ಹಾಡಹಗಲೇ ಬೈಕ್ ಗಳನ್ನು ಕದ್ದು ಪರಾರಿಯಾಗುತ್ತಿದ್ದ ಅಂತರ ಜಿಲ್ಲೆಯ ಬೈಕ್ ಕಳ್ಳನನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಹೌಸಿಂಗ್ ಕಾಲೋನಿಯ ನಿವಾಸಿ ಪಿ.ಕೆ.ಭಾಸ್ಕರ್(48) ಬಂಧಿತ ಆರೋಪಿ.
ಆರೋಪಿ ಪಿ.ಕೆ.ಭಾಸ್ಕರ್ ಚಾಲಕನಾಗಿದ್ದು, ಮೇ ತಿಂಗಳ 21ರಂದು ನಗರದ ಕೃಷ್ಣಮೂರ್ತಿ ಎಂಬುವರು ತಮ್ಮ ಬೈಕ್ ನ್ನು ನಗರಸಭೆ ಆವರಣದಲ್ಲಿ ನಿಲ್ಲಿಸಿ ಕಚೇರಿ ಒಳಗೆ ಹೋಗಿದ್ದರು. ಬರುವಷ್ಟರಲ್ಲಿ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬಳಿಕ ಬೈಕ್ ಕಳ್ಳನ ಪತ್ತೆಗೆ ಎಸ್ಪಿ ಕುಶಲ್ ಚೌಕೈ ಎಎಸ್ಪಿ ಬಿ.ಜಗನ್ನಾಥ್ ರೈ, ಡಿವೈಎಸ್ಪಿ ಎಸ್.ಶಿವಕುಮಾರ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಮಂಜುನಾಥ.ಎಂ, ಪಿಎಸ್ಐ ಅಮರ್ ಎಸ್.ಎಂ., ಪಿಎಸ್ಐ ರತ್ನಾಬಾಯಿ, ಸಿಬ್ಬಂದಿ ಲೋಕೇಶ್, ಫಕೀರಪ್ಪ ಗೊಂದಿ, ಮಧುಸೂದನ್, ಲಕ್ಷ್ಮಣ, ಆಯುಬ್ ಮುಲಾ, ನರೇಂದ್ರ ಕುಮಾರ್, ಜಿಲ್ಲಾ ಪೊಲೀಸ್ ಕಚೇರಿ ತಾಂತ್ರಿಕ ಸಿಬ್ಬಂದಿ ರವೀಂದ್ರ, ಮುನಿಕೃಷ್ಣ ತಂಡವು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.
ಆರೋಪಿ ವಿರುದ್ದ ತುಮಕೂರು, ದೇವನಹಳ್ಳಿ, ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತನಿಂದ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು 7,40,000 ರೂ.ನ ವಿವಿಧ ಕಂಪನಿಯ 18 ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…