Categories: ಕೋಲಾರ

ಬೇಸಿಗೆ ಪ್ರಾರಂಭ: ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡ್ ಗಳಿಗೆ ಯರಗೋಳ್ ನೀರು ಹೋಗುವಂತೆ ಮಾಡಿ ನೀರಿಗೆ‌ ಕೊರತೆ‌ ಇಲ್ಲ ಆದರೆ ಈಗ ಎಂಟು ಗಂಟೆಗಳು ಮಾತ್ರವೇ ಮೋಟಾರ್ ರನ್ ಮಾಡಿದ್ದು ಇನ್ನೂ ಹೆಚ್ಚಿನ ಸಮಯ ವಿಸ್ತರಣೆ ಮಾಡಿ ನೀರು ಕೊಡುವ ಕೆಲಸವನ್ನು ಮಾಡಿ ಎಂದು ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ ನೀಡಿದರು.

ಕೋಲಾರ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದೆ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಯರಗೋಳ್ ನೀರು ಜೊತೆಗೆ ನಗರಸಭೆ ವ್ಯಾಪ್ತಿಯಲ್ಲಿನ ಕೊಳವೆ ಬಾವಿಗಳಲ್ಲಿ ಮೋಟಾರ್ ಪಂಪ್ ರಿಪೇರಿ ಮಾಡಿಸಬೇಕು ನೀರಿನ ಅಭಾವ ಇರುವ ಕಡೆ ನಗರಸಭೆ ಸದಸ್ಯರು, ಅಧಿಕಾರಿಗಳು, ವಾಟರ್ ಮೆನ್ ಕರೆದುಕೊಂಡು ವಾರ್ಡ್ ಗೆ ಹೋಗಿ‌ ಪರಿಶೀಲಿಸಬೇಕು ಎಂದು ತಿಳಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ನಡೆಯುವ ಅಭಿವೃದ್ಧಿಗೆ ಸಂಬಂಧಿಸಿದದ್ದನ್ನು ಸಂಬಂಧಪಟ್ಟವರು ನೇರವಾಗಿ ಪರಿಶೀಲನೆ ನಡೆಸಿ ಕಾಮಗಾರಿ ಪೂರ್ಣವಾಗಿದ್ದರೆ ಮಾತ್ರ ನಗರಸಭೆ ಅಧೀನಕ್ಕೆ ಪಡೆದುಕೊಳ್ಳಿ ಗುತ್ತಿಗೆದಾರರು ಅಷ್ಟೇ ಪೂರ್ಣವಾದರೆ ಮಾತ್ರವೇ ಹಸ್ತಾಂತರ ಮಾಡಬೇಕು ಏನಾದರೂ ತೊಂದರೆಗಳು ಇದ್ದರೆ ನಮ್ಮ ಗಮನಕ್ಕೆ ತಂದರೆ ಮೇಲಾಧಿಕಾರಿಗಳ ಜೊತೆ ಮಾತನಾಡಿ ಕೆಲಸ ಮಾಡಿಸಬಹುದು ಜೊತೆಗೆ ಉಸ್ತುವಾರಿ ಸಚಿವರ ಜೊತೆ ಮಾತನಾಡುತ್ತೇನೆ ಎಂದರು

ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ ನಗರದಲ್ಲಿ ಪಾದಚಾರಿ ಮಾರ್ಗವು ಒತ್ತುವರಿಯಾಗಿದೆ ಇದರ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ ಪೊಲೀಸರು, ನಗರಸಭೆ ಸದಸ್ಯರು ಹಾಗೂ ನಗರಸಭೆ ಅಧಿಕಾರಿಗಳು ಸೇರಿ‌ ಪಾದಚಾರಿ ಒತ್ತುವರಿ ತೆರವು ಮಾಡಬೇಕು ಪಾದಚಾರಿ ಮಾರ್ಗ ಇರುವುದು ‌ಪಾದಚಾರಿಗಳು ನಡೆದಾಡಲು. ಬೀದಿಬದಿ ಮಾರಾಟಗಾರರಿಗೆ ಪ್ರತ್ಯೇಕವಾದ ವ್ಯವಸ್ಥೆ ಮಾಡಲಾಗುತ್ತದೆ ಜೊತೆಗೆ ಸ್ವಚ್ಚತಾ ಬಗ್ಗೆ ಗಮನ ಕೊಡಬೇಡಿ. ೨ ಕೋಟೆ ಅನುದಾನದಲ್ಲಿ ಬರಿ ವಾಹನ ಖರೀದಿಸಿದ್ದಾರೆ ಅವು ಸಮರ್ಪಕವಾಗಿ ಬಳಕೆಯಾಗಬೇಕು ಎಂದರು.

ನಗರಸಭೆ ಸದಸ್ಯರು ಮಾತನಾಡಿ ನಗರದ ಹಲವು ವಾರ್ಡ್ ಗಳಿಗೆ ಯರಗೋಳ್ ನೀರು ಬರುತ್ತಿಲ್ಲ ಕೆಲವೆಡೆ ಕಡಿಮೆ ನೀರು ಬರುತ್ತದೆ ಒಳಚರಂಡಿ ಮಂಡಳಿ ಬಳಿಯೂ ಆದಾಯ ಇಲ್ಲ ಯರಗೋಳ್ ಗುತ್ತಿಗೆದಾರರ ನಿರ್ವಹಣೆ ಅವಧಿ‌ ಮುಗಿದು ಹೋಗಿದೆ ಸರ್ಕಾರವೇ ನಿರ್ವಹಣೆ ಮಾಡಬೇಕು. ಈ ಬಗ್ಗೆ ಸಚಿವರ ಜೊತೆ ಮಾತನಾಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಿದರು.

ಕೋಲಾರ ನಗರದ ಒಳಾಂಗಣ ಕ್ರೀಡಾಂಗಣಕ್ಕೆ ಹೆಸರಿಡಬೇಕಾಗಿದೆ ರಾಜ್ಯದ ಪ್ರಥಮ ಮುಖ್ಯಮಂತ್ರಿ ಮಾಜಿ ಕೆ.ಸಿ.ರೆಡ್ಡಿ ಸಾಹಿತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಸೇರಿದಂತೆ ರಾಜಮಾತೆ ಹಾಗೂ ಮಾಜಿ ಐಎಎಸ್ ಅಧಿಕಾರಿ‌‌ ದಿವಂಗತ ಸಿ.ಮುನಿಸ್ವಾಮಿ ಹೆಸರು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ತೀರ್ಮಾನಿಸಿದರು.

ಸಭೆಯ ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ವಹಿಸಿದ್ದರು, ಉಪಾಧ್ಯಕ್ಷೆ ಸಂಗೀತಾ, ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ಪೌರಾಯುಕ್ತ ಪ್ರಸಾದ್ ಅಧಿಕಾರಿಗಳು ಸದಸ್ಯರು ಇದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

5 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

10 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago