Categories: ಕೊಡಗು

ಬೈಕಿನ ಸೈಲೆನ್ಸರ್ ಮಾರ್ಪಡುಗೊಳಿಸಿ ಸಂಚಾರಿ ನಿಯಮ ಉಲ್ಲಂಘನೆ: ಸವಾರನಿಗೆ ಬಿತ್ತು ರೂ 25,500 ಫೈನ್

ಸವಾರನೊಬ್ಬ ಬೈಕ್ ನ ಸೈಲೆನ್ಸರನ್ನು ಮಾರ್ಪಡುಗೊಳಿಸಿರುವುದಕ್ಕೆ ಮತ್ತು ಸೈಡ್ ಮಿರರ್, ಹಿಂಬದಿ ಇಂಡಿಕೇಟರ್ ಮತ್ತು ಹೊಗೆ ತಪಾಸಣಾ ಪತ್ರ ಹೊಂದಿಲ್ಲದ ಕಾರಣ ಬರೋಬ್ಬರಿ 25,500/- ರೂ. ದಂಡ ತೆತ್ತಿದ್ದಾನೆ. ಮಡಿಕೇರಿ ಮಹದೇವಪೇಟೆಯ ಅಬ್ದುಲ್ ಫಹಿಮ್ (21) ಎಂಬಾತ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಧರ್ ಮತ್ತು ಸಿಬ್ಬಂದಿ ಬಲೆಗೆ ಬಿದ್ದು ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಕಟ್ಟಿದವನಾಗಿದ್ದಾನೆ.

ಡಿ.1ರಂದು ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಧರ್ ಮತ್ತು ಸಿಬ್ಬಂದಿ ಕಾಲೇಜು ರಸ್ತೆಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವ ವಾಹನಗಳನ್ನು ಪರಿಶೀಲಿಸುವ ಕರ್ತವ್ಯದಲ್ಲಿದ್ದ ಸಂದರ್ಭ ದ್ವಿಚಕ್ರ ವಾಹನವೊಂದು ಅತೀ ವೇಗ ಹಾಗೂ ಕರ್ಕಶ ಧ್ವನಿ ಉಂಟು ಮಾಡುತ್ತಾ ಬಂದಿದೆ. ಅದನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ KA 09 – V9114 ನೋಂದಣಿ ಸಂಖ್ಯೆಯ ಸುಜುಕಿ ಸಮುರಾಯಿ ಮೋಟಾರ್ ಸೈಕಲಿನ ಸೈಲೆನ್ಸರನ್ನು ಮಾರ್ಪಡುಗೊಳಿಸಿರುವುದು ಮತ್ತು ಸೈಡ್ ಮಿರರ್, ಹಿಂಬದಿಯ ಇಂಡಿಕೇಟರ್ ಹಾಗೂ ಹೊಗೆ ತಪಾಸಣಾ ಪತ್ರ ಇಲ್ಲದಿರುವುದು ಕಂಡುಬಂದಿದೆ.

ಅದರ ಸವಾರ ಮಡಿಕೇರಿ ಮಹದೇವಪೇಟೆಯ ಅಬ್ದುಲ್ ಫಹಿಮ್ (21) ಎಂಬಾತನ ವಿರುದ್ಧ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಲಂ 281 BNS & 189, 177 & 190(2), 115 CMV ಕಾನೂನು ಅಡಿಯಲ್ಲಿ ಪ್ರಕರಣ ದಾಖಲಿಸಿ ಒಟ್ಟು ರೂ. 25,500/- ದಂಡ ವಿಧಿಸಲಾಗಿದೆ.

*ದಂಡದ ವಿವರ*

1) ಅತೀ ವೇಗ ಮತ್ತು ಅಜಾಗರುಕತೆಯ ವಾಹನ ಚಾಲನೆಗೆ – ರೂ. 10,000/-

2) ಸೆನ್ಸರ್ ಮಾರ್ಪಡುಗೊಳಿಸಿರುವುದು ಮತ್ತು ಹೊಗೆ ತಪಾಸಾಣಾ ಪತ್ರ ಇಲ್ಲದಿರುವುದಕ್ಕೆ ರೂ. 10,000/-

3) ರೇಸಿಂಗ್ ಮತ್ತು ವೇಗದ ಪ್ರಯೋಗಕ್ಕೆ – ರೂ. 5,000/-

4) ಸೈಡ್ ಮಿರರ್ ಮತ್ತು ಹಿಂಬದಿಯ ಇಂಡಿಕೇಟರ್ ಇಲ್ಲದಿರುವುದಕ್ಕೆ ರೂ. 500/-
ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Ramesh Babu

Journalist

Recent Posts

ಸರ್ಕಾರಗಳ ಸಾಧನೋತ್ಸವ…….

ಸರ್ಕಾರಗಳ ಸಾಧನೋತ್ಸವ....... ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ 8ನೇ ವರ್ಷದ ( 5+3 ) ಸಾಧನಾ ಉತ್ಸವ, ಭಾರತದ…

29 minutes ago

ತಿಪ್ಪೂರು ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…

11 hours ago

ಹಕ್ಕಿಜ್ವರ ಶಂಕೆ: ನವಿಲುಗಳ ಮಾರಣ ಹೋಮ…

ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…

12 hours ago

ಮೇ.21ಕ್ಕೆ ಭೂಸ್ವಾಧೀನ ವಿರೋಧಿಸಿ ಡಿಸಿ ಕಚೇರಿಗೆ ಟ್ರ್ಯಾಕರ್ ಮೆರವಣಿಗೆ

ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ,‌ ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…

13 hours ago

ಸ್ನೇಹಿತನ ಬರ್ತಡೇ ಪಾರ್ಟಿಗೆ ಬಂದಿದ್ದ ಯುವಕ ಈಜುಕೊಳಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್‌ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

14 hours ago

ದಶಕಗಳುರುಳಿದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಲ್ಲ ಜಿಲ್ಲಾ ಕೇಂದ್ರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…

1 day ago