ಬೇಸಿಗೆ ಹಿನ್ನೆಲೆ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ- ಜಿಲ್ಲಾಧಿಕಾರಿ ಸೂಚನೆ

ಪ್ರಸ್ತುತ ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಜನ ಸಾಮಾನ್ಯರಿಗೆ ಮಾತ್ರವಲ್ಲದೆ ಪಕ್ಷಿಗಳಿಗೆ ಕೂಡಾ ಕುಡಿಯುವ ನೀರಿನ ಅಭಾವದಿಂದ ತೊಂದರೆಗಳಾಗುವ ಸಾಧ್ಯತೆ ಇರುತ್ತದೆ. ಬೇಸಿಗೆಯಲ್ಲಿ ಉಷ್ಣಾಂಶ ಹೆಚ್ಚಾಗಿದ್ದಾಗ ಪಕ್ಷಿಗಳಿಗೆ ಹೆಚ್ಚಿನ ನೀರಿನ ಅಗತ್ಯವಿದ್ದು ಪಕ್ಷಿಗಳನ್ನು ಬಿಸಿಲಿನ ಶಾಖದ ಹೊಡೆತದಿಂದ ರಕ್ಷಿಸಲು ಅವುಗಳಿಗೆ ಕುಡಿಯುವ ನೀರು ಒದಗಿಸುವುದು ಅತ್ಯವಶ್ಯಕವಾಗಿರುತ್ತದೆ.

ಈ ಹಿನ್ನಲೆಯಲ್ಲಿ ಪಕ್ಷಿ ಸಂಕುಲದ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಪಕ್ಷಿಗಳಿಗೆ ನೀರು ಕುಡಿಯಲು ಅನುಕೂಲವಾಗುವಂತಹ ಮಡಿಕೆ, ಪಾತ್ರೆ, ಟಬ್ ಗಳಲ್ಲಿ ಸಾಕಷ್ಟು ನೀರು ತುಂಬಿಸಿ ನೀರುಣಿಸುವ ಪರಿಸರ ಸ್ನೇಹಿ ಕಾರ್ಯವನ್ನು ರೂಪಿಸಿ. ಅಲ್ಲದೇ ಮಡಿಕೆ, ಪಾತ್ರೆ, ಟಬ್ ಗಳಲ್ಲಿ ನಿಯಮಿತವಾಗಿ ನೀರು ಬದಲಾಯಿಸಿಕೊಂಡು, ಸೊಳ್ಳೆಗಳು ನಿಲ್ಲದಂತೆ ಮುಂಜಾಗೃತಾ ಕ್ರಮವಹಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಎನ್. ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

46 minutes ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

15 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

15 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

16 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

17 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

20 hours ago