Categories: ಕೋಲಾರ

ಬೇಸಿಗೆ ಪ್ರಾರಂಭ: ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡ್ ಗಳಿಗೆ ಯರಗೋಳ್ ನೀರು ಹೋಗುವಂತೆ ಮಾಡಿ ನೀರಿಗೆ‌ ಕೊರತೆ‌ ಇಲ್ಲ ಆದರೆ ಈಗ ಎಂಟು ಗಂಟೆಗಳು ಮಾತ್ರವೇ ಮೋಟಾರ್ ರನ್ ಮಾಡಿದ್ದು ಇನ್ನೂ ಹೆಚ್ಚಿನ ಸಮಯ ವಿಸ್ತರಣೆ ಮಾಡಿ ನೀರು ಕೊಡುವ ಕೆಲಸವನ್ನು ಮಾಡಿ ಎಂದು ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ ನೀಡಿದರು.

ಕೋಲಾರ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದೆ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಯರಗೋಳ್ ನೀರು ಜೊತೆಗೆ ನಗರಸಭೆ ವ್ಯಾಪ್ತಿಯಲ್ಲಿನ ಕೊಳವೆ ಬಾವಿಗಳಲ್ಲಿ ಮೋಟಾರ್ ಪಂಪ್ ರಿಪೇರಿ ಮಾಡಿಸಬೇಕು ನೀರಿನ ಅಭಾವ ಇರುವ ಕಡೆ ನಗರಸಭೆ ಸದಸ್ಯರು, ಅಧಿಕಾರಿಗಳು, ವಾಟರ್ ಮೆನ್ ಕರೆದುಕೊಂಡು ವಾರ್ಡ್ ಗೆ ಹೋಗಿ‌ ಪರಿಶೀಲಿಸಬೇಕು ಎಂದು ತಿಳಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ನಡೆಯುವ ಅಭಿವೃದ್ಧಿಗೆ ಸಂಬಂಧಿಸಿದದ್ದನ್ನು ಸಂಬಂಧಪಟ್ಟವರು ನೇರವಾಗಿ ಪರಿಶೀಲನೆ ನಡೆಸಿ ಕಾಮಗಾರಿ ಪೂರ್ಣವಾಗಿದ್ದರೆ ಮಾತ್ರ ನಗರಸಭೆ ಅಧೀನಕ್ಕೆ ಪಡೆದುಕೊಳ್ಳಿ ಗುತ್ತಿಗೆದಾರರು ಅಷ್ಟೇ ಪೂರ್ಣವಾದರೆ ಮಾತ್ರವೇ ಹಸ್ತಾಂತರ ಮಾಡಬೇಕು ಏನಾದರೂ ತೊಂದರೆಗಳು ಇದ್ದರೆ ನಮ್ಮ ಗಮನಕ್ಕೆ ತಂದರೆ ಮೇಲಾಧಿಕಾರಿಗಳ ಜೊತೆ ಮಾತನಾಡಿ ಕೆಲಸ ಮಾಡಿಸಬಹುದು ಜೊತೆಗೆ ಉಸ್ತುವಾರಿ ಸಚಿವರ ಜೊತೆ ಮಾತನಾಡುತ್ತೇನೆ ಎಂದರು

ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ ನಗರದಲ್ಲಿ ಪಾದಚಾರಿ ಮಾರ್ಗವು ಒತ್ತುವರಿಯಾಗಿದೆ ಇದರ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ ಪೊಲೀಸರು, ನಗರಸಭೆ ಸದಸ್ಯರು ಹಾಗೂ ನಗರಸಭೆ ಅಧಿಕಾರಿಗಳು ಸೇರಿ‌ ಪಾದಚಾರಿ ಒತ್ತುವರಿ ತೆರವು ಮಾಡಬೇಕು ಪಾದಚಾರಿ ಮಾರ್ಗ ಇರುವುದು ‌ಪಾದಚಾರಿಗಳು ನಡೆದಾಡಲು. ಬೀದಿಬದಿ ಮಾರಾಟಗಾರರಿಗೆ ಪ್ರತ್ಯೇಕವಾದ ವ್ಯವಸ್ಥೆ ಮಾಡಲಾಗುತ್ತದೆ ಜೊತೆಗೆ ಸ್ವಚ್ಚತಾ ಬಗ್ಗೆ ಗಮನ ಕೊಡಬೇಡಿ. ೨ ಕೋಟೆ ಅನುದಾನದಲ್ಲಿ ಬರಿ ವಾಹನ ಖರೀದಿಸಿದ್ದಾರೆ ಅವು ಸಮರ್ಪಕವಾಗಿ ಬಳಕೆಯಾಗಬೇಕು ಎಂದರು.

ನಗರಸಭೆ ಸದಸ್ಯರು ಮಾತನಾಡಿ ನಗರದ ಹಲವು ವಾರ್ಡ್ ಗಳಿಗೆ ಯರಗೋಳ್ ನೀರು ಬರುತ್ತಿಲ್ಲ ಕೆಲವೆಡೆ ಕಡಿಮೆ ನೀರು ಬರುತ್ತದೆ ಒಳಚರಂಡಿ ಮಂಡಳಿ ಬಳಿಯೂ ಆದಾಯ ಇಲ್ಲ ಯರಗೋಳ್ ಗುತ್ತಿಗೆದಾರರ ನಿರ್ವಹಣೆ ಅವಧಿ‌ ಮುಗಿದು ಹೋಗಿದೆ ಸರ್ಕಾರವೇ ನಿರ್ವಹಣೆ ಮಾಡಬೇಕು. ಈ ಬಗ್ಗೆ ಸಚಿವರ ಜೊತೆ ಮಾತನಾಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಿದರು.

ಕೋಲಾರ ನಗರದ ಒಳಾಂಗಣ ಕ್ರೀಡಾಂಗಣಕ್ಕೆ ಹೆಸರಿಡಬೇಕಾಗಿದೆ ರಾಜ್ಯದ ಪ್ರಥಮ ಮುಖ್ಯಮಂತ್ರಿ ಮಾಜಿ ಕೆ.ಸಿ.ರೆಡ್ಡಿ ಸಾಹಿತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಸೇರಿದಂತೆ ರಾಜಮಾತೆ ಹಾಗೂ ಮಾಜಿ ಐಎಎಸ್ ಅಧಿಕಾರಿ‌‌ ದಿವಂಗತ ಸಿ.ಮುನಿಸ್ವಾಮಿ ಹೆಸರು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ತೀರ್ಮಾನಿಸಿದರು.

ಸಭೆಯ ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ವಹಿಸಿದ್ದರು, ಉಪಾಧ್ಯಕ್ಷೆ ಸಂಗೀತಾ, ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ಪೌರಾಯುಕ್ತ ಪ್ರಸಾದ್ ಅಧಿಕಾರಿಗಳು ಸದಸ್ಯರು ಇದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

3 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

3 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

4 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

5 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

7 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

13 hours ago