಗಳು, ರೈತರ ಜಮೀನುಗಳಿಗೆ ರಸ್ತೆ, ಸ್ಮಶಾನದ ರಸ್ತೆಗಳ ಒದಗಿಸುವ ಸಂಬಂಧ ವಾರದಲ್ಲಿ ಒಂದು ದಿನ ಅಥವ ಒಂದು ಮಧ್ಯಾಹ್ನ ಈ ಬಗೆಗೆ ಅಧಿಕಾರಿಗಳ ಸಭೆಯಾಗಬೇಕೆಂದರು.

ಜಿಲ್ಲೆಯ ಹಲವು ಕೆರೆಗಳಲ್ಲಿ ಮಳೆಯಿಲ್ಲದ ಕಾರಣ ಮರ ಗಿಡಗಳು ಬೆಳೆದಿದ್ದು ಅವುಗಳ ತೆರವುಗೊಳಿಸಬೇಕು, ಹೂಳು ತುಂಬಿರುವ ಕೆರೆಗಳ ಹೂಳು ತೆಗೆಯುವ ಕಾರ್ಯವಾಗಬೇಕೆಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನಿವೇಶನ ರಹಿತರಿಗೆ ಮಾರ್ಚ್ ಅಂತ್ಯದೊಳಗಾಗಿ ಗರಿಷ್ಟ ಪ್ರಮಾಣದ ನಿವೇಶನಗಳನ್ನು ಹಂಚಿಕೆ ಮಾಡಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲೆಯಲ್ಲಿ 20 ಸಾವಿರದಷ್ಟು ವಸತಿ ರಹಿತರು ನಿವೇಶನಗಳಿಗೆ ಅರ್ಜಿ ಸಲ್ಲಿಸಿದ್ದು, ಆದ್ಯತೆಯ ಮೇರೆಗೆ ನಿವೇಶನ ಹಂಚಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಸಿಇಓ ಕೆ.ಅನುರಾಧ, ಎಡಿಸಿ ಹೆಚ್.ಅಮರೇಶ್ ಜಿಲ್ಲಾಮಟ್ಟದ ಅಧಿಕಾರಿಗಳಿದ್ದರು.

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

2 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

11 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

13 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

15 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago