ರೇಷ್ಮೆ ಕೃಷಿಯು ರೈತರಿಗೆ ತ್ವರಿತ ಲಾಭ, ಹೆಚ್ಚಿನ ಉದ್ಯೋಗ ಸಾಮಾರ್ಥ್ಯ ಒದಗಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಕಡಿಮೆ ಅವಧಿ, ಕಡಿಮೆ ಬಂಡವಾಳದಲ್ಲಿ ಹೆಚ್ಚಿನ ಲಾಭ ನೀಡುವ ಬೆಳೆ ರೇಷ್ಮೆ ಕೃಷಿಯಾಗಿದೆ. ಸಿಲ್ಕ್ ಮತ್ತು ಮಿಲ್ಕ್ ಎಂದು ಖ್ಯಾತಿ ಪಡೆದಿರುವ ರೇಷ್ಮೆ ಕೃಷಿ ತನ್ನದೇ ಆದ ಮಹತ್ವವನ್ನು ಪಡೆದುಕೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 6289.72ಹೆಕ್ಟೇರ್ ಪ್ರದೇಶದಲ್ಲಿ527 ಹಳ್ಳಿಗಳಲ್ಲಿ 6321ಜನ ರೈತರು ರೇಷ್ಮೆ ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಬೇಸಿಗೆ ಕಾಲದಲ್ಲಿ ಉಷ್ಣಾಂಶ ಹೆಚ್ಚಿದ್ದು, ತೇವಾಂಶ ಕಡಿಮೆಯಾಗುವ ಕಾರಣ ರೇಷ್ಮೆ ಹುಳು ಸಾಕಾಣಿಕೆಯಲ್ಲಿ ಏರುಪೇರಾಗುವುದರಿಂದ ಬೆಳೆಗಳು ಹಾಲು ಮತ್ತು ಸಪ್ಪೆ ರೋಗಕ್ಕೆ ತುತ್ತಾಗುವ ಸಂಭವವಿರುತ್ತದೆ. ಈ ನಿಟ್ಟಿನಲ್ಲಿ ರೇಷ್ಮೆ ಕೃಷಿಕರು ಬೇಸಿಗೆ ಕಾಲದಲ್ಲಿ ಯಾವೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂಬ ಮಾಹಿತಿಯನ್ನು ರೇಷ್ಮೆ ಇಲಾಖೆಯು ನೀಡಿದೆ. ಆ ಮುಂಜಾಗ್ರತಾ ಕ್ರಮಗಳು ಈ ಕೆಳಕಂಡಂತಿವೆ…
*ರೇಷ್ಮೆ ಮನೆಯ ಮೇಲ್ಛಾವಣಿ ಬಿಸಿಲಿನಿಂದ ಕಾಯದಂತೆ ದಪ್ಪವಾಗಿ ತೆಂಗಿನಗರಿ, ಗೋಣಿ ಚೀಲ, ಶೆಡ್ ನೆಟ್ ಹೊದಿಸಿ ಹನಿ ಅಥವಾ ತುಂತುರು ನೀರಾವರಿ ಮೂಲಕ ಆಗಿಂದಾಗ್ಗೆ ನೀರನ್ನು ಸಿಂಪಡಿಸಬೇಕು.
*ಹುಳು ಸಾಕಾಣಿಕೆಗೆ ಅಗತ್ಯವಾದ ಸೊಪ್ಪನ್ನು ತಂಪು ಹೊತ್ತಿನಲ್ಲಿ ಕಟಾವು ಮಾಡಬೇಕು. ಬೆಳಗ್ಗೆ ಹಾಗೂ ರಾತ್ರಿ ವೇಳೆ ಹುಳುಗಳಿಗೆ ಸೊಪ್ಪು ನೀಡಬೇಕು.
*ಕಟಾವು ಮಾಡಿದ ಸೊಪ್ಪನ್ನು ಬೇಗನೆ ಸೊಪ್ಪು ಶೇಖರಣೆ ಕೊಠಡಿಗೆ ಸಾಗಿಸಿ ತೇವಾಂಶ ಹಾಳಾಗದಂತೆ ಸೊಪ್ಪನ್ನು ತೆಳು ಗೋಣಿ ತಾಟನ್ನು ನೀರಿನಲ್ಲಿ ನೆನಸಿ ಸೊಪ್ಪಿನ ಮೇಲೆ ಒದಿಸಬೇಕು.
* ಹುಳು ಸಾಕಾಣಿಕೆ ಮನೆ ಹೊರಭಾಗದ ಕಿಟಿಕಿಗಳ ನೇರಕ್ಕೆ ಎತ್ತರದಲ್ಲಿ ಫಾಗರ್ಸ್ ಗಳನ್ನು ಅಳವಡಿಸಿಕೊಳ್ಳಬೇಕು.
* ಮಣ್ಣಿನ ಮಡಿಕೆಗಳನ್ನು ಹುಳು ಸಾಕಾಣಿಕೆ ಮನೆಯ ಒಳಗಡೆ ನೀರು ತುಂಬಿಸಿ ನೇತು ಹಾಕಿದರೆ ಶೈತ್ಯಾಂಶ ಹೆಚ್ಚು ಮಾಡಬಹುದು.
*ಚಾಕಿ ಹಂತದಿಂದ ಪ್ರತಿ ದಿನ ಸುಣ್ಣ ಬಳಸಿದರೆ ರೋಗ ನಿಯಂತ್ರಣ ಮಾಡಬಹುದು. ಪ್ರತಿ ಹಂತದಲ್ಲೂ ಜ್ವರದ ನಂತರ ಹಾಸಿಗೆ ಸೋಂಕು ನಿವಾರಕಗಳನ್ನು ಬಳಸಬೇಕು.
*ಹಣ್ಣಾದ ಹುಳುಗಳನ್ನು ಚಂದ್ರಿಕೆಗಳಿಗೆ ಬಿಟ್ಟ ನಂತರ ಚಂದ್ರಿಕೆಗಳನ್ನು ನೆರಳಿನಲ್ಲಿ ಇಡತಕ್ಕದ್ದು ಹಾಗೂ ಚಂದ್ರಿಕೆಗಳನ್ನು ಇಟ್ಟ ಕೊಠಡಿಯಲ್ಲಿ ನಿಗದಿತ ಉಷ್ಣಾಂಶ ಹಾಗೂ ಶೈತ್ಯಾಂಶ ಇರುವಂತೆ ನೋಡಿಕೊಳ್ಳಬೇಕು.
*ಹಣ್ಣಾದ ಹುಳುಹಳನ್ನು ಪ್ಲಾಸ್ಟಿಕ್ ಚಂದ್ರಿಕೆಗಳಿಗೆ ಬಿಟ್ಟ ನಂತರ ಕಿಟಕಿ ಬಾಗಿಲುಗಳಿಂದ ಮುಕ್ತ ಗಾಳಿ ಬರುವಂತೆ ತೆರದಿಡಬೇಕು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…