ಪ್ರಸ್ತುತ ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಜನ ಸಾಮಾನ್ಯರಿಗೆ ಮಾತ್ರವಲ್ಲದೆ ಪಕ್ಷಿಗಳಿಗೆ ಕೂಡಾ ಕುಡಿಯುವ ನೀರಿನ ಅಭಾವದಿಂದ ತೊಂದರೆಗಳಾಗುವ ಸಾಧ್ಯತೆ ಇರುತ್ತದೆ. ಬೇಸಿಗೆಯಲ್ಲಿ ಉಷ್ಣಾಂಶ ಹೆಚ್ಚಾಗಿದ್ದಾಗ ಪಕ್ಷಿಗಳಿಗೆ ಹೆಚ್ಚಿನ ನೀರಿನ ಅಗತ್ಯವಿದ್ದು ಪಕ್ಷಿಗಳನ್ನು ಬಿಸಿಲಿನ ಶಾಖದ ಹೊಡೆತದಿಂದ ರಕ್ಷಿಸಲು ಅವುಗಳಿಗೆ ಕುಡಿಯುವ ನೀರು ಒದಗಿಸುವುದು ಅತ್ಯವಶ್ಯಕವಾಗಿರುತ್ತದೆ.
ಈ ಹಿನ್ನಲೆಯಲ್ಲಿ ಪಕ್ಷಿ ಸಂಕುಲದ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಪಕ್ಷಿಗಳಿಗೆ ನೀರು ಕುಡಿಯಲು ಅನುಕೂಲವಾಗುವಂತಹ ಮಡಿಕೆ, ಪಾತ್ರೆ, ಟಬ್ ಗಳಲ್ಲಿ ಸಾಕಷ್ಟು ನೀರು ತುಂಬಿಸಿ ನೀರುಣಿಸುವ ಪರಿಸರ ಸ್ನೇಹಿ ಕಾರ್ಯವನ್ನು ರೂಪಿಸಿ. ಅಲ್ಲದೇ ಮಡಿಕೆ, ಪಾತ್ರೆ, ಟಬ್ ಗಳಲ್ಲಿ ನಿಯಮಿತವಾಗಿ ನೀರು ಬದಲಾಯಿಸಿಕೊಂಡು, ಸೊಳ್ಳೆಗಳು ನಿಲ್ಲದಂತೆ ಮುಂಜಾಗೃತಾ ಕ್ರಮವಹಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಎನ್. ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…