Categories: ಕೋಲಾರ

ಬೇಸಿಗೆ ಪ್ರಾರಂಭ: ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡ್ ಗಳಿಗೆ ಯರಗೋಳ್ ನೀರು ಹೋಗುವಂತೆ ಮಾಡಿ ನೀರಿಗೆ‌ ಕೊರತೆ‌ ಇಲ್ಲ ಆದರೆ ಈಗ ಎಂಟು ಗಂಟೆಗಳು ಮಾತ್ರವೇ ಮೋಟಾರ್ ರನ್ ಮಾಡಿದ್ದು ಇನ್ನೂ ಹೆಚ್ಚಿನ ಸಮಯ ವಿಸ್ತರಣೆ ಮಾಡಿ ನೀರು ಕೊಡುವ ಕೆಲಸವನ್ನು ಮಾಡಿ ಎಂದು ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ ನೀಡಿದರು.

ಕೋಲಾರ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದೆ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಯರಗೋಳ್ ನೀರು ಜೊತೆಗೆ ನಗರಸಭೆ ವ್ಯಾಪ್ತಿಯಲ್ಲಿನ ಕೊಳವೆ ಬಾವಿಗಳಲ್ಲಿ ಮೋಟಾರ್ ಪಂಪ್ ರಿಪೇರಿ ಮಾಡಿಸಬೇಕು ನೀರಿನ ಅಭಾವ ಇರುವ ಕಡೆ ನಗರಸಭೆ ಸದಸ್ಯರು, ಅಧಿಕಾರಿಗಳು, ವಾಟರ್ ಮೆನ್ ಕರೆದುಕೊಂಡು ವಾರ್ಡ್ ಗೆ ಹೋಗಿ‌ ಪರಿಶೀಲಿಸಬೇಕು ಎಂದು ತಿಳಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ನಡೆಯುವ ಅಭಿವೃದ್ಧಿಗೆ ಸಂಬಂಧಿಸಿದದ್ದನ್ನು ಸಂಬಂಧಪಟ್ಟವರು ನೇರವಾಗಿ ಪರಿಶೀಲನೆ ನಡೆಸಿ ಕಾಮಗಾರಿ ಪೂರ್ಣವಾಗಿದ್ದರೆ ಮಾತ್ರ ನಗರಸಭೆ ಅಧೀನಕ್ಕೆ ಪಡೆದುಕೊಳ್ಳಿ ಗುತ್ತಿಗೆದಾರರು ಅಷ್ಟೇ ಪೂರ್ಣವಾದರೆ ಮಾತ್ರವೇ ಹಸ್ತಾಂತರ ಮಾಡಬೇಕು ಏನಾದರೂ ತೊಂದರೆಗಳು ಇದ್ದರೆ ನಮ್ಮ ಗಮನಕ್ಕೆ ತಂದರೆ ಮೇಲಾಧಿಕಾರಿಗಳ ಜೊತೆ ಮಾತನಾಡಿ ಕೆಲಸ ಮಾಡಿಸಬಹುದು ಜೊತೆಗೆ ಉಸ್ತುವಾರಿ ಸಚಿವರ ಜೊತೆ ಮಾತನಾಡುತ್ತೇನೆ ಎಂದರು

ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ ನಗರದಲ್ಲಿ ಪಾದಚಾರಿ ಮಾರ್ಗವು ಒತ್ತುವರಿಯಾಗಿದೆ ಇದರ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ ಪೊಲೀಸರು, ನಗರಸಭೆ ಸದಸ್ಯರು ಹಾಗೂ ನಗರಸಭೆ ಅಧಿಕಾರಿಗಳು ಸೇರಿ‌ ಪಾದಚಾರಿ ಒತ್ತುವರಿ ತೆರವು ಮಾಡಬೇಕು ಪಾದಚಾರಿ ಮಾರ್ಗ ಇರುವುದು ‌ಪಾದಚಾರಿಗಳು ನಡೆದಾಡಲು. ಬೀದಿಬದಿ ಮಾರಾಟಗಾರರಿಗೆ ಪ್ರತ್ಯೇಕವಾದ ವ್ಯವಸ್ಥೆ ಮಾಡಲಾಗುತ್ತದೆ ಜೊತೆಗೆ ಸ್ವಚ್ಚತಾ ಬಗ್ಗೆ ಗಮನ ಕೊಡಬೇಡಿ. ೨ ಕೋಟೆ ಅನುದಾನದಲ್ಲಿ ಬರಿ ವಾಹನ ಖರೀದಿಸಿದ್ದಾರೆ ಅವು ಸಮರ್ಪಕವಾಗಿ ಬಳಕೆಯಾಗಬೇಕು ಎಂದರು.

ನಗರಸಭೆ ಸದಸ್ಯರು ಮಾತನಾಡಿ ನಗರದ ಹಲವು ವಾರ್ಡ್ ಗಳಿಗೆ ಯರಗೋಳ್ ನೀರು ಬರುತ್ತಿಲ್ಲ ಕೆಲವೆಡೆ ಕಡಿಮೆ ನೀರು ಬರುತ್ತದೆ ಒಳಚರಂಡಿ ಮಂಡಳಿ ಬಳಿಯೂ ಆದಾಯ ಇಲ್ಲ ಯರಗೋಳ್ ಗುತ್ತಿಗೆದಾರರ ನಿರ್ವಹಣೆ ಅವಧಿ‌ ಮುಗಿದು ಹೋಗಿದೆ ಸರ್ಕಾರವೇ ನಿರ್ವಹಣೆ ಮಾಡಬೇಕು. ಈ ಬಗ್ಗೆ ಸಚಿವರ ಜೊತೆ ಮಾತನಾಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಿದರು.

ಕೋಲಾರ ನಗರದ ಒಳಾಂಗಣ ಕ್ರೀಡಾಂಗಣಕ್ಕೆ ಹೆಸರಿಡಬೇಕಾಗಿದೆ ರಾಜ್ಯದ ಪ್ರಥಮ ಮುಖ್ಯಮಂತ್ರಿ ಮಾಜಿ ಕೆ.ಸಿ.ರೆಡ್ಡಿ ಸಾಹಿತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಸೇರಿದಂತೆ ರಾಜಮಾತೆ ಹಾಗೂ ಮಾಜಿ ಐಎಎಸ್ ಅಧಿಕಾರಿ‌‌ ದಿವಂಗತ ಸಿ.ಮುನಿಸ್ವಾಮಿ ಹೆಸರು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ತೀರ್ಮಾನಿಸಿದರು.

ಸಭೆಯ ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ವಹಿಸಿದ್ದರು, ಉಪಾಧ್ಯಕ್ಷೆ ಸಂಗೀತಾ, ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ಪೌರಾಯುಕ್ತ ಪ್ರಸಾದ್ ಅಧಿಕಾರಿಗಳು ಸದಸ್ಯರು ಇದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

11 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

22 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

23 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 day ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago