ಸವಾರನೊಬ್ಬ ಬೈಕ್ ನ ಸೈಲೆನ್ಸರನ್ನು ಮಾರ್ಪಡುಗೊಳಿಸಿರುವುದಕ್ಕೆ ಮತ್ತು ಸೈಡ್ ಮಿರರ್, ಹಿಂಬದಿ ಇಂಡಿಕೇಟರ್ ಮತ್ತು ಹೊಗೆ ತಪಾಸಣಾ ಪತ್ರ ಹೊಂದಿಲ್ಲದ ಕಾರಣ ಬರೋಬ್ಬರಿ 25,500/- ರೂ. ದಂಡ ತೆತ್ತಿದ್ದಾನೆ. ಮಡಿಕೇರಿ ಮಹದೇವಪೇಟೆಯ ಅಬ್ದುಲ್ ಫಹಿಮ್ (21) ಎಂಬಾತ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಧರ್ ಮತ್ತು ಸಿಬ್ಬಂದಿ ಬಲೆಗೆ ಬಿದ್ದು ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಕಟ್ಟಿದವನಾಗಿದ್ದಾನೆ.
ಡಿ.1ರಂದು ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಧರ್ ಮತ್ತು ಸಿಬ್ಬಂದಿ ಕಾಲೇಜು ರಸ್ತೆಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವ ವಾಹನಗಳನ್ನು ಪರಿಶೀಲಿಸುವ ಕರ್ತವ್ಯದಲ್ಲಿದ್ದ ಸಂದರ್ಭ ದ್ವಿಚಕ್ರ ವಾಹನವೊಂದು ಅತೀ ವೇಗ ಹಾಗೂ ಕರ್ಕಶ ಧ್ವನಿ ಉಂಟು ಮಾಡುತ್ತಾ ಬಂದಿದೆ. ಅದನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ KA 09 – V9114 ನೋಂದಣಿ ಸಂಖ್ಯೆಯ ಸುಜುಕಿ ಸಮುರಾಯಿ ಮೋಟಾರ್ ಸೈಕಲಿನ ಸೈಲೆನ್ಸರನ್ನು ಮಾರ್ಪಡುಗೊಳಿಸಿರುವುದು ಮತ್ತು ಸೈಡ್ ಮಿರರ್, ಹಿಂಬದಿಯ ಇಂಡಿಕೇಟರ್ ಹಾಗೂ ಹೊಗೆ ತಪಾಸಣಾ ಪತ್ರ ಇಲ್ಲದಿರುವುದು ಕಂಡುಬಂದಿದೆ.
ಅದರ ಸವಾರ ಮಡಿಕೇರಿ ಮಹದೇವಪೇಟೆಯ ಅಬ್ದುಲ್ ಫಹಿಮ್ (21) ಎಂಬಾತನ ವಿರುದ್ಧ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಲಂ 281 BNS & 189, 177 & 190(2), 115 CMV ಕಾನೂನು ಅಡಿಯಲ್ಲಿ ಪ್ರಕರಣ ದಾಖಲಿಸಿ ಒಟ್ಟು ರೂ. 25,500/- ದಂಡ ವಿಧಿಸಲಾಗಿದೆ.
*ದಂಡದ ವಿವರ*
1) ಅತೀ ವೇಗ ಮತ್ತು ಅಜಾಗರುಕತೆಯ ವಾಹನ ಚಾಲನೆಗೆ – ರೂ. 10,000/-
2) ಸೆನ್ಸರ್ ಮಾರ್ಪಡುಗೊಳಿಸಿರುವುದು ಮತ್ತು ಹೊಗೆ ತಪಾಸಾಣಾ ಪತ್ರ ಇಲ್ಲದಿರುವುದಕ್ಕೆ ರೂ. 10,000/-
3) ರೇಸಿಂಗ್ ಮತ್ತು ವೇಗದ ಪ್ರಯೋಗಕ್ಕೆ – ರೂ. 5,000/-
4) ಸೈಡ್ ಮಿರರ್ ಮತ್ತು ಹಿಂಬದಿಯ ಇಂಡಿಕೇಟರ್ ಇಲ್ಲದಿರುವುದಕ್ಕೆ ರೂ. 500/-
ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…