Categories: ತುಮಕೂರು

ಬೈಕ್ ಕಳ್ಳನ ಬಂಧನ: ₹11.23 ಲಕ್ಷ ಮೌಲ್ಯದ 30 ದ್ವಿಚಕ್ರ ವಾಹನಗಳ ವಶ

ತುಮಕೂರು ನಗರ ಹಾಗೂ ರಾಜ್ಯದ ವಿವಿಧೆಡೆ ಬೈಕ್‌ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಒಟ್ಟು 11.23 ಲಕ್ಷ ರೂ. ಮೌಲ್ಯದ 30 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ವೈಟ್‌ಫೀಲ್ಡ್ ನಿವಾಸಿ ಹಾಗೂ ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ದಾಸರಪಲ್ಲಿಯ ಕುಖ್ಯಾತ ಕಳ್ಳ ಚಿತ್ತಪ್ಪಗಾರಿ ಆನಂದ್‌ ಎಂಬಾತನನ್ನು ಬಂಧಿಸಲಾಗಿದೆ.

ಏಪ್ರಿಲ್ 17ರಂದು ತುಮಕೂರು ನಗರದ ರೈಲು ನಿಲ್ದಾಣ ರಸ್ತೆಯಲ್ಲಿ ಸುಮುಖ ಭಾರದ್ವಾಜ್ ಎಂಬುವರು ನಿಲ್ಲಿಸಿದ್ದ ಹೊಂಡ ಡಿಯೋ ದ್ವಿಚಕ್ರ ವಾಹನವನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಿಲಕ್ ಪಾರ್ಕ್ ಠಾಣೆ ಇನ್‌ಸ್ಪೆಕ್ಟರ್ ಪುರುಷೋತ್ತಮ್, ಹೊಸ ಬಡಾವಣೆ ಠಾಣೆ ಸಬ್‌ಇನ್‌ಸ್ಪೆಕ್ಟರ್‌ಗಳಾದ ಜಿ.ಚೇತನ್ ಕುಮಾರ್, ಮಂಗಳಮ್ಮ, ಎಎಸ್‌ಐ ಸೈಯದ್ ಮುಕ್ತಿಯಾರ್, ಸಿಬ್ಬಂದಿ ಕೆ.ಟಿ.ನಾರಾಯಣ, ನೀಲಕಂಠಯ್ಯ, ಕುಮಾರಸ್ವಾಮಿ, ಟಿ.ಎಚ್.ಮಂಜುನಾಥ, ಸುಚಿತ್ರಾ ಪಾಲೇಕರ್, ಕೆ.ಸಿ.ಚೇತನ, ಮಂಜಪ್ಪ ಮಸಾಲವಾಡ, ಸುನಿಲ್ ಕುಮಾ‌ರ್, ಈಶ್ವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು.

ತನಿಖಾ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಕಳ್ಳನನ್ನು ಬಂಧಿಸಿ, ರಾಜ್ಯದ ವಿವಿಧೆಡೆಗಳಲ್ಲಿ ಕಳವು ಮಾಡಿದ್ದ 30 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

Ramesh Babu

Journalist

Recent Posts

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

12 minutes ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

1 hour ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

13 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

17 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

17 hours ago