ಬೇಸಿಗೆ ಆರಂಭ, ಕುಡಿಯುವ ನೀರು, ಜಾನುವಾರು ಮೇವಿಗೆ ಆದ್ಯತೆ ನೀಡಿ- ಮಾರ್ಚ್ ಅಂತ್ಯಕ್ಕೆ ಗರಿಷ್ಟ ನಿವೇಶನ ನೀಡಲು ಗುರಿ -ಕೆ.ಎಚ್. ಮುನಿಯಪ್ಪ

ಬೇಸಿಗೆ ಆರಂಭವಾಗುತಿದ್ದು, ಜಿಲ್ಲಾಡಳಿತ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ನೀಡಬೇಕು ಮತ್ತು ಜಾನುವಾರುಗಳಿಗೆ ಬೇಸಿಗೆಯಲ್ಲಿ ಬಾಧಿಸುವ ರೋಗಗಳನ್ನು ಸರಿಯಾಗಿ ಉಪಚರಿಸಬೇಕೆಂದು ಆಹಾರ ನಾಗರಿಕ ಸರಬರಾಜು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಹೇಳಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರು ಒದಗಿಸುವುದು ಮೊದಲ ಆದ್ಯತೆಯಾಗಿದ್ದು, ಈ ಸಂಬಂಧ ಅಧಿಕಾರಿಗಳು ಸಭೆ ನಡೆಸಬೇಕು. ಹಣದ ಕೊರತೆಯಿಲ್ಲ, ಜಿಲ್ಲಾಧಿಕಾರಿ ಖಾತೆಯಲ್ಲಿ ಸಾಕಷ್ಟು ಹಣವಿದ್ದು, ಬಳಸಿಕೊಳಿ ಎಂದರು.

ಪೋಡಿ ಅಭಿಯಾನದಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲೂ ಪ್ರಥಮ ಸ್ಥಾನ ಕಾಯ್ದುಕೊಳ್ಳುವುದರೊಂದಿಗೆ ರಾಜ್ಯದ ಮೊದಲ ಪೋಡಿಮುಕ್ತ ಜಿಲ್ಲೆಯಾಗುವಂತೆ ನೋಡಿಕೊಳ್ಳಬೇಕೆಂದರು.

ಗ್ರಾಮೀಣ ರಸ್ತೆಗಳು, ರೈತರ ಜಮೀನುಗಳಿಗೆ ರಸ್ತೆ, ಸ್ಮಶಾನದ ರಸ್ತೆಗಳ ಒದಗಿಸುವ ಸಂಬಂಧ ವಾರದಲ್ಲಿ ಒಂದು ದಿನ ಅಥವ ಒಂದು ಮಧ್ಯಾಹ್ನ ಈ ಬಗೆಗೆ ಅಧಿಕಾರಿಗಳ ಸಭೆಯಾಗಬೇಕೆಂದರು.

ಜಿಲ್ಲೆಯ ಹಲವು ಕೆರೆಗಳಲ್ಲಿ ಮಳೆಯಿಲ್ಲದ ಕಾರಣ ಮರ ಗಿಡಗಳು ಬೆಳೆದಿದ್ದು ಅವುಗಳ ತೆರವುಗೊಳಿಸಬೇಕು, ಹೂಳು ತುಂಬಿರುವ ಕೆರೆಗಳ ಹೂಳು ತೆಗೆಯುವ ಕಾರ್ಯವಾಗಬೇಕೆಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನಿವೇಶನ ರಹಿತರಿಗೆ ಮಾರ್ಚ್ ಅಂತ್ಯದೊಳಗಾಗಿ ಗರಿಷ್ಟ ಪ್ರಮಾಣದ ನಿವೇಶನಗಳನ್ನು ಹಂಚಿಕೆ ಮಾಡಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲೆಯಲ್ಲಿ 20 ಸಾವಿರದಷ್ಟು ವಸತಿ ರಹಿತರು ನಿವೇಶನಗಳಿಗೆ ಅರ್ಜಿ ಸಲ್ಲಿಸಿದ್ದು, ಆದ್ಯತೆಯ ಮೇರೆಗೆ ನಿವೇಶನ ಹಂಚಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಸಿಇಓ ಕೆ.ಅನುರಾಧ, ಎಡಿಸಿ ಹೆಚ್.ಅಮರೇಶ್ ಜಿಲ್ಲಾಮಟ್ಟದ ಅಧಿಕಾರಿಗಳಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

11 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

22 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

23 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 day ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago