ಸವಾರನೊಬ್ಬ ಬೈಕ್ ನ ಸೈಲೆನ್ಸರನ್ನು ಮಾರ್ಪಡುಗೊಳಿಸಿರುವುದಕ್ಕೆ ಮತ್ತು ಸೈಡ್ ಮಿರರ್, ಹಿಂಬದಿ ಇಂಡಿಕೇಟರ್ ಮತ್ತು ಹೊಗೆ ತಪಾಸಣಾ ಪತ್ರ ಹೊಂದಿಲ್ಲದ ಕಾರಣ ಬರೋಬ್ಬರಿ 25,500/- ರೂ. ದಂಡ ತೆತ್ತಿದ್ದಾನೆ. ಮಡಿಕೇರಿ ಮಹದೇವಪೇಟೆಯ ಅಬ್ದುಲ್ ಫಹಿಮ್ (21) ಎಂಬಾತ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಧರ್ ಮತ್ತು ಸಿಬ್ಬಂದಿ ಬಲೆಗೆ ಬಿದ್ದು ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಕಟ್ಟಿದವನಾಗಿದ್ದಾನೆ.
ಡಿ.1ರಂದು ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಧರ್ ಮತ್ತು ಸಿಬ್ಬಂದಿ ಕಾಲೇಜು ರಸ್ತೆಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವ ವಾಹನಗಳನ್ನು ಪರಿಶೀಲಿಸುವ ಕರ್ತವ್ಯದಲ್ಲಿದ್ದ ಸಂದರ್ಭ ದ್ವಿಚಕ್ರ ವಾಹನವೊಂದು ಅತೀ ವೇಗ ಹಾಗೂ ಕರ್ಕಶ ಧ್ವನಿ ಉಂಟು ಮಾಡುತ್ತಾ ಬಂದಿದೆ. ಅದನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ KA 09 – V9114 ನೋಂದಣಿ ಸಂಖ್ಯೆಯ ಸುಜುಕಿ ಸಮುರಾಯಿ ಮೋಟಾರ್ ಸೈಕಲಿನ ಸೈಲೆನ್ಸರನ್ನು ಮಾರ್ಪಡುಗೊಳಿಸಿರುವುದು ಮತ್ತು ಸೈಡ್ ಮಿರರ್, ಹಿಂಬದಿಯ ಇಂಡಿಕೇಟರ್ ಹಾಗೂ ಹೊಗೆ ತಪಾಸಣಾ ಪತ್ರ ಇಲ್ಲದಿರುವುದು ಕಂಡುಬಂದಿದೆ.
ಅದರ ಸವಾರ ಮಡಿಕೇರಿ ಮಹದೇವಪೇಟೆಯ ಅಬ್ದುಲ್ ಫಹಿಮ್ (21) ಎಂಬಾತನ ವಿರುದ್ಧ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಲಂ 281 BNS & 189, 177 & 190(2), 115 CMV ಕಾನೂನು ಅಡಿಯಲ್ಲಿ ಪ್ರಕರಣ ದಾಖಲಿಸಿ ಒಟ್ಟು ರೂ. 25,500/- ದಂಡ ವಿಧಿಸಲಾಗಿದೆ.
*ದಂಡದ ವಿವರ*
1) ಅತೀ ವೇಗ ಮತ್ತು ಅಜಾಗರುಕತೆಯ ವಾಹನ ಚಾಲನೆಗೆ – ರೂ. 10,000/-
2) ಸೆನ್ಸರ್ ಮಾರ್ಪಡುಗೊಳಿಸಿರುವುದು ಮತ್ತು ಹೊಗೆ ತಪಾಸಾಣಾ ಪತ್ರ ಇಲ್ಲದಿರುವುದಕ್ಕೆ ರೂ. 10,000/-
3) ರೇಸಿಂಗ್ ಮತ್ತು ವೇಗದ ಪ್ರಯೋಗಕ್ಕೆ – ರೂ. 5,000/-
4) ಸೈಡ್ ಮಿರರ್ ಮತ್ತು ಹಿಂಬದಿಯ ಇಂಡಿಕೇಟರ್ ಇಲ್ಲದಿರುವುದಕ್ಕೆ ರೂ. 500/-
ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…