Categories: ತುಮಕೂರು

ಬೈಕ್ ಕಳ್ಳನ ಬಂಧನ: ₹11.23 ಲಕ್ಷ ಮೌಲ್ಯದ 30 ದ್ವಿಚಕ್ರ ವಾಹನಗಳ ವಶ

ತುಮಕೂರು ನಗರ ಹಾಗೂ ರಾಜ್ಯದ ವಿವಿಧೆಡೆ ಬೈಕ್‌ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಒಟ್ಟು 11.23 ಲಕ್ಷ ರೂ. ಮೌಲ್ಯದ 30 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ವೈಟ್‌ಫೀಲ್ಡ್ ನಿವಾಸಿ ಹಾಗೂ ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ದಾಸರಪಲ್ಲಿಯ ಕುಖ್ಯಾತ ಕಳ್ಳ ಚಿತ್ತಪ್ಪಗಾರಿ ಆನಂದ್‌ ಎಂಬಾತನನ್ನು ಬಂಧಿಸಲಾಗಿದೆ.

ಏಪ್ರಿಲ್ 17ರಂದು ತುಮಕೂರು ನಗರದ ರೈಲು ನಿಲ್ದಾಣ ರಸ್ತೆಯಲ್ಲಿ ಸುಮುಖ ಭಾರದ್ವಾಜ್ ಎಂಬುವರು ನಿಲ್ಲಿಸಿದ್ದ ಹೊಂಡ ಡಿಯೋ ದ್ವಿಚಕ್ರ ವಾಹನವನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಿಲಕ್ ಪಾರ್ಕ್ ಠಾಣೆ ಇನ್‌ಸ್ಪೆಕ್ಟರ್ ಪುರುಷೋತ್ತಮ್, ಹೊಸ ಬಡಾವಣೆ ಠಾಣೆ ಸಬ್‌ಇನ್‌ಸ್ಪೆಕ್ಟರ್‌ಗಳಾದ ಜಿ.ಚೇತನ್ ಕುಮಾರ್, ಮಂಗಳಮ್ಮ, ಎಎಸ್‌ಐ ಸೈಯದ್ ಮುಕ್ತಿಯಾರ್, ಸಿಬ್ಬಂದಿ ಕೆ.ಟಿ.ನಾರಾಯಣ, ನೀಲಕಂಠಯ್ಯ, ಕುಮಾರಸ್ವಾಮಿ, ಟಿ.ಎಚ್.ಮಂಜುನಾಥ, ಸುಚಿತ್ರಾ ಪಾಲೇಕರ್, ಕೆ.ಸಿ.ಚೇತನ, ಮಂಜಪ್ಪ ಮಸಾಲವಾಡ, ಸುನಿಲ್ ಕುಮಾ‌ರ್, ಈಶ್ವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು.

ತನಿಖಾ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಕಳ್ಳನನ್ನು ಬಂಧಿಸಿ, ರಾಜ್ಯದ ವಿವಿಧೆಡೆಗಳಲ್ಲಿ ಕಳವು ಮಾಡಿದ್ದ 30 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

12 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

24 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 day ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago