ರೇಷ್ಮೆ ಕೃಷಿಯು ರೈತರಿಗೆ ತ್ವರಿತ ಲಾಭ, ಹೆಚ್ಚಿನ ಉದ್ಯೋಗ ಸಾಮಾರ್ಥ್ಯ ಒದಗಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಕಡಿಮೆ ಅವಧಿ, ಕಡಿಮೆ ಬಂಡವಾಳದಲ್ಲಿ ಹೆಚ್ಚಿನ ಲಾಭ ನೀಡುವ ಬೆಳೆ ರೇಷ್ಮೆ ಕೃಷಿಯಾಗಿದೆ. ಸಿಲ್ಕ್ ಮತ್ತು ಮಿಲ್ಕ್ ಎಂದು ಖ್ಯಾತಿ ಪಡೆದಿರುವ ರೇಷ್ಮೆ ಕೃಷಿ ತನ್ನದೇ ಆದ ಮಹತ್ವವನ್ನು ಪಡೆದುಕೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 6289.72ಹೆಕ್ಟೇರ್ ಪ್ರದೇಶದಲ್ಲಿ527 ಹಳ್ಳಿಗಳಲ್ಲಿ 6321ಜನ ರೈತರು ರೇಷ್ಮೆ ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಬೇಸಿಗೆ ಕಾಲದಲ್ಲಿ ಉಷ್ಣಾಂಶ ಹೆಚ್ಚಿದ್ದು, ತೇವಾಂಶ ಕಡಿಮೆಯಾಗುವ ಕಾರಣ ರೇಷ್ಮೆ ಹುಳು ಸಾಕಾಣಿಕೆಯಲ್ಲಿ ಏರುಪೇರಾಗುವುದರಿಂದ ಬೆಳೆಗಳು ಹಾಲು ಮತ್ತು ಸಪ್ಪೆ ರೋಗಕ್ಕೆ ತುತ್ತಾಗುವ ಸಂಭವವಿರುತ್ತದೆ. ಈ ನಿಟ್ಟಿನಲ್ಲಿ ರೇಷ್ಮೆ ಕೃಷಿಕರು ಬೇಸಿಗೆ ಕಾಲದಲ್ಲಿ ಯಾವೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂಬ ಮಾಹಿತಿಯನ್ನು ರೇಷ್ಮೆ ಇಲಾಖೆಯು ನೀಡಿದೆ. ಆ ಮುಂಜಾಗ್ರತಾ ಕ್ರಮಗಳು ಈ ಕೆಳಕಂಡಂತಿವೆ…
*ರೇಷ್ಮೆ ಮನೆಯ ಮೇಲ್ಛಾವಣಿ ಬಿಸಿಲಿನಿಂದ ಕಾಯದಂತೆ ದಪ್ಪವಾಗಿ ತೆಂಗಿನಗರಿ, ಗೋಣಿ ಚೀಲ, ಶೆಡ್ ನೆಟ್ ಹೊದಿಸಿ ಹನಿ ಅಥವಾ ತುಂತುರು ನೀರಾವರಿ ಮೂಲಕ ಆಗಿಂದಾಗ್ಗೆ ನೀರನ್ನು ಸಿಂಪಡಿಸಬೇಕು.
*ಹುಳು ಸಾಕಾಣಿಕೆಗೆ ಅಗತ್ಯವಾದ ಸೊಪ್ಪನ್ನು ತಂಪು ಹೊತ್ತಿನಲ್ಲಿ ಕಟಾವು ಮಾಡಬೇಕು. ಬೆಳಗ್ಗೆ ಹಾಗೂ ರಾತ್ರಿ ವೇಳೆ ಹುಳುಗಳಿಗೆ ಸೊಪ್ಪು ನೀಡಬೇಕು.
*ಕಟಾವು ಮಾಡಿದ ಸೊಪ್ಪನ್ನು ಬೇಗನೆ ಸೊಪ್ಪು ಶೇಖರಣೆ ಕೊಠಡಿಗೆ ಸಾಗಿಸಿ ತೇವಾಂಶ ಹಾಳಾಗದಂತೆ ಸೊಪ್ಪನ್ನು ತೆಳು ಗೋಣಿ ತಾಟನ್ನು ನೀರಿನಲ್ಲಿ ನೆನಸಿ ಸೊಪ್ಪಿನ ಮೇಲೆ ಒದಿಸಬೇಕು.
* ಹುಳು ಸಾಕಾಣಿಕೆ ಮನೆ ಹೊರಭಾಗದ ಕಿಟಿಕಿಗಳ ನೇರಕ್ಕೆ ಎತ್ತರದಲ್ಲಿ ಫಾಗರ್ಸ್ ಗಳನ್ನು ಅಳವಡಿಸಿಕೊಳ್ಳಬೇಕು.
* ಮಣ್ಣಿನ ಮಡಿಕೆಗಳನ್ನು ಹುಳು ಸಾಕಾಣಿಕೆ ಮನೆಯ ಒಳಗಡೆ ನೀರು ತುಂಬಿಸಿ ನೇತು ಹಾಕಿದರೆ ಶೈತ್ಯಾಂಶ ಹೆಚ್ಚು ಮಾಡಬಹುದು.
*ಚಾಕಿ ಹಂತದಿಂದ ಪ್ರತಿ ದಿನ ಸುಣ್ಣ ಬಳಸಿದರೆ ರೋಗ ನಿಯಂತ್ರಣ ಮಾಡಬಹುದು. ಪ್ರತಿ ಹಂತದಲ್ಲೂ ಜ್ವರದ ನಂತರ ಹಾಸಿಗೆ ಸೋಂಕು ನಿವಾರಕಗಳನ್ನು ಬಳಸಬೇಕು.
*ಹಣ್ಣಾದ ಹುಳುಗಳನ್ನು ಚಂದ್ರಿಕೆಗಳಿಗೆ ಬಿಟ್ಟ ನಂತರ ಚಂದ್ರಿಕೆಗಳನ್ನು ನೆರಳಿನಲ್ಲಿ ಇಡತಕ್ಕದ್ದು ಹಾಗೂ ಚಂದ್ರಿಕೆಗಳನ್ನು ಇಟ್ಟ ಕೊಠಡಿಯಲ್ಲಿ ನಿಗದಿತ ಉಷ್ಣಾಂಶ ಹಾಗೂ ಶೈತ್ಯಾಂಶ ಇರುವಂತೆ ನೋಡಿಕೊಳ್ಳಬೇಕು.
*ಹಣ್ಣಾದ ಹುಳುಹಳನ್ನು ಪ್ಲಾಸ್ಟಿಕ್ ಚಂದ್ರಿಕೆಗಳಿಗೆ ಬಿಟ್ಟ ನಂತರ ಕಿಟಕಿ ಬಾಗಿಲುಗಳಿಂದ ಮುಕ್ತ ಗಾಳಿ ಬರುವಂತೆ ತೆರದಿಡಬೇಕು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…