ಹಾಡಹಗಲೇ ಬೈಕ್ ಗಳನ್ನು ಕದ್ದು ಪರಾರಿಯಾಗುತ್ತಿದ್ದ ಅಂತರ ಜಿಲ್ಲೆಯ ಬೈಕ್ ಕಳ್ಳನನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಹೌಸಿಂಗ್ ಕಾಲೋನಿಯ ನಿವಾಸಿ ಪಿ.ಕೆ.ಭಾಸ್ಕರ್(48) ಬಂಧಿತ ಆರೋಪಿ.
ಆರೋಪಿ ಪಿ.ಕೆ.ಭಾಸ್ಕರ್ ಚಾಲಕನಾಗಿದ್ದು, ಮೇ ತಿಂಗಳ 21ರಂದು ನಗರದ ಕೃಷ್ಣಮೂರ್ತಿ ಎಂಬುವರು ತಮ್ಮ ಬೈಕ್ ನ್ನು ನಗರಸಭೆ ಆವರಣದಲ್ಲಿ ನಿಲ್ಲಿಸಿ ಕಚೇರಿ ಒಳಗೆ ಹೋಗಿದ್ದರು. ಬರುವಷ್ಟರಲ್ಲಿ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬಳಿಕ ಬೈಕ್ ಕಳ್ಳನ ಪತ್ತೆಗೆ ಎಸ್ಪಿ ಕುಶಲ್ ಚೌಕೈ ಎಎಸ್ಪಿ ಬಿ.ಜಗನ್ನಾಥ್ ರೈ, ಡಿವೈಎಸ್ಪಿ ಎಸ್.ಶಿವಕುಮಾರ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಮಂಜುನಾಥ.ಎಂ, ಪಿಎಸ್ಐ ಅಮರ್ ಎಸ್.ಎಂ., ಪಿಎಸ್ಐ ರತ್ನಾಬಾಯಿ, ಸಿಬ್ಬಂದಿ ಲೋಕೇಶ್, ಫಕೀರಪ್ಪ ಗೊಂದಿ, ಮಧುಸೂದನ್, ಲಕ್ಷ್ಮಣ, ಆಯುಬ್ ಮುಲಾ, ನರೇಂದ್ರ ಕುಮಾರ್, ಜಿಲ್ಲಾ ಪೊಲೀಸ್ ಕಚೇರಿ ತಾಂತ್ರಿಕ ಸಿಬ್ಬಂದಿ ರವೀಂದ್ರ, ಮುನಿಕೃಷ್ಣ ತಂಡವು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.
ಆರೋಪಿ ವಿರುದ್ದ ತುಮಕೂರು, ದೇವನಹಳ್ಳಿ, ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತನಿಂದ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು 7,40,000 ರೂ.ನ ವಿವಿಧ ಕಂಪನಿಯ 18 ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…