ಬೇಸಿಗೆ ಆರಂಭವಾಗುತಿದ್ದು, ಜಿಲ್ಲಾಡಳಿತ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ನೀಡಬೇಕು ಮತ್ತು ಜಾನುವಾರುಗಳಿಗೆ ಬೇಸಿಗೆಯಲ್ಲಿ ಬಾಧಿಸುವ ರೋಗಗಳನ್ನು ಸರಿಯಾಗಿ ಉಪಚರಿಸಬೇಕೆಂದು ಆಹಾರ ನಾಗರಿಕ ಸರಬರಾಜು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರು ಒದಗಿಸುವುದು ಮೊದಲ ಆದ್ಯತೆಯಾಗಿದ್ದು, ಈ ಸಂಬಂಧ ಅಧಿಕಾರಿಗಳು ಸಭೆ ನಡೆಸಬೇಕು. ಹಣದ ಕೊರತೆಯಿಲ್ಲ, ಜಿಲ್ಲಾಧಿಕಾರಿ ಖಾತೆಯಲ್ಲಿ ಸಾಕಷ್ಟು ಹಣವಿದ್ದು, ಬಳಸಿಕೊಳಿ ಎಂದರು.
ಪೋಡಿ ಅಭಿಯಾನದಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲೂ ಪ್ರಥಮ ಸ್ಥಾನ ಕಾಯ್ದುಕೊಳ್ಳುವುದರೊಂದಿಗೆ ರಾಜ್ಯದ ಮೊದಲ ಪೋಡಿಮುಕ್ತ ಜಿಲ್ಲೆಯಾಗುವಂತೆ ನೋಡಿಕೊಳ್ಳಬೇಕೆಂದರು.
ಗ್ರಾಮೀಣ ರಸ್ತೆಗಳು, ರೈತರ ಜಮೀನುಗಳಿಗೆ ರಸ್ತೆ, ಸ್ಮಶಾನದ ರಸ್ತೆಗಳ ಒದಗಿಸುವ ಸಂಬಂಧ ವಾರದಲ್ಲಿ ಒಂದು ದಿನ ಅಥವ ಒಂದು ಮಧ್ಯಾಹ್ನ ಈ ಬಗೆಗೆ ಅಧಿಕಾರಿಗಳ ಸಭೆಯಾಗಬೇಕೆಂದರು.
ಜಿಲ್ಲೆಯ ಹಲವು ಕೆರೆಗಳಲ್ಲಿ ಮಳೆಯಿಲ್ಲದ ಕಾರಣ ಮರ ಗಿಡಗಳು ಬೆಳೆದಿದ್ದು ಅವುಗಳ ತೆರವುಗೊಳಿಸಬೇಕು, ಹೂಳು ತುಂಬಿರುವ ಕೆರೆಗಳ ಹೂಳು ತೆಗೆಯುವ ಕಾರ್ಯವಾಗಬೇಕೆಂದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನಿವೇಶನ ರಹಿತರಿಗೆ ಮಾರ್ಚ್ ಅಂತ್ಯದೊಳಗಾಗಿ ಗರಿಷ್ಟ ಪ್ರಮಾಣದ ನಿವೇಶನಗಳನ್ನು ಹಂಚಿಕೆ ಮಾಡಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಲ್ಲೆಯಲ್ಲಿ 20 ಸಾವಿರದಷ್ಟು ವಸತಿ ರಹಿತರು ನಿವೇಶನಗಳಿಗೆ ಅರ್ಜಿ ಸಲ್ಲಿಸಿದ್ದು, ಆದ್ಯತೆಯ ಮೇರೆಗೆ ನಿವೇಶನ ಹಂಚಲು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಸಿಇಓ ಕೆ.ಅನುರಾಧ, ಎಡಿಸಿ ಹೆಚ್.ಅಮರೇಶ್ ಜಿಲ್ಲಾಮಟ್ಟದ ಅಧಿಕಾರಿಗಳಿದ್ದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…