ಬೈಕ್ ಕಳ್ಳನ ಸೆರೆ: ಬಂಧಿತನಿಂದ ಸುಮಾರು 7.40 ಲಕ್ಷ ರೂ.ಗಳ 18 ಬೈಕ್ ವಶ

ಹಾಡಹಗಲೇ ಬೈಕ್ ಗಳನ್ನು ಕದ್ದು ಪರಾರಿಯಾಗುತ್ತಿದ್ದ ಅಂತರ ಜಿಲ್ಲೆಯ ಬೈಕ್ ಕಳ್ಳನನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಹೌಸಿಂಗ್ ಕಾಲೋನಿಯ ನಿವಾಸಿ ಪಿ.ಕೆ.ಭಾಸ್ಕರ್(48) ಬಂಧಿತ ಆರೋಪಿ.

ಆರೋಪಿ ಪಿ.ಕೆ.ಭಾಸ್ಕರ್ ಚಾಲಕನಾಗಿದ್ದು, ಮೇ ತಿಂಗಳ 21ರಂದು ನಗರದ ಕೃಷ್ಣಮೂರ್ತಿ ಎಂಬುವರು ತಮ್ಮ ಬೈಕ್ ನ್ನು ನಗರಸಭೆ ಆವರಣದಲ್ಲಿ ನಿಲ್ಲಿಸಿ ಕಚೇರಿ ಒಳಗೆ ಹೋಗಿದ್ದರು. ಬರುವಷ್ಟರಲ್ಲಿ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬಳಿಕ ಬೈಕ್ ಕಳ್ಳನ ಪತ್ತೆಗೆ ಎಸ್ಪಿ ಕುಶಲ್ ಚೌಕೈ ಎಎಸ್ಪಿ ಬಿ.ಜಗನ್ನಾಥ್ ರೈ, ಡಿವೈಎಸ್ಪಿ ಎಸ್.ಶಿವಕುಮಾರ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಮಂಜುನಾಥ.ಎಂ, ಪಿಎಸ್‌ಐ ಅಮರ್ ಎಸ್.ಎಂ., ಪಿಎಸ್‌ಐ ರತ್ನಾಬಾಯಿ, ಸಿಬ್ಬಂದಿ ಲೋಕೇಶ್, ಫಕೀರಪ್ಪ ಗೊಂದಿ, ಮಧುಸೂದನ್, ಲಕ್ಷ್ಮಣ, ಆಯುಬ್ ಮುಲಾ, ನರೇಂದ್ರ ಕುಮಾರ್, ಜಿಲ್ಲಾ ಪೊಲೀಸ್ ಕಚೇರಿ ತಾಂತ್ರಿಕ ಸಿಬ್ಬಂದಿ ರವೀಂದ್ರ, ಮುನಿಕೃಷ್ಣ ತಂಡವು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

ಆರೋಪಿ ವಿರುದ್ದ ತುಮಕೂರು, ದೇವನಹಳ್ಳಿ, ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಬಂಧಿತನಿಂದ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು 7,40,000 ರೂ.ನ ವಿವಿಧ ಕಂಪನಿಯ 18 ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

12 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

21 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

22 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago