ರೇಷ್ಮೆ ಕೃಷಿಯು ರೈತರಿಗೆ ತ್ವರಿತ ಲಾಭ, ಹೆಚ್ಚಿನ ಉದ್ಯೋಗ ಸಾಮಾರ್ಥ್ಯ ಒದಗಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಕಡಿಮೆ ಅವಧಿ, ಕಡಿಮೆ ಬಂಡವಾಳದಲ್ಲಿ ಹೆಚ್ಚಿನ ಲಾಭ ನೀಡುವ ಬೆಳೆ ರೇಷ್ಮೆ ಕೃಷಿಯಾಗಿದೆ. ಸಿಲ್ಕ್ ಮತ್ತು ಮಿಲ್ಕ್ ಎಂದು ಖ್ಯಾತಿ ಪಡೆದಿರುವ ರೇಷ್ಮೆ ಕೃಷಿ ತನ್ನದೇ ಆದ ಮಹತ್ವವನ್ನು ಪಡೆದುಕೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 6289.72ಹೆಕ್ಟೇರ್ ಪ್ರದೇಶದಲ್ಲಿ527 ಹಳ್ಳಿಗಳಲ್ಲಿ 6321ಜನ ರೈತರು ರೇಷ್ಮೆ ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಬೇಸಿಗೆ ಕಾಲದಲ್ಲಿ ಉಷ್ಣಾಂಶ ಹೆಚ್ಚಿದ್ದು, ತೇವಾಂಶ ಕಡಿಮೆಯಾಗುವ ಕಾರಣ ರೇಷ್ಮೆ ಹುಳು ಸಾಕಾಣಿಕೆಯಲ್ಲಿ ಏರುಪೇರಾಗುವುದರಿಂದ ಬೆಳೆಗಳು ಹಾಲು ಮತ್ತು ಸಪ್ಪೆ ರೋಗಕ್ಕೆ ತುತ್ತಾಗುವ ಸಂಭವವಿರುತ್ತದೆ. ಈ ನಿಟ್ಟಿನಲ್ಲಿ ರೇಷ್ಮೆ ಕೃಷಿಕರು ಬೇಸಿಗೆ ಕಾಲದಲ್ಲಿ ಯಾವೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂಬ ಮಾಹಿತಿಯನ್ನು ರೇಷ್ಮೆ ಇಲಾಖೆಯು ನೀಡಿದೆ. ಆ ಮುಂಜಾಗ್ರತಾ ಕ್ರಮಗಳು ಈ ಕೆಳಕಂಡಂತಿವೆ…
*ರೇಷ್ಮೆ ಮನೆಯ ಮೇಲ್ಛಾವಣಿ ಬಿಸಿಲಿನಿಂದ ಕಾಯದಂತೆ ದಪ್ಪವಾಗಿ ತೆಂಗಿನಗರಿ, ಗೋಣಿ ಚೀಲ, ಶೆಡ್ ನೆಟ್ ಹೊದಿಸಿ ಹನಿ ಅಥವಾ ತುಂತುರು ನೀರಾವರಿ ಮೂಲಕ ಆಗಿಂದಾಗ್ಗೆ ನೀರನ್ನು ಸಿಂಪಡಿಸಬೇಕು.
*ಹುಳು ಸಾಕಾಣಿಕೆಗೆ ಅಗತ್ಯವಾದ ಸೊಪ್ಪನ್ನು ತಂಪು ಹೊತ್ತಿನಲ್ಲಿ ಕಟಾವು ಮಾಡಬೇಕು. ಬೆಳಗ್ಗೆ ಹಾಗೂ ರಾತ್ರಿ ವೇಳೆ ಹುಳುಗಳಿಗೆ ಸೊಪ್ಪು ನೀಡಬೇಕು.
*ಕಟಾವು ಮಾಡಿದ ಸೊಪ್ಪನ್ನು ಬೇಗನೆ ಸೊಪ್ಪು ಶೇಖರಣೆ ಕೊಠಡಿಗೆ ಸಾಗಿಸಿ ತೇವಾಂಶ ಹಾಳಾಗದಂತೆ ಸೊಪ್ಪನ್ನು ತೆಳು ಗೋಣಿ ತಾಟನ್ನು ನೀರಿನಲ್ಲಿ ನೆನಸಿ ಸೊಪ್ಪಿನ ಮೇಲೆ ಒದಿಸಬೇಕು.
* ಹುಳು ಸಾಕಾಣಿಕೆ ಮನೆ ಹೊರಭಾಗದ ಕಿಟಿಕಿಗಳ ನೇರಕ್ಕೆ ಎತ್ತರದಲ್ಲಿ ಫಾಗರ್ಸ್ ಗಳನ್ನು ಅಳವಡಿಸಿಕೊಳ್ಳಬೇಕು.
* ಮಣ್ಣಿನ ಮಡಿಕೆಗಳನ್ನು ಹುಳು ಸಾಕಾಣಿಕೆ ಮನೆಯ ಒಳಗಡೆ ನೀರು ತುಂಬಿಸಿ ನೇತು ಹಾಕಿದರೆ ಶೈತ್ಯಾಂಶ ಹೆಚ್ಚು ಮಾಡಬಹುದು.
*ಚಾಕಿ ಹಂತದಿಂದ ಪ್ರತಿ ದಿನ ಸುಣ್ಣ ಬಳಸಿದರೆ ರೋಗ ನಿಯಂತ್ರಣ ಮಾಡಬಹುದು. ಪ್ರತಿ ಹಂತದಲ್ಲೂ ಜ್ವರದ ನಂತರ ಹಾಸಿಗೆ ಸೋಂಕು ನಿವಾರಕಗಳನ್ನು ಬಳಸಬೇಕು.
*ಹಣ್ಣಾದ ಹುಳುಗಳನ್ನು ಚಂದ್ರಿಕೆಗಳಿಗೆ ಬಿಟ್ಟ ನಂತರ ಚಂದ್ರಿಕೆಗಳನ್ನು ನೆರಳಿನಲ್ಲಿ ಇಡತಕ್ಕದ್ದು ಹಾಗೂ ಚಂದ್ರಿಕೆಗಳನ್ನು ಇಟ್ಟ ಕೊಠಡಿಯಲ್ಲಿ ನಿಗದಿತ ಉಷ್ಣಾಂಶ ಹಾಗೂ ಶೈತ್ಯಾಂಶ ಇರುವಂತೆ ನೋಡಿಕೊಳ್ಳಬೇಕು.
*ಹಣ್ಣಾದ ಹುಳುಹಳನ್ನು ಪ್ಲಾಸ್ಟಿಕ್ ಚಂದ್ರಿಕೆಗಳಿಗೆ ಬಿಟ್ಟ ನಂತರ ಕಿಟಕಿ ಬಾಗಿಲುಗಳಿಂದ ಮುಕ್ತ ಗಾಳಿ ಬರುವಂತೆ ತೆರದಿಡಬೇಕು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…