ಬೈಕ್ ಕಳ್ಳನ ಸೆರೆ: ಬಂಧಿತನಿಂದ ಸುಮಾರು 7.40 ಲಕ್ಷ ರೂ.ಗಳ 18 ಬೈಕ್ ವಶ

ಹಾಡಹಗಲೇ ಬೈಕ್ ಗಳನ್ನು ಕದ್ದು ಪರಾರಿಯಾಗುತ್ತಿದ್ದ ಅಂತರ ಜಿಲ್ಲೆಯ ಬೈಕ್ ಕಳ್ಳನನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಹೌಸಿಂಗ್ ಕಾಲೋನಿಯ ನಿವಾಸಿ ಪಿ.ಕೆ.ಭಾಸ್ಕರ್(48) ಬಂಧಿತ ಆರೋಪಿ.

ಆರೋಪಿ ಪಿ.ಕೆ.ಭಾಸ್ಕರ್ ಚಾಲಕನಾಗಿದ್ದು, ಮೇ ತಿಂಗಳ 21ರಂದು ನಗರದ ಕೃಷ್ಣಮೂರ್ತಿ ಎಂಬುವರು ತಮ್ಮ ಬೈಕ್ ನ್ನು ನಗರಸಭೆ ಆವರಣದಲ್ಲಿ ನಿಲ್ಲಿಸಿ ಕಚೇರಿ ಒಳಗೆ ಹೋಗಿದ್ದರು. ಬರುವಷ್ಟರಲ್ಲಿ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬಳಿಕ ಬೈಕ್ ಕಳ್ಳನ ಪತ್ತೆಗೆ ಎಸ್ಪಿ ಕುಶಲ್ ಚೌಕೈ ಎಎಸ್ಪಿ ಬಿ.ಜಗನ್ನಾಥ್ ರೈ, ಡಿವೈಎಸ್ಪಿ ಎಸ್.ಶಿವಕುಮಾರ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಮಂಜುನಾಥ.ಎಂ, ಪಿಎಸ್‌ಐ ಅಮರ್ ಎಸ್.ಎಂ., ಪಿಎಸ್‌ಐ ರತ್ನಾಬಾಯಿ, ಸಿಬ್ಬಂದಿ ಲೋಕೇಶ್, ಫಕೀರಪ್ಪ ಗೊಂದಿ, ಮಧುಸೂದನ್, ಲಕ್ಷ್ಮಣ, ಆಯುಬ್ ಮುಲಾ, ನರೇಂದ್ರ ಕುಮಾರ್, ಜಿಲ್ಲಾ ಪೊಲೀಸ್ ಕಚೇರಿ ತಾಂತ್ರಿಕ ಸಿಬ್ಬಂದಿ ರವೀಂದ್ರ, ಮುನಿಕೃಷ್ಣ ತಂಡವು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

ಆರೋಪಿ ವಿರುದ್ದ ತುಮಕೂರು, ದೇವನಹಳ್ಳಿ, ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಬಂಧಿತನಿಂದ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು 7,40,000 ರೂ.ನ ವಿವಿಧ ಕಂಪನಿಯ 18 ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ.

Ramesh Babu

Journalist

Recent Posts

ದಶಕಗಳುರುಳಿದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಲ್ಲ ಜಿಲ್ಲಾ ಕೇಂದ್ರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…

2 hours ago

ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು ಸಹ ಅಷ್ಟೇ ಸಂಕೀರ್ಣ….

ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…

2 hours ago

ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ

ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…

12 hours ago

ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…

13 hours ago

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

18 hours ago

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

19 hours ago