Categories: ಕೊಡಗು

ಬೈಕಿನ ಸೈಲೆನ್ಸರ್ ಮಾರ್ಪಡುಗೊಳಿಸಿ ಸಂಚಾರಿ ನಿಯಮ ಉಲ್ಲಂಘನೆ: ಸವಾರನಿಗೆ ಬಿತ್ತು ರೂ 25,500 ಫೈನ್

ಸವಾರನೊಬ್ಬ ಬೈಕ್ ನ ಸೈಲೆನ್ಸರನ್ನು ಮಾರ್ಪಡುಗೊಳಿಸಿರುವುದಕ್ಕೆ ಮತ್ತು ಸೈಡ್ ಮಿರರ್, ಹಿಂಬದಿ ಇಂಡಿಕೇಟರ್ ಮತ್ತು ಹೊಗೆ ತಪಾಸಣಾ ಪತ್ರ ಹೊಂದಿಲ್ಲದ ಕಾರಣ ಬರೋಬ್ಬರಿ 25,500/- ರೂ. ದಂಡ ತೆತ್ತಿದ್ದಾನೆ. ಮಡಿಕೇರಿ ಮಹದೇವಪೇಟೆಯ ಅಬ್ದುಲ್ ಫಹಿಮ್ (21) ಎಂಬಾತ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಧರ್ ಮತ್ತು ಸಿಬ್ಬಂದಿ ಬಲೆಗೆ ಬಿದ್ದು ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಕಟ್ಟಿದವನಾಗಿದ್ದಾನೆ.

ಡಿ.1ರಂದು ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಧರ್ ಮತ್ತು ಸಿಬ್ಬಂದಿ ಕಾಲೇಜು ರಸ್ತೆಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವ ವಾಹನಗಳನ್ನು ಪರಿಶೀಲಿಸುವ ಕರ್ತವ್ಯದಲ್ಲಿದ್ದ ಸಂದರ್ಭ ದ್ವಿಚಕ್ರ ವಾಹನವೊಂದು ಅತೀ ವೇಗ ಹಾಗೂ ಕರ್ಕಶ ಧ್ವನಿ ಉಂಟು ಮಾಡುತ್ತಾ ಬಂದಿದೆ. ಅದನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ KA 09 – V9114 ನೋಂದಣಿ ಸಂಖ್ಯೆಯ ಸುಜುಕಿ ಸಮುರಾಯಿ ಮೋಟಾರ್ ಸೈಕಲಿನ ಸೈಲೆನ್ಸರನ್ನು ಮಾರ್ಪಡುಗೊಳಿಸಿರುವುದು ಮತ್ತು ಸೈಡ್ ಮಿರರ್, ಹಿಂಬದಿಯ ಇಂಡಿಕೇಟರ್ ಹಾಗೂ ಹೊಗೆ ತಪಾಸಣಾ ಪತ್ರ ಇಲ್ಲದಿರುವುದು ಕಂಡುಬಂದಿದೆ.

ಅದರ ಸವಾರ ಮಡಿಕೇರಿ ಮಹದೇವಪೇಟೆಯ ಅಬ್ದುಲ್ ಫಹಿಮ್ (21) ಎಂಬಾತನ ವಿರುದ್ಧ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಲಂ 281 BNS & 189, 177 & 190(2), 115 CMV ಕಾನೂನು ಅಡಿಯಲ್ಲಿ ಪ್ರಕರಣ ದಾಖಲಿಸಿ ಒಟ್ಟು ರೂ. 25,500/- ದಂಡ ವಿಧಿಸಲಾಗಿದೆ.

*ದಂಡದ ವಿವರ*

1) ಅತೀ ವೇಗ ಮತ್ತು ಅಜಾಗರುಕತೆಯ ವಾಹನ ಚಾಲನೆಗೆ – ರೂ. 10,000/-

2) ಸೆನ್ಸರ್ ಮಾರ್ಪಡುಗೊಳಿಸಿರುವುದು ಮತ್ತು ಹೊಗೆ ತಪಾಸಾಣಾ ಪತ್ರ ಇಲ್ಲದಿರುವುದಕ್ಕೆ ರೂ. 10,000/-

3) ರೇಸಿಂಗ್ ಮತ್ತು ವೇಗದ ಪ್ರಯೋಗಕ್ಕೆ – ರೂ. 5,000/-

4) ಸೈಡ್ ಮಿರರ್ ಮತ್ತು ಹಿಂಬದಿಯ ಇಂಡಿಕೇಟರ್ ಇಲ್ಲದಿರುವುದಕ್ಕೆ ರೂ. 500/-
ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Ramesh Babu

Journalist

Recent Posts

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…

1 hour ago

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

4 hours ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

7 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

9 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

20 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

20 hours ago