ಸವಾರನೊಬ್ಬ ಬೈಕ್ ನ ಸೈಲೆನ್ಸರನ್ನು ಮಾರ್ಪಡುಗೊಳಿಸಿರುವುದಕ್ಕೆ ಮತ್ತು ಸೈಡ್ ಮಿರರ್, ಹಿಂಬದಿ ಇಂಡಿಕೇಟರ್ ಮತ್ತು ಹೊಗೆ ತಪಾಸಣಾ ಪತ್ರ ಹೊಂದಿಲ್ಲದ ಕಾರಣ ಬರೋಬ್ಬರಿ 25,500/- ರೂ. ದಂಡ ತೆತ್ತಿದ್ದಾನೆ. ಮಡಿಕೇರಿ ಮಹದೇವಪೇಟೆಯ ಅಬ್ದುಲ್ ಫಹಿಮ್ (21) ಎಂಬಾತ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಧರ್ ಮತ್ತು ಸಿಬ್ಬಂದಿ ಬಲೆಗೆ ಬಿದ್ದು ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಕಟ್ಟಿದವನಾಗಿದ್ದಾನೆ.
ಡಿ.1ರಂದು ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಧರ್ ಮತ್ತು ಸಿಬ್ಬಂದಿ ಕಾಲೇಜು ರಸ್ತೆಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವ ವಾಹನಗಳನ್ನು ಪರಿಶೀಲಿಸುವ ಕರ್ತವ್ಯದಲ್ಲಿದ್ದ ಸಂದರ್ಭ ದ್ವಿಚಕ್ರ ವಾಹನವೊಂದು ಅತೀ ವೇಗ ಹಾಗೂ ಕರ್ಕಶ ಧ್ವನಿ ಉಂಟು ಮಾಡುತ್ತಾ ಬಂದಿದೆ. ಅದನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ KA 09 – V9114 ನೋಂದಣಿ ಸಂಖ್ಯೆಯ ಸುಜುಕಿ ಸಮುರಾಯಿ ಮೋಟಾರ್ ಸೈಕಲಿನ ಸೈಲೆನ್ಸರನ್ನು ಮಾರ್ಪಡುಗೊಳಿಸಿರುವುದು ಮತ್ತು ಸೈಡ್ ಮಿರರ್, ಹಿಂಬದಿಯ ಇಂಡಿಕೇಟರ್ ಹಾಗೂ ಹೊಗೆ ತಪಾಸಣಾ ಪತ್ರ ಇಲ್ಲದಿರುವುದು ಕಂಡುಬಂದಿದೆ.
ಅದರ ಸವಾರ ಮಡಿಕೇರಿ ಮಹದೇವಪೇಟೆಯ ಅಬ್ದುಲ್ ಫಹಿಮ್ (21) ಎಂಬಾತನ ವಿರುದ್ಧ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಲಂ 281 BNS & 189, 177 & 190(2), 115 CMV ಕಾನೂನು ಅಡಿಯಲ್ಲಿ ಪ್ರಕರಣ ದಾಖಲಿಸಿ ಒಟ್ಟು ರೂ. 25,500/- ದಂಡ ವಿಧಿಸಲಾಗಿದೆ.
*ದಂಡದ ವಿವರ*
1) ಅತೀ ವೇಗ ಮತ್ತು ಅಜಾಗರುಕತೆಯ ವಾಹನ ಚಾಲನೆಗೆ – ರೂ. 10,000/-
2) ಸೆನ್ಸರ್ ಮಾರ್ಪಡುಗೊಳಿಸಿರುವುದು ಮತ್ತು ಹೊಗೆ ತಪಾಸಾಣಾ ಪತ್ರ ಇಲ್ಲದಿರುವುದಕ್ಕೆ ರೂ. 10,000/-
3) ರೇಸಿಂಗ್ ಮತ್ತು ವೇಗದ ಪ್ರಯೋಗಕ್ಕೆ – ರೂ. 5,000/-
4) ಸೈಡ್ ಮಿರರ್ ಮತ್ತು ಹಿಂಬದಿಯ ಇಂಡಿಕೇಟರ್ ಇಲ್ಲದಿರುವುದಕ್ಕೆ ರೂ. 500/-
ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…