ಬೈಕ್ ಕಳ್ಳತನ ಮಾಡೋದ್ರಲ್ಲಿ ಸೆಂಚುರಿ ಬಾರಿಸಿದ ಖದೀಮ. ಮೂರು ವರ್ಷದಲ್ಲಿ ನೂರು ಬೈಕ್ ಕಳ್ಳತನ ಮಾಡಿದ ಸೆಂಚುರಿ ಸ್ಟಾರ್ ಕಳ್ಳನ ಆಂಧ್ರದ ಬಂಗಾರುಪಾಳ್ಯಂನ ನಿವಾಸಿ ಪ್ರಸಾದ್ ಬಾಬು ಎಂಬಾತನನ್ನು ಕೆ.ಆರ್ ಪುರಂ ಪೊಲೀಸರು ಬಂಧಿಸಿದ್ದಾರೆ.
ದುಬಾರಿ ಬೆಲೆಯ ಬೈಕ್ ಗಳನ್ನೆ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ. ಡೈಲಿ ಸಂಜೆ ಬಸ್ ನಲ್ಲಿ ಬೆಂಗಳೂರಿಗೆ ಬರುತ್ತಿದ್ದ ಆರೋಪಿ, ಕೆ.ಆರ್ ಪುರಂ, ಟಿನ್ ಫ್ಯಾಕ್ಟರಿ, ಮಹದೇವಪುರ ಜನವಸತಿ ಪ್ರದೇಶಗಳಲ್ಲಿ ಮನೆ ಮುಂದೆ ನಿಲ್ಲಿಸಿದ ಬೈಕ್ ಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡಲಾಗುತ್ತಿತ್ತು. ಬಂದ ದಿನವೇ ಬೈಕ್ ಕದ್ದು, ಅದೇ ಬೈಕ್ ನಲ್ಲಿ ಊರಿಗೆ ಎಸ್ಕೇಪ್ ಆಗುತ್ತಿದ್ದನಂತೆ.
ಕದ್ದ ಬೈಕ್ ಗಳನ್ನ 15-20 ಸಾವಿರಕ್ಕೆ ಆಂಧ್ರದಲ್ಲಿ ಮಾರಾಟ ಮಾಡುತ್ತಿದ್ದನಂತೆ. ಬಂದ ಹಣದಲ್ಲಿ ಮೋಜು ಮಸ್ತಿ ಮಾಡ್ತಿದ್ದ ಆರೋಪಿ. ಕೆ ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 25 ಬೈಕ್ ಕದ್ದಿದ್ದ ಆರೋಪಿ. ಆರೋಪಿ ಬಳಿ 20 ರಾಯಲ್ ಎನ್ಫೀಲ್ಡ್ ಬೈಕ್, 30 ಫಲ್ಸರ್ ಬೈಕ್, 40 ಆಕ್ಸಿಸ್ ಹಾಗೂ ಇತರೆ ವಾಹನಗಳು ವಶಕ್ಕೆ ಪಡೆಯಲಾಗಿದೆ. ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…