Categories: ಕೋಲಾರ

ಬೇಸಿಗೆ ಪ್ರಾರಂಭ: ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡ್ ಗಳಿಗೆ ಯರಗೋಳ್ ನೀರು ಹೋಗುವಂತೆ ಮಾಡಿ ನೀರಿಗೆ‌ ಕೊರತೆ‌ ಇಲ್ಲ ಆದರೆ ಈಗ ಎಂಟು ಗಂಟೆಗಳು ಮಾತ್ರವೇ ಮೋಟಾರ್ ರನ್ ಮಾಡಿದ್ದು ಇನ್ನೂ ಹೆಚ್ಚಿನ ಸಮಯ ವಿಸ್ತರಣೆ ಮಾಡಿ ನೀರು ಕೊಡುವ ಕೆಲಸವನ್ನು ಮಾಡಿ ಎಂದು ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ ನೀಡಿದರು.

ಕೋಲಾರ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದೆ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಯರಗೋಳ್ ನೀರು ಜೊತೆಗೆ ನಗರಸಭೆ ವ್ಯಾಪ್ತಿಯಲ್ಲಿನ ಕೊಳವೆ ಬಾವಿಗಳಲ್ಲಿ ಮೋಟಾರ್ ಪಂಪ್ ರಿಪೇರಿ ಮಾಡಿಸಬೇಕು ನೀರಿನ ಅಭಾವ ಇರುವ ಕಡೆ ನಗರಸಭೆ ಸದಸ್ಯರು, ಅಧಿಕಾರಿಗಳು, ವಾಟರ್ ಮೆನ್ ಕರೆದುಕೊಂಡು ವಾರ್ಡ್ ಗೆ ಹೋಗಿ‌ ಪರಿಶೀಲಿಸಬೇಕು ಎಂದು ತಿಳಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ನಡೆಯುವ ಅಭಿವೃದ್ಧಿಗೆ ಸಂಬಂಧಿಸಿದದ್ದನ್ನು ಸಂಬಂಧಪಟ್ಟವರು ನೇರವಾಗಿ ಪರಿಶೀಲನೆ ನಡೆಸಿ ಕಾಮಗಾರಿ ಪೂರ್ಣವಾಗಿದ್ದರೆ ಮಾತ್ರ ನಗರಸಭೆ ಅಧೀನಕ್ಕೆ ಪಡೆದುಕೊಳ್ಳಿ ಗುತ್ತಿಗೆದಾರರು ಅಷ್ಟೇ ಪೂರ್ಣವಾದರೆ ಮಾತ್ರವೇ ಹಸ್ತಾಂತರ ಮಾಡಬೇಕು ಏನಾದರೂ ತೊಂದರೆಗಳು ಇದ್ದರೆ ನಮ್ಮ ಗಮನಕ್ಕೆ ತಂದರೆ ಮೇಲಾಧಿಕಾರಿಗಳ ಜೊತೆ ಮಾತನಾಡಿ ಕೆಲಸ ಮಾಡಿಸಬಹುದು ಜೊತೆಗೆ ಉಸ್ತುವಾರಿ ಸಚಿವರ ಜೊತೆ ಮಾತನಾಡುತ್ತೇನೆ ಎಂದರು

ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ ನಗರದಲ್ಲಿ ಪಾದಚಾರಿ ಮಾರ್ಗವು ಒತ್ತುವರಿಯಾಗಿದೆ ಇದರ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ ಪೊಲೀಸರು, ನಗರಸಭೆ ಸದಸ್ಯರು ಹಾಗೂ ನಗರಸಭೆ ಅಧಿಕಾರಿಗಳು ಸೇರಿ‌ ಪಾದಚಾರಿ ಒತ್ತುವರಿ ತೆರವು ಮಾಡಬೇಕು ಪಾದಚಾರಿ ಮಾರ್ಗ ಇರುವುದು ‌ಪಾದಚಾರಿಗಳು ನಡೆದಾಡಲು. ಬೀದಿಬದಿ ಮಾರಾಟಗಾರರಿಗೆ ಪ್ರತ್ಯೇಕವಾದ ವ್ಯವಸ್ಥೆ ಮಾಡಲಾಗುತ್ತದೆ ಜೊತೆಗೆ ಸ್ವಚ್ಚತಾ ಬಗ್ಗೆ ಗಮನ ಕೊಡಬೇಡಿ. ೨ ಕೋಟೆ ಅನುದಾನದಲ್ಲಿ ಬರಿ ವಾಹನ ಖರೀದಿಸಿದ್ದಾರೆ ಅವು ಸಮರ್ಪಕವಾಗಿ ಬಳಕೆಯಾಗಬೇಕು ಎಂದರು.

ನಗರಸಭೆ ಸದಸ್ಯರು ಮಾತನಾಡಿ ನಗರದ ಹಲವು ವಾರ್ಡ್ ಗಳಿಗೆ ಯರಗೋಳ್ ನೀರು ಬರುತ್ತಿಲ್ಲ ಕೆಲವೆಡೆ ಕಡಿಮೆ ನೀರು ಬರುತ್ತದೆ ಒಳಚರಂಡಿ ಮಂಡಳಿ ಬಳಿಯೂ ಆದಾಯ ಇಲ್ಲ ಯರಗೋಳ್ ಗುತ್ತಿಗೆದಾರರ ನಿರ್ವಹಣೆ ಅವಧಿ‌ ಮುಗಿದು ಹೋಗಿದೆ ಸರ್ಕಾರವೇ ನಿರ್ವಹಣೆ ಮಾಡಬೇಕು. ಈ ಬಗ್ಗೆ ಸಚಿವರ ಜೊತೆ ಮಾತನಾಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಿದರು.

ಕೋಲಾರ ನಗರದ ಒಳಾಂಗಣ ಕ್ರೀಡಾಂಗಣಕ್ಕೆ ಹೆಸರಿಡಬೇಕಾಗಿದೆ ರಾಜ್ಯದ ಪ್ರಥಮ ಮುಖ್ಯಮಂತ್ರಿ ಮಾಜಿ ಕೆ.ಸಿ.ರೆಡ್ಡಿ ಸಾಹಿತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಸೇರಿದಂತೆ ರಾಜಮಾತೆ ಹಾಗೂ ಮಾಜಿ ಐಎಎಸ್ ಅಧಿಕಾರಿ‌‌ ದಿವಂಗತ ಸಿ.ಮುನಿಸ್ವಾಮಿ ಹೆಸರು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ತೀರ್ಮಾನಿಸಿದರು.

ಸಭೆಯ ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ವಹಿಸಿದ್ದರು, ಉಪಾಧ್ಯಕ್ಷೆ ಸಂಗೀತಾ, ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ಪೌರಾಯುಕ್ತ ಪ್ರಸಾದ್ ಅಧಿಕಾರಿಗಳು ಸದಸ್ಯರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

4 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

9 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

9 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

14 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago