ಪ್ರಸ್ತುತ ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಜನ ಸಾಮಾನ್ಯರಿಗೆ ಮಾತ್ರವಲ್ಲದೆ ಪಕ್ಷಿಗಳಿಗೆ ಕೂಡಾ ಕುಡಿಯುವ ನೀರಿನ ಅಭಾವದಿಂದ ತೊಂದರೆಗಳಾಗುವ ಸಾಧ್ಯತೆ ಇರುತ್ತದೆ. ಬೇಸಿಗೆಯಲ್ಲಿ ಉಷ್ಣಾಂಶ ಹೆಚ್ಚಾಗಿದ್ದಾಗ ಪಕ್ಷಿಗಳಿಗೆ ಹೆಚ್ಚಿನ ನೀರಿನ ಅಗತ್ಯವಿದ್ದು ಪಕ್ಷಿಗಳನ್ನು ಬಿಸಿಲಿನ ಶಾಖದ ಹೊಡೆತದಿಂದ ರಕ್ಷಿಸಲು ಅವುಗಳಿಗೆ ಕುಡಿಯುವ ನೀರು ಒದಗಿಸುವುದು ಅತ್ಯವಶ್ಯಕವಾಗಿರುತ್ತದೆ.
ಈ ಹಿನ್ನಲೆಯಲ್ಲಿ ಪಕ್ಷಿ ಸಂಕುಲದ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಪಕ್ಷಿಗಳಿಗೆ ನೀರು ಕುಡಿಯಲು ಅನುಕೂಲವಾಗುವಂತಹ ಮಡಿಕೆ, ಪಾತ್ರೆ, ಟಬ್ ಗಳಲ್ಲಿ ಸಾಕಷ್ಟು ನೀರು ತುಂಬಿಸಿ ನೀರುಣಿಸುವ ಪರಿಸರ ಸ್ನೇಹಿ ಕಾರ್ಯವನ್ನು ರೂಪಿಸಿ. ಅಲ್ಲದೇ ಮಡಿಕೆ, ಪಾತ್ರೆ, ಟಬ್ ಗಳಲ್ಲಿ ನಿಯಮಿತವಾಗಿ ನೀರು ಬದಲಾಯಿಸಿಕೊಂಡು, ಸೊಳ್ಳೆಗಳು ನಿಲ್ಲದಂತೆ ಮುಂಜಾಗೃತಾ ಕ್ರಮವಹಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಎನ್. ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.