ತುಮಕೂರು ನಗರ ಹಾಗೂ ರಾಜ್ಯದ ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಒಟ್ಟು 11.23 ಲಕ್ಷ ರೂ. ಮೌಲ್ಯದ 30 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು ವೈಟ್ಫೀಲ್ಡ್ ನಿವಾಸಿ ಹಾಗೂ ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ದಾಸರಪಲ್ಲಿಯ ಕುಖ್ಯಾತ ಕಳ್ಳ ಚಿತ್ತಪ್ಪಗಾರಿ ಆನಂದ್ ಎಂಬಾತನನ್ನು ಬಂಧಿಸಲಾಗಿದೆ.
ಏಪ್ರಿಲ್ 17ರಂದು ತುಮಕೂರು ನಗರದ ರೈಲು ನಿಲ್ದಾಣ ರಸ್ತೆಯಲ್ಲಿ ಸುಮುಖ ಭಾರದ್ವಾಜ್ ಎಂಬುವರು ನಿಲ್ಲಿಸಿದ್ದ ಹೊಂಡ ಡಿಯೋ ದ್ವಿಚಕ್ರ ವಾಹನವನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತಿಲಕ್ ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಪುರುಷೋತ್ತಮ್, ಹೊಸ ಬಡಾವಣೆ ಠಾಣೆ ಸಬ್ಇನ್ಸ್ಪೆಕ್ಟರ್ಗಳಾದ ಜಿ.ಚೇತನ್ ಕುಮಾರ್, ಮಂಗಳಮ್ಮ, ಎಎಸ್ಐ ಸೈಯದ್ ಮುಕ್ತಿಯಾರ್, ಸಿಬ್ಬಂದಿ ಕೆ.ಟಿ.ನಾರಾಯಣ, ನೀಲಕಂಠಯ್ಯ, ಕುಮಾರಸ್ವಾಮಿ, ಟಿ.ಎಚ್.ಮಂಜುನಾಥ, ಸುಚಿತ್ರಾ ಪಾಲೇಕರ್, ಕೆ.ಸಿ.ಚೇತನ, ಮಂಜಪ್ಪ ಮಸಾಲವಾಡ, ಸುನಿಲ್ ಕುಮಾರ್, ಈಶ್ವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು.
ತನಿಖಾ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಕಳ್ಳನನ್ನು ಬಂಧಿಸಿ, ರಾಜ್ಯದ ವಿವಿಧೆಡೆಗಳಲ್ಲಿ ಕಳವು ಮಾಡಿದ್ದ 30 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.
ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…
ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…