ಪ್ರಸ್ತುತ ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಜನ ಸಾಮಾನ್ಯರಿಗೆ ಮಾತ್ರವಲ್ಲದೆ ಪಕ್ಷಿಗಳಿಗೆ ಕೂಡಾ ಕುಡಿಯುವ ನೀರಿನ ಅಭಾವದಿಂದ ತೊಂದರೆಗಳಾಗುವ ಸಾಧ್ಯತೆ ಇರುತ್ತದೆ. ಬೇಸಿಗೆಯಲ್ಲಿ ಉಷ್ಣಾಂಶ ಹೆಚ್ಚಾಗಿದ್ದಾಗ ಪಕ್ಷಿಗಳಿಗೆ ಹೆಚ್ಚಿನ ನೀರಿನ ಅಗತ್ಯವಿದ್ದು ಪಕ್ಷಿಗಳನ್ನು ಬಿಸಿಲಿನ ಶಾಖದ ಹೊಡೆತದಿಂದ ರಕ್ಷಿಸಲು ಅವುಗಳಿಗೆ ಕುಡಿಯುವ ನೀರು ಒದಗಿಸುವುದು ಅತ್ಯವಶ್ಯಕವಾಗಿರುತ್ತದೆ.
ಈ ಹಿನ್ನಲೆಯಲ್ಲಿ ಪಕ್ಷಿ ಸಂಕುಲದ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಪಕ್ಷಿಗಳಿಗೆ ನೀರು ಕುಡಿಯಲು ಅನುಕೂಲವಾಗುವಂತಹ ಮಡಿಕೆ, ಪಾತ್ರೆ, ಟಬ್ ಗಳಲ್ಲಿ ಸಾಕಷ್ಟು ನೀರು ತುಂಬಿಸಿ ನೀರುಣಿಸುವ ಪರಿಸರ ಸ್ನೇಹಿ ಕಾರ್ಯವನ್ನು ರೂಪಿಸಿ. ಅಲ್ಲದೇ ಮಡಿಕೆ, ಪಾತ್ರೆ, ಟಬ್ ಗಳಲ್ಲಿ ನಿಯಮಿತವಾಗಿ ನೀರು ಬದಲಾಯಿಸಿಕೊಂಡು, ಸೊಳ್ಳೆಗಳು ನಿಲ್ಲದಂತೆ ಮುಂಜಾಗೃತಾ ಕ್ರಮವಹಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಎನ್. ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…